3:00 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಚಾಮರಾಜಪೇಟೆ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಸಿಎಂ ಸಿದ್ದರಾಮಯ್ಯ ದಿಢೀರ್ ಭೇಟಿ: ಮಕ್ಕಳ ಜತೆ ಭೋಜನ

06/07/2024, 10:04

ಬೆಂಗಳೂರು(reporterkarnataka.com): ಇತರ ಶಾಲೆಗಳಿಗೆ ಹೋಲಿಸಿದರೆ ವಸತಿ ಶಾಲೆಗಳು ಗುಣಮಟ್ಟದಲ್ಲಿ ಉತ್ತಮವಾಗಿದ್ದರೂ, ವಸತಿ ಶಾಲೆಗಳಿಗೆ ಇನ್ನಷ್ಟು ಅಗತ್ಯ ಮೂಲಸೌಕರ್ಯಗಳನ್ನು ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಅವರು ಎಸ್‌ಸಿಸಿಪಿ/ಟಿ.ಎಸ್.ಪಿ ರಾಜ್ಯ ಅಭಿವೃದ್ದಿ ಪರಿಷತ್‌ ಸಭೆಯ ಬಳಿಕ ಚಾಮರಾಜಪೇಟೆಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಅನಿರೀಕ್ಷಿತ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಸಂವಾದ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
ರಾಜ್ಯದಲ್ಲಿ 833 ವಸತಿ ಶಾಲೆಗಳಿದ್ದು, ಎಲ್ಲಾ ವಸತಿ ಶಾಲೆಗಳಿಗೆ ಸುಸಜ್ಜಿತವಾದ ಕಟ್ಟಡಗಳನ್ನು ಹಂತಹಂತವಾಗಿ ನಿರ್ಮಿಸಲಾಗುತ್ತಿದೆ. ಎಲ್ಲಾ ಆಶ್ರಮ ಶಾಲೆಗಳನ್ನು ವಸತಿ ಶಾಲೆಗಳಾಗಿ ಪರಿರ್ವತಿಸುತ್ತಿದ್ದೇವೆ. ಈ ಶಾಲೆಗಳಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಊಟ, ವಾಸ್ತವ್ಯ ವ್ಯವಸ್ಥೆ ಮಾತ್ರವಲ್ಲದೆ ಇಂಗ್ಲಿಷ್‌, ವಿಜ್ಞಾನ ಮತ್ತು ಗಣಿತ ವಿಷಯಗಳಲ್ಲಿ ಕೋಚಿಂಗ್‌ ಸಹ ನೀಡುತ್ತಿದ್ದೇವೆ ಎಂದು ಹೇಳಿದರು.
ಚಾಮರಾಜಪೇಟೆಯ ಸರ್ಕಾರಿ ಶಾಲೆಯನ್ನು ಪಡೆದು ಮೊರಾರ್ಜಿ ದೇಸಾಯಿ ವಸತಿ ಶಾಲೆಯಾಗಿ ಪರಿವರ್ತಿಸಲಾಗಿದೆ. ಪ್ರಸ್ತುತ ಇಲ್ಲಿ 218 ಮಕ್ಕಳಿದ್ದಾರೆ. ವಿದ್ಯಾರ್ಥಿಗಳ ಜತೆಯಲ್ಲಿ ಮಾಡಿದ ಊಟ, ಸಾಂಬಾರ್ ಚೆನ್ನಾಗಿತ್ತು‌ ಎಂದು ಅವರು ಈ ಸಂದರ್ಭದಲ್ಲಿ ಪತ್ರಕರ್ತರ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು