7:10 AM Sunday6 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ಬಂಟ್ವಾಳ ಲಯನ್ಸ್ ಪದಗ್ರಹಣ: ರಾಧಾಕೃಷ್ಣ ಬಂಟ್ವಾಳ್ ಅಧ್ಯಕ್ಷ

04/07/2024, 21:00

ಬಂಟ್ವಾಳ(reporterkarnataka.com): ಬಂಟ್ವಾಳ ಲಯನ್ಸ್ ಕ್ಲಬ್ ಮತ್ತು ಲಿಯೋ ಕ್ಲಬ್ ಬಂಟ್ವಾಳ ಇದರ 2024-25ನೇ ಸಾಲಿನ ಪದಗ್ರಹಣ ಸಮಾರಂಭ ಬಿ.ಸಿ. ರೋಡಿನ ಲಯನ್ಸ್ ಸೇವಾ ಮಂದಿರದಲ್ಲಿ ಜರಗಿತು.

ಪೂರ್ವ ಜಿಲ್ಲಾ ಗವರ್ನರ್ ಜಿ.ಶ್ರೀನಿವಾಸ್ ಪದಗ್ರಹಣ ನೆರವೇರಿಸಿ ಮಾತನಾಡಿ ಸೇವಾ ಸಂಸ್ಥೆಗಳಲ್ಲಿ ತೊಡಗಿಸಿಕೊಂಡು ಜನರ ಸೇವೆ ಮಾಡಿದಾಗ ಜೀವನ ಸಾರ್ಥಕಗೊಳಿಸಬೇಕು ಎಂದರು.
ಈ ಸಂದರ್ಭದಲ್ಲಿ ಲಯನ್ಸ್ ಪಾಲನಾ ಕೇಂದ್ರದ ವಿಶೇಷ ಚೇತನ ಮಕ್ಕಳಿಗೆ ಸಮವಸ್ತ್ರ ವಿತರಣೆ, ಅರ್ಹರಿಗೆ ಆರ್ಥಿಕ ಸಹಾಯ, ಸಾಧಕ ವಿದ್ಯಾರ್ಥಿಗಳಿಗೆ ಅಭಿನಂದನೆ, ಕ್ಲಬ್ ಡೈರೆಕ್ಟರಿ ಬಿಡುಗಡೆ ಕಾರ್ಯಕ್ರಮ ನಡೆಯಿತು.
ಮುಖ್ಯ ಅತಿಥಿಯಾಗಿ ಜಿಲ್ಲಾ ಪೂರ್ವ ಗವರ್ನರ್ ಎಸ್. ಸಂಜಿತ್ ನೂತನ ಸದಸ್ಯರಿಗೆ ಪ್ರಮಾಣ ವಚನ ಬೋಧಿಸಿದರು.
ನೂತನ ಅಧ್ಯಕ್ಷ ರಾಧಾಕೃಷ್ಣ ಬಂಟ್ವಾಳ ಮಾತನಾಡಿ ಸಂಘಟನೆ ಶಕ್ತಿಯಾಗಿ ರೂಪುಗೊಳ್ಳಲು ಸದಸ್ಯರ ಸಹಕಾರ ಅಗತ್ಯ.ಮುಂದಿನ ವಾರ್ಷಿಕ ಯೋಜನೆಯಂತೆ ಸಮಾಜಮುಖಿ ಸೇವಾಕಾರ್ಯ ನಡೆಸುವುದಾಗಿ ತಿಳಿಸಿದರು.
ಮಾಜಿ ಚೆಯರ್ ಮೇನ್ ವಸಂತ ಕುಮಾರ್‌ ಶೆಟ್ಟಿ, ಪ್ರಾಂತೀಯ ಅಧ್ಯಕ್ಷ ರಮಾನಂದ ನೂಜಿಪ್ಪಾಡಿ, ವಿವಿಧ ಪದಾಧಿಕಾರಿಗಳಾದ ಸುಧಾಕರ ಶೆಟ್ಟಿ, ಡೊನಾಲ್ಡ್ ಬಂಟ್ವಾಳ, ದೇವಪ್ಪ ಪೂಜಾರಿ, ಖುಶಿ ಶೆಟ್ಟಿ, ಸ್ಪಟಿಕ ಆಚಾರ್ಯ ಇದ್ದರು.
ಸ್ಥಾಪಕಾಧ್ಯಕ್ಷ ಡಾ.ವಸಂತ ಬಾಳಿಗ, ಶ್ರೀನಿವಾಸ್ ಮೆಲ್ಕಾರ್, ದಾಮೋದರ ಬಿಎಂ, ತಪೋಧನ ಶೆಟ್ಟಿ, ಡಾ.ಧೀರಜ್ ಹೆಬ್ರಿ,ಸುಧಾಕರ ಆಚಾರ್ಯ ಮೊದಲಾದವರಿದ್ದರು.
ನಿರ್ಗಮನ‌ ಅಧ್ಯಕ್ಷ ಪ್ರಶಾಂತ ಕೋಟ್ಯಾನ್ ಸ್ವಾಗತಿಸಿದರು. ಉಮೇಶ ಆಚಾರ್ಯ ಪರಿಚಯಿಸಿದರು. ನೂತನ ಕಾರ್ಯದರ್ಶಿ ದೇವಿಕಾ ದಾಮೋದರ್ ವಂದಿಸಿದರು. ಡಾ.ದಿವ್ಯ ಶೆಟ್ಟಿ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು