11:55 AM Wednesday9 - September 2026
ಬ್ರೇಕಿಂಗ್ ನ್ಯೂಸ್
ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ

ಇತ್ತೀಚಿನ ಸುದ್ದಿ

ಒತ್ತುವರಿ ತೆರವು ಮಾಡಿದ ಜಮೀನುಗಳಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡಿ: ಸಾಮಾಜಿಕ ಕಾರ್ಯಕರ್ತ ಉಮೇಶ ಕೆ. ಮುದ್ನಾಳ ಒತ್ತಾಯ

05/07/2024, 21:28

ಶಿವು ರಾಠೋಡ ಹುಣಸಗಿ ಯಾದಗಿರಿ

info.reporterkarnataka@gmal.com

ಯಾದಗಿರಿ ಜಿಲ್ಲೆಯ ವಡಗೇರಿ ತಾಲ್ಲೂಕಿನ ಸುಗೂರು ಮತ್ತು ಗೋಡಿಹಾಳ ಗ್ರಾಮಗಳಲ್ಲಿ ಅರಣ್ಯ ಮತ್ತು ಗೈರಾಣಿಗೆ ಸೇರಿದ ಸುಮಾರು 95 ಎಕರೆ ಜಮೀನು ಅತಿಕ್ರಮ ಒತ್ತುವರಿ ತೆರವು ಮಾಡಿದ ಜಾಗೆಯಲ್ಲಿ ಸಸಿಗಳನ್ನು ನೆಡುವ ಮೂಲಕ ಒತ್ತುವರಿಯಿಂದ ರಕ್ಷಣೆ ಹಾಗೂ ಪರಿಸರ ಸಂರಕ್ಷಣೆಯಾಗುತ್ತದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಒತ್ತಾಯಿಸಿದ್ದಾರೆ.


ಈ ಕುರಿತು ಹೇಳಿಕೆ ನೀಡಿರುವ ಅವರು, ಜಿಲ್ಲಾಧಿಕಾರಿಗಳು ವಡಗೇರಿ ತಾಲ್ಲೂಕಿನ ಅಗ್ನಿಹಾಳ ಗ್ರಾಮದಲ್ಲಿ ಕಂದಾಯ ದಿನಾಚರಣೆ ಅಂಗವಾಗಿ ಒತ್ತುವರಿ ತೆರವು ಮಾಡಿ ಆ ಸ್ಥಳದಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡಿದರು. ಆದರೆ ಇದೇ ಮಾದರಿಯಲ್ಲಿ ಹೋರಾಟದ ಮೂಲಕ ಒತ್ತುವರಿ ಜಾಗೆ ತೆರವು ಮಾಡಿಸಿದ ಸುಗೂರದಲ್ಲಿ 47 ಎಕರೆ, ಗೋಡಿಹಾಳದಲ್ಲಿ 48 ಎಕರೆ ಸೇರಿ ಒಟ್ಟು 95 ಎಕರೆ ಜಾಗೆಯಲ್ಲಿಯೂ ವಿವಿಧ ತಳಿಯ ಸಸಿ ನೆಡುವ ಕಾರ್ಯಕ್ರಮ ಮಾಡುವಂತೆ ಒತ್ತಾಯಿಸಿದ್ದಾರೆ.
ಇದರಿಂದ ಒತ್ತುವರಿ ತೆರವು ಮಾಡಿದ ಜಮೀನು ರಕ್ಷಣೆಯೂ ಆಗುತ್ತದೆ ಬಿಸಿಲಿನ ತಾಪಕ್ಕೆ ಈಡಾಗಿರುವ ಈ ಪ್ರದೇಶದಲ್ಲಿ ಅರಣ್ಯ ಬೆಳೆಸಿದಂತೆಯೂ ಆಗುತ್ತದೆ. ಇದಕ್ಕೆ ಅರಣ್ಯ ಇಲಾಖೆಯ ಸಹಯೋಗದಲ್ಲಿ ಕಾರ್ಯಕ್ರಮ ರೂಪಿಸಬೇಕೆಂದು ಅವರು ಜಿಲ್ಲಾಡಳಿತಕ್ಕೆ ಒತ್ತಾಯಿಸಿದ್ದಾರೆ.
ಮಳೆಗಾಲ ಆರಂಭವಾಗಿರುವುದರಿಂದ ಇಗಲೇ ಕಾರ್ಯಕ್ರಮ ಮಾಡುವುದು ಸೂಕ್ತವಾಗಿದೆ. ಕೂಡಲೇ ಕಾರ್ಯಪ್ರವೃತ್ತರಾಗಿ ಒತ್ತುವರಿ ಜಾಗೆಯಲ್ಲಿ ಪರಿಸರ ರಕ್ಷಣೆ ಕಾರ್ಯಕ್ರಮ ಮಾಡಬೇಕೆಂದು ಅವರು ಒತ್ತಾಯಿಸಿದ್ದಾರೆ.
ಈ ಹಿಂದೆ ನಮ್ಮ ಹೋರಾಟಕ್ಕೆ ಎಚ್ಚೆತ್ತು ಪೊಲೀಸ್ ಬಂದೋಬಸ್ತ್ ನಲ್ಲಿ ಅರಣ್ಯ ಇಲಾಖೆಯವರ ಸಮ್ಮುಖದಲ್ಲಿಯೇ ಎರಡು ಗ್ರಾಮಗಳಲ್ಲಿ ಸರ್ಕಾರಿ ಜಮೀನು ಒತ್ತುವರಿ ತೆರವು ಮಾಡಿದ್ದು ಇಂತಹ ಜಾಗೆಯಲ್ಲಿ ಸಸಿ ನೆಡುವ ಕಾರ್ಯಕ್ರಮ ಮಾಡುವುದರಿಂದ ಒತ್ತುವರಿ ಆಗದಂತೆ ನೋಡಿಕೊಳ್ಳಲು ಮತ್ತು ಅರಣ್ಯ ಬೆಳೆಸಿದಂತೆ ಆಗುತ್ತದೆ ಎಂದು ಅವರು ಜಿಲ್ಲಾಡಳಿತಕ್ಕೆ ಸಲಹೆ ನೀಡಿದ್ದಾರೆ.


ಈ ಹಿಂದೆ ಒತ್ತುವರಿ ತೆರವು ಮಾಡಿ ನಾಮಫಲಕ ಅಳವಡಿಸಿದ್ದರೂ ಅವುಗಳನ್ನು ಬೀಳಿಸಿ ಮತ್ತೆ ಅತಿಕ್ರಮಣ ಮಾಡುವ ಕೆಲಸಗಳು ನಡೆಯುತ್ತಿದ್ದು ಜಿಲ್ಲಾಧಿಕಾರಿಗಳು ಕೂಡಲೇ ಕ್ರಮ ವಹಿಸಬೇಕಿದೆ.

-ಉಮೇಶ ಕೆ. ಮುದ್ನಾಳ,
ಸಾಮಾಜಿಕ ಹೋರಾಟಗಾರು
ಯಾದಗಿರಿ

ಇತ್ತೀಚಿನ ಸುದ್ದಿ

ಜಾಹೀರಾತು