8:39 AM Sunday23 - August 2026
ಬ್ರೇಕಿಂಗ್ ನ್ಯೂಸ್
ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್…

ಇತ್ತೀಚಿನ ಸುದ್ದಿ

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದ ಎಳನೀರು ವಾಹನದ ಚಾಲಕನ ಮೇಲೆ ಕೇಸ್; ಚಾಲಕನಿಂದಲೇ ಕಸ ತೆರವು

02/07/2024, 21:19

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಾರ್ಮಾಡಿ ಘಾಟಿಯಲ್ಲಿ ಕಸ ಎಸೆದು ಹೋಗಿದ್ದ ವಾಹನವನ್ನು ಪತ್ತೆ ಹಚ್ಚಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿದ ಪ್ರಕರಣ ಬಯಲಾಗಿದೆ.ಚಾರ್ಮಾಡಿ ಘಾಟಿಯಲ್ಲಿ ಗಸ್ತು ತಿರುಗುತ್ತಿದ್ದ ಬಣಕಲ್ ಪೊಲೀಸ್ ಸಬ್ ಇನ್ ಸ್ಪೆಕ್ಚರ್ ಡಿ.ವಿ ರೇಣುಕಾ ಮಾತನಾಡಿ’ ಚಾರ್ಮಾಡಿ ಘಾಟಿಯಲ್ಲಿ ಮಂಗಳವಾರ ಹಾಸನ ಮೂಲದ ಎಳೆನೀರು ವಾಹನದ ಚಾಲಕ ವಾಹನದಲ್ಲಿದ್ದ ಕಸವನ್ನು ಘಾಟಿಯಲ್ಲಿ ಬಿಸಾಕಿ ಮಂಗಳೂರು ಭಾಗದಿಂದ ಕೊಟ್ಟಿಗೆಹಾರ ಕಡೆಗೆ ತೆರಳಿದ್ದ. ಅದರ ಜಾಡು ಹಿಡಿದು ಚಾರ್ಮಾಡಿ ಘಾಟಿಗೆ ಗಸ್ತಿನಲ್ಲಿದ್ದ ಪಿಎಸ್ ಐ ವಾಹನವನ್ನು ಗೇಟ್ ನಲ್ಲಿ ಹಿಡಿದು ವಾಪಾಸ್ ಕರೆ ತಂದು ಅದೇ ಕಸವನ್ನು ತುಂಬಿಸಿ ಚಾಲಕನಿಗೆ ಬಣಕಲ್ ಠಾಣೆಯಲ್ಲಿ ಕೆಪಿ ಆಕ್ಟ್ ಪ್ರಕಾರ ಕೇಸು ದಾಖಲಿಸಿ ದಂಡ ವಿಧಿಸಿ ಕಸವನ್ನು ಅಲ್ಲಿಂದ ಅವರಿಂದಲೇ ತೆರವು ಗೊಳಿಸಿ ಚಾಲಕನಿಗೆ ತಾನು ಮಾಡಿದ ತಪ್ಪಿನ ಅರಿವು ಮೂಡಿಸಿ ಸ್ವಚ್ಚತೆಯ ಬಗ್ಗೆ ಜಾಗೃತಿ ಮೂಡಿಸಲಾಯಿತು.

ಇದರಿಂದ ಇತರ ವಾಹನದವರು ಈ ರೀತಿ ಮಾಡದಂತೆ ಜಾಗೃತಿ ಮೂಡಿಸಿದ ಪೊಲೀಸರ ಕ್ರಮವನ್ನು ಸಾರ್ವಜನಿಕರು ಶ್ಲಾಘಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು