8:15 AM Friday6 - February 2026
ಬ್ರೇಕಿಂಗ್ ನ್ಯೂಸ್
ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,… ಕಂಬನಿ ನಡುವೆ ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ ಸಿ.ಜೆ ರಾಯ್‌ ಅಂತಿಮವಿಧಿ: ಬನ್ನೇರುಘಟ್ಟದ ಕಾಸಾಗ್ರೌಂಡ್…

ಇತ್ತೀಚಿನ ಸುದ್ದಿ

ಬೆಲೆಯೇರಿಕೆ ವಿರುದ್ಧ ಬಿಜೆಪಿ ಮಹಿಳಾ ಮೋರ್ಚಾ ಪ್ರತಿಭಟನೆ: ಶಾಸಕ ಡಾ. ಭರತ್ ಶೆಟ್ಟಿ ಸಹಿತ ಹಲವರ ಬಂಧನ

05/07/2024, 21:34

ಸಿದ್ದರಾಮಯ್ಯರದ್ದು ಸ್ಕ್ಯಾಮ್ ಸರ್ಕಾರ : ಡಾ. ಭರತ್ ಶೆಟ್ಟಿ ಲೇವಡಿ

ಗುರುಪುರ(reporterkarnataka.com): ಮುಖ್ಯಮಂತ್ರಿ ಸಿದ್ದರಾಮಯ್ಯನವರದ್ದು ಸ್ಕ್ಯಾಮ್‌ಗಳ(ಹಗರಣ) ಸರ್ಕಾರ. ಭ್ರಚ್ಟಾಚಾರ ಅತಿರೇಕಕ್ಕೇರಿದೆ. ಮೂಡಾ, ವಾಲ್ಮೀಕಿ ನಿಗಮದಲ್ಲೂ ಭ್ರಷ್ಟಾಚಾರ. ಈ ಸರ್ಕಾರ ನಡೆಸುತ್ತಿರುವ ಭ್ರಷ್ಟಾಚಾರ ಹೇಳುತ್ತ ಹೋದರೆ ದಿನಕ್ಕೊಂದು ಪ್ರತಿಭಟನೆ ನಡೆಸಬಹುದು. ಹಾಲು, ಪೆಟ್ರೋಲ್, ಡೀಸೆಲ್, ಮುದ್ರಾಂಕ ದರ, ಆಲ್ಕೋಹಾಲ್ ಬೆಲೆ ಏರಿಸಿರುವ ಕಾಂಗ್ರೆಸ್ ಸರ್ಕಾರವು ರಾಜ್ಯದ ಜನರನ್ನು ನರಕದ ಕೂಪಕ್ಕೆ ಇಳಿಸುತ್ತಿದೆ ಎಂದು ಮಂಗಳೂರು ಉತ್ತರ ಶಾಸಕ ಡಾ. ಭರತ್ ಶೆಟ್ಟಿ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಗುಡುಗಿದರು.
ಗುರುಪುರ ಕೈಕಂಬ ಜಂಕ್ಷನ್‌ನಲ್ಲಿ ಜು. 5ರಂದು ಮಂಗಳೂರು ನಗರ ಉತ್ತರ ಮಂಡಲ ಬಿಜೆಪಿ ಮಹಿಳಾ ಮೋರ್ಚಾವು ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ನೀತಿ ಖಂಡಿಸಿ ಆಯೋಜಿಸಿದ ಪ್ರತಿಭಟನಾ ಸಭೆಯನ್ನುದ್ದೇಶಿಸಿ ಮಾತನಾಡಿ, ರೈತ ವಿರೋಧಿಯಾಗಿರುವ ಸಿದ್ದರಾಮಯ್ಯ ಸರ್ಕಾರ ರಸಗೊಬ್ಬರ ಮತ್ತು ಕೃಷಿ ಬೀಜದ ಬೆಲೆ ಏರಿಸಿದೆ. ಗ್ಯಾರಂಟಿಗಾಗಿ ಕಾಂಗ್ರೆಸ್ ಭ್ರಷ್ಟಾಚಾರದ ಮಾರ್ಗ ಹಿಡಿದಿದೆ. ಬೆಲೆ ಏರಿಕೆ ವಿರುದ್ಧ ಬಿಜೆಪಿ ಹೋರಾಟ ತೀವ್ರಗೊಳಿಸಲಿದೆ ಎಂದರು.


ಮoಗಳೂರು ನಗರ ಉತ್ತರ ಮಂಡಲ ಬಿಜೆಪಿ ಅಧ್ಯಕ್ಷ ರಾಜೇಶ್ ಕೊಟ್ಟಾರಿ ಮಾತನಾಡಿ, ಕಾಂಗ್ರೆಸ್ ಸರ್ಕಾರ ಬೆಲೆ ಏರಿಕೆ ಮೂಲಕ ಜನರ ರಕ್ತ ಕುಡಿಯುತ್ತಿದೆ. ಅಧಿಕಾರ ತ್ಯಜಿಸುವುಕ್ಕಿಂತ ಮುಂಚೆ ಸಾಕಷ್ಟು ಸೈಟು ಮಾಡುವ ಗುರಿ ಇಟ್ಟುಕೊಂಡಿರುವ ಸಿದ್ದರಾಮಯ್ಯ ಮತ್ತು ಅವರ ಸರ್ಕಾರಕ್ಕೆ ಶೀಘ್ರ ಜನರು ಉತ್ತರ ಕೊಡಲಿದ್ದಾರೆ ಎಂದರು.
ಬಿಜೆಪಿ ನಾಯಕಿ ಅಮೃತಲಾಲ್ ಡಿ’ಸೋಜ ಮಾತನಾಡಿ, ಹಾಲಿನ ದರ ಏರಿಸಿ ಮಹಿಳೆಯರ ಪಾಲಿಗೆ ವಿಲನ್ ಆಗಿರುವ ಕಾಂಗ್ರೆಸ್ ಸರ್ಕಾರವು ಅಭಿವೃದ್ಧಿ ವಿಷಯದಲ್ಲಿ ಮೌನವಾಗಿದೆ ಎಂದರು.
ಪ್ರತಿಭಟನಾ ಸಭೆಯಲ್ಲಿ ಬಿಜೆಪಿ ಮುಖಂಡರಾದ ಉಪಮೇಯರ್ ಸುನೀತಾ ಸಾಲಿಯಾನ್, ಪ್ರಧಾನ ಕಾರ್ಯದರ್ಶಿಗಳಾದ ಸಂದೀಪ್ ಪಚ್ಚನಾಡಿ, ರಣದೀಪ್ ಕಾಂಚನ್, ಮಹಿಳಾ ಮೋರ್ಚಾ ಅಧ್ಯಕ್ಷೆ ರೇಖಾ, ಪ್ರಧಾನ ಕಾರ್ಯದರ್ಶಿಗಳಾದ ಪವಿತ್ರಾ, ಸ್ವಪ್ನಾ, ಉಪಾಧ್ಯಕ್ಷರಾದ ಆನಂದ ಪಾಂಗಳ, ಸೋಹನ್ ಅತಿಕಾರಿ, ಮಹಾಶಕ್ತಿ ಕೇಂದ್ರ ಪ್ರಮುಖರಾದ ಶೋಧನ್ ಆದ್ಯಪಾಡಿ, ತಮ್ಮಯ್ಯ ಪೂಜಾರಿ, ವಿವಿಧ ಪಂಚಾಯತ್‌ಗಳ ಬಿಜೆಪಿ ಬೆಂಬಲಿದ ಅಧ್ಯಕ್ಷರು ಮತ್ತು ಸದಸ್ಯರು, ವಿವಿಧ ಘಟಕಗಳ ಪದಾಧಿಕಾರಿಗಳು, ಕಾರ್ಯಕರ್ತರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು