3:12 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಮಸ್ಕಿಯಲ್ಲಿ ಸೋತ ಪ್ರತಾಪಗೌಡ ಪಾಟೀಲ್ ಗೆ ಸಚಿವ ಸ್ಥಾನ:  ಅಭಿಮಾನಿಗಳ ಆಗ್ರಹದ ಆಡಿಯೋ ವೈರಲ್

20/05/2021, 12:03

ವಿರುಪಾಕ್ಷಯ್ಯ ಸ್ವಾಮಿ ಸಾಲಿಮಠ ಅಂತರಗಂಗೆ
info.reporterkarnataka@gmail.com
ಮಸ್ಕಿಉಪಚುನಾವಣೆಯಲ್ಲಿ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪಗೌಡ ಪಾಟೀಲ್ ಅವರ ಸೋಲಿನ ಹಿಂದೆ ಕಾಣದ  ಕೈಗಳು ಇದ್ದು, ಅವರನ್ನು ವಿಧಾನ ಪರಿಷತ್ ಸದಸ್ಯ ಮಾಡಿ ಸಚಿವ ಪದವಿ ನೀಡುವಂತೆ ಅವರ ಅಭಿಮಾನಿಗಳು ಆಗ್ರಹಿಸಿದ್ದಾರೆ.

ಈ ನಿಟ್ಟಿನಲ್ಲಿ ಧ್ವನಿ ಸುರುಳಿಯ ಸಣ್ಣ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಮಸ್ಕಿ ಕ್ಷೇತ್ರದ ಮಾಜಿ ಶಾಸಕರ ಪ್ರತಾಪ ಗೌಡ ಪಾಟೀಲ್ ಅಭಿಮಾನಿಗಳು ಮುಖ್ಯಮಂತ್ರಿಯನ್ನು ಆಗ್ರಹಿಸುವ ಧ್ವನಿ ಸುರುಳಿ ಇದಾಗಿದೆ.

ಮುಖ್ಯಮಂತ್ರಿ ಯಡಿಯೂರಪ್ಪನವರೇ ಇವತ್ತು ನೀವು ಸಿಎಂ ಕುರ್ಚಿ ಮೇಲೆ ಕೂರುವುದಕ್ಕೆ ಸೋಲು ಕಂಡಿರುವ ಮಾಜಿ ಶಾಸಕ ಪ್ರತಾಪ ಗೌಡರ ಪಾತ್ರ ಬಹುಮುಖ್ಯ. ಉಪಚುನಾವಣೆಯಲ್ಲಿ ಅವರು ಸೋತಿರಬಹುದು. ಆದರೆ ನೀವು ಸೋತವರನ್ನು ಸಚಿವರನ್ನಾಗಿ ಮಾಡಿದ್ದೀರಿ. ಅಲ್ಲದೆ ಉಪಮುಖ್ಯಮಂತ್ರಿ ಕೂಡ ಮಾಡಿದ್ದೀರಿ. ಪ್ರತಾಪಗೌಡ ಪಾಟೀಲ್ ಅವರನ್ನು ಎಂಎಲ್ಸಿ ಮಾಡಿ ಸಚಿವ ಸ್ಥಾನ ನೀಡಬೇಕೆಂದು ಅಭಿಮಾನಿಗಳಿಂದ ಒತ್ತಾಯ ಕೇಳಿಬರುತ್ತಿದೆ. ಮತದಾರರು ಈ ಸಲ ಪ್ರತಾಪ ಗೌಡರನ್ನು ಕೈ ಬಿಟ್ಟಿರಬಹುದು. ಆದರೆ ಸರಕಾರ ತರುವುದರಲ್ಲಿ ಅವರ ಪಾತ್ರ ಬಹಳ ಮುಖ್ಯ. 17 ಜನರಲ್ಲಿ ಇವರದು ಒಂದು ಪಾತ್ರ ಇದೆ. ಮೈತ್ರಿ ಸರಕಾರ ಬೀಳಿಸುವಲ್ಲಿ ಇದ್ದ 17 ಜನರಲ್ಲಿ ಇವರು ಒಬ್ಬರು. ಪ್ರತಾಪ್ ಗೌಡ ಪಾಟೀಲ್ 

ಅವರನ್ನು ಮತದಾರರು ಈ ಬಾರಿ ಕೈ ಬಿಟ್ಟಿರಬಹುದು. ನಾವು ಎಲ್ಲಿ ಎಡವಿದ್ದೇವೆ, ತಪ್ಪು ಮಾಡಿದ್ದೇವೆ ಇದನ್ನೆಲ್ಲ ಮುಂಬರುವ ದಿನಗಳಲ್ಲಿ ಸರಿಪಡಿಸಿಕೊಳ್ಳುತ್ತೇವೆ. ಸೋಲಿನ ಹಿಂದೆ ಕಾಣದ ಕೈಗಳು ಇದ್ದು, ಮತದಾರರು ಈ ಬಾರಿ ಕೈ ಬಿಟ್ಟಿರಬಹುದು. ಮುಂಬರುವ ದಿನಗಳಲ್ಲಿ ನಾವು ಸರಿಪಡಿಸಿಕೊಳ್ಳುತ್ತೇವೆ. ಅಲ್ಲದೆ ಮುಖ್ಯಮಂತ್ರಿಗಳು ನಮ್ಮನ್ನು ಕೈಬಿಡುವುದಿಲ್ಲ ಎನ್ನುವ ಮಾತುಗಳು ಅಭಿಮಾನಿಗಳಿಂದ ಕೇಳಿಬರುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು