5:01 PM Thursday12 - March 2026
ಬ್ರೇಕಿಂಗ್ ನ್ಯೂಸ್
ರಾಯಚೂರು | ಒಳ ಮೀಸಲಾತಿ ಹೋರಾಟ: ಪೆಟ್ರೋಲ್ ಸುರಿದುಕೊಂಡು ಯುವಕ ಆತ್ಮಹತ್ಯೆಗೆ ಯತ್ನ ಮಲೆಮಹದೇಶ್ವರ ಬೆಟ್ಟದ ರಸ್ತೆಯಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ: ಭಕ್ತರಲ್ಲಿ ಹೆಚ್ಚಿದ ಆತಂಕ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್‌: ಮೌಲ್ಯ 10 ಪಟ್ಟು ಹೆಚ್ಚು,… ಪೆಟಾ ಮೇಲ್ಮನವಿ ವಜಾ: ರಾಜ್ಯದೆಲ್ಲೆಡೆ ಕಂಬಳ ಆಯೋಜನೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್ ನಿಗಮಗಳಿಗೆ ಅನುದಾನ ಕಡಿತ, ಆಸ್ಪತ್ರೆಗಳಲ್ಲಿ ಔಷಧಿ ಇಲ್ಲ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಟೀಕೆ ಚಿಕ್ಕಮಗಳೂರು: ಹಸುವನ್ನು ತುಳಿದು ಕೊಂದ ಕಾಡಾನೆ; ಮಾಣಿಮಕ್ಕಿ ಗ್ರಾಮಸ್ಥರಲ್ಲಿ ಆತಂಕ ತೀರ್ಥಹಳ್ಳಿ: ಕುವೆಂಪು ಜೈವಿಕ ಅರಣ್ಯದಲ್ಲಿ ಹತ್ತಿಕೊಂಡ ಬೆಂಕಿ; ಅರಣ್ಯಾಧಿಕಾರಿಗಳ ದೌಡು ಝೂ ಅಭಿ ಇನ್ನಿಲ್ಲ: ಕಾಲು ನೋವಿನಿಂದ ಬಳಲುತ್ತಿದ್ದ ಮತ್ತಿಗೋಡು ಶಿಬಿರದ ಸಾಕಾನೆ ವಿವಿಧ ಬೇಡಿಕೆ ಆಗ್ರಹಿಸಿ ವಿದ್ಯುತ್ ಗುತ್ತಿಗೆದಾರರ ಸಂಘದಿಂದ ಮಾ.11ರಂದು ಪ್ರತಿಭಟನೆ ಮೋದಿ ದೇಶದ ಮಾರ್ಯಾದೆ ಹಾಳು‌‌ ಮಾಡುತ್ತಿದ್ದಾರೆ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಟು‌…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಸೋತ ಪ್ರತಾಪಗೌಡ ಪಾಟೀಲ್ ಗೆ ಸಚಿವ ಸ್ಥಾನ:  ಅಭಿಮಾನಿಗಳ ಆಗ್ರಹದ ಆಡಿಯೋ ವೈರಲ್

20/05/2021, 12:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com
ಮಸ್ಕಿಉಪಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಸೋಲಿನ ಹಿಂದೆ ಕಾಣದ  ಕೈಗಳು ಇದ್ದು, ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡಿ ಸಚಿವ ಪದವಿ ನೀಡುವಂತೆ ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಈ ನಿಟ್ಟಿನಲ್ಲಿ ಧ್ವನಿ ಸುರುಳಿಯ ಸಣ್ಣ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಸ್ಕಿ ಕ್ಷೇತ್ರದ ಮಾಜಿ ಶಾಸಕರ ಪ್ರತಾಪ ಗೌಡ ಪಾಟೀಲ್ ಅಭಿಮಾನಿಗಳು ಮುಖ್ಯಮಂತ್ರಿಯನ್ನು ಆಗ್ರಹಿಸುವ ಧ್ವನಿ ಸುರುಳಿ ಇದಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರೇ ಇವತ್ತು ನೀವು ಸಿಎಂ ಕುರ್ಚಿ ಮೇಲೆ ಕೂರುವುದಕ್ಕೆ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪ ಗೌಡರ ಪಾತ್ರ ಬಹುಮುಖ್ಯ. ಉಪಚುನಾವಣೆಯಲ್ಲಿ ಅವರು ಸೋತಿರಬಹುದು. ಆದರೆ ನೀವು ಸೋತವರನ್ನು ಸಚಿವರನ್ನಾಗಿ ಮಾಡಿದ್ದೀರಿ. ಅಲ್ಲದೆ ಉಪಮುಖ್ಯಮಂತ್ರಿ ಕೂಡ ಮಾಡಿದ್ದೀರಿ. ಪ್ರತಾಪಗೌಡ ಪಾಟೀಲ್ ಅವರನ್ನು ಎಂಎಲ್ಸಿ ಮಾಡಿ ಸಚಿವ ಸ್ಥಾನ ನೀಡಬೇಕೆಂದು ಅಭಿಮಾನಿಗಳಿಂದ ಒತ್ತಾಯ ಕೇಳಿಬರುತ್ತಿದೆ. ಮತದಾರರು ಈ ಸಲ ಪ್ರತಾಪ ಗೌಡರನ್ನು ಕೈ ಬಿಟ್ಟಿರಬಹುದು. ಆದರೆ ಸರಕಾರ ತರುವುದರಲ್ಲಿ ಅವರ ಪಾತ್ರ ಬಹಳ ಮುಖ್ಯ. 17 ಜನರಲ್ಲಿ ಇವರದು ಒಂದು ಪಾತ್ರ ಇದೆ. ಮೈತ್ರಿ ಸರಕಾರ ಬೀಳಿಸುವಲ್ಲಿ ಇದ್ದ 17 ಜನರಲ್ಲಿ ಇವರು ಒಬ್ಬರು. ಪ್ರತಾಪ್ ಗೌಡ ಪಾಟೀಲ್ 

ಅವರನ್ನು ಮತದಾರರು ಈ ಬಾರಿ ಕೈ ಬಿಟ್ಟಿರಬಹುದು. ನಾವು ಎಲ್ಲಿ ಎಡವಿದ್ದೇವೆ, ತಪ್ಪು ಮಾಡಿದ್ದೇವೆ ಇದನ್ನೆಲ್ಲ ಮುಂಬರುವ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ. ಸೋಲಿನ ಹಿಂದೆ ಕಾಣದ ಕೈಗಳು ಇದ್ದು, ಮತದಾರರು ಈ ಬಾರಿ ಕೈ ಬಿಟ್ಟಿರಬಹುದು. ಮುಂಬರುವ ದಿನಗಳಲ್ಲಿ ನಾವು ಸರಿಪಡಿಸಿಕೊಳ್ಳುತ್ತೇವೆ. ಅಲ್ಲದೆ ಮುಖ್ಯಮಂತ್ರಿಗಳು ನಮ್ಮನ್ನು ಕೈಬಿಡುವುದಿಲ್ಲ ಎನ್ನುವ ಮಾತುಗಳು ಅಭಿಮಾನಿಗಳಿಂದ ಕೇಳಿಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು