12:41 AM Thursday23 - July 2026
ಬ್ರೇಕಿಂಗ್ ನ್ಯೂಸ್
ಕಡೂರು | ತೆಂಗಿನಕಾಯಿ ಕದ್ದ ಆರೋಪ: ಮಹಿಳೆಯ ಬಟ್ಟೆ ಹರಿದು ಮೂವರು ಪುರುಷರಿಂದ… ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಖಂಡಿಸಿ ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ಆಕ್ರೋಶ: 3… ಶಾಸಕ ಪೊನ್ನಣ್ಣ ಕೋರಿಕೆ‌: ಭಾಗಮಂಡಲ ಮೇಲ್ಸೇತುವೆ ಸುತ್ತಲಿನ ಕಾಮಗಾರಿಗೆ 3 ಕೋಟಿ ಅನುದಾನ… ಮುಖ್ಯಮಂತ್ರಿಗಳ ಕಾರ್ಯದರ್ಶಿ ಆಗಿ ಕುಶಾಲನಗರದ ಎಸ್. ಎಸ್. ನಕುಲ್ ನೇಮಕ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನ: ಕಾಮುಕನಿಗೆ ಗ್ರಾಮಸ್ಥರ ಧರ್ಮದೇಟು; ಪೊಲೀಸ್ ವಶಕ್ಕೆ ವಂದೇ ಮಾತರಂ ಗೀತೆಗೆ ಹೊಸ ರೂಲ್ಸ್: ಸಂಸತ್ ಮುಂಗಾರು ಅಧಿವೇಶನದಲ್ಲಿ ಮಸೂದೆ ಮಂಡನೆ ತೀರ್ಥಹಳ್ಳಿ | ಗುಂಡುಗದ್ದೆ ಬಳಿ ಆಟವಾಡುತ್ತಾ ರಸ್ತೆಗೆ ಬಂದ ಮಗು: ಕಾರು ಡಿಕ್ಕಿಯಾಗಿ… ಧಾರವಾಡ ಟು ಬೆಂಗಳೂರು: ಲಾರಿಯಲ್ಲಿ ಸಾಗಿಸುತ್ತಿದ್ದ 100ಕ್ಕೂ ಹೆಚ್ಚು ಗೋವುಗಳ ಮಾಂಸ ವಶ Mangaluru | ವೆನ್ಲಾಕ್ ಸರಕಾರಿ ಆಸ್ಪತ್ರೆಗೆ ಆರೋಗ್ಯ ಸಚಿವ ಯು.ಟಿ. ಖಾದರ್ ಭೇಟಿ:…

ಇತ್ತೀಚಿನ ಸುದ್ದಿ

ಕೇಂದ್ರ ಸರಕಾರದ ಭಾರತ್ ರೈಸ್ ಮಾರಾಟ ತಾತ್ಕಾಲಿಕ ಸ್ಥಗಿತ: ಭಾರೀ ಬೇಡಿಕೆಯಿತ್ತು ಕೆಜಿಗೆ 29 ರೂ.ಗೆ ಸಿಗುತ್ತಿದ್ದ ಅಕ್ಕಿಗೆ

04/07/2024, 17:14

ನವದೆಹಲಿ(reporterkarnataka.com): ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದ ಎಲ್ಲಾ ಜನರಿಗೆ ಕಡಿಮೆ ಬೆಲೆಯಲ್ಲಿ ಅಕ್ಕಿ ವಿತರಿಸುವ ನಿಟ್ಟಿನಲ್ಲಿ ಕಳೆದ ಫೆಬ್ರವರಿಯಲ್ಲಿ ಆರಂಭಿಸಿದ್ದ ಭಾರತ್‌ ರೈಸ್‌ ಅಕ್ಕಿ ಮಾರಾಟವನ್ನು ಜುಲೈ ತಿಂಗಳಿನಿಂದ ತಾತ್ಕಾಲಿಕವಾಗಿ ಸ್ಥಗಿತ ಮಾಡಲಾಗಿದೆ.
ಕೆಜಿಗೆ 29 ರೂ.ಗಳ ಈ ಅಕ್ಕಿಗೆ ಬಹಳ ಬೇಡಿಕೆ ಇತ್ತು. ಆಧಾರ್ ಕಾರ್ಡ್ ನಂಬರ್ ಹೇಳಿ 10 ಕೆಜಿಯ ಅಕ್ಕಿ ಬ್ಯಾಗನ್ನು ಪಡೆಯಬಹುದಾಗಿತ್ತು.
ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಈ ಅಕ್ಕಿ ಮತದಾರರನ್ನು ಸೆಳೆದಿತ್ತು. 29 ರೂ.ಗೆ 1 ಕೆಜಿ ಅಕ್ಕಿ, 27.50 ರೂ.ಗೆ 1 ಕೆಜಿ ಗೋಧಿ ಹಿಟ್ಟು, 60 ರೂ.ಗೆ 1 ಕೆಜಿ ಕಡಲೆ ಬೆಳೆ ಮಾರಾಟ ಮಾಡಲಾಗುತ್ತಿತ್ತು.
ಮೊಬೈಲ್‌ ವ್ಯಾನ್‌ ಮೂಲಕ ಅಕ್ಕಿ, ಬೇಳೆಯನ್ನು ಗ್ರಾಹಕರಿಗೆ ನೀಡಲಾಗುತ್ತಿತ್ತು. ಕೇಂದ್ರ ಸರಕಾರದ ಪ್ರಕಾರ ದಾಸ್ತಾನುಗಳು ಈಗ ಮುಗಿದಿದ್ದು, ಪೂರೈಕೆಯನ್ನು ಸ್ಥಗಿತ ಮಾಡಲಾಗಿದೆ.
ಇದುವರೆಗೂ 5 ಸಾವಿರ ಟನ್ ಭಾರತ್ ರೈಸ್ ಮಾರಾಟ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು