11:02 AM Saturday7 - February 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು… ತೀರ್ಥಹಳ್ಳಿ ಸಮೀಪದ ಮೇಗರವಳ್ಳಿಯಲ್ಲಿ ಭೀಕರ ಅಪಘಾತ: ಗಾಯಾಳು ಮಹಿಳೆ ಸಾವು Madikeri | ಕುಶಾಲನಗರ ಬಳಿ ಬೈಕ್ ಡಿಕ್ಕಿ: ಪಾದಚಾರಿ ಯುವಕ ದಾರುಣ ಸಾವು ಪೊಲೀಸರಿಗೆ ತಲೆನೋವಾದ ಕೇರಳದ ‘ಮಲ್ಲು’ ಗ್ಯಾಂಗ್: ಚಿನ್ನದ ಉದ್ಯಮಿಗಳೇ ಇವರ ಟಾರ್ಗೆಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ಕೇಂದ್ರ ವಿತ್ತ ಸಚಿವೆಗೆ ಕೇರಳ ಸಿಎಂ… ವರನಿಗೆ ಚಾಕು ಇರಿದ ಕೇಸ್‌ಗೆ ಬಿಗ್ ಟ್ವಿಸ್ಟ್ : ಸ್ಕೆಚ್ ಹಾಕಿದ್ದು ಅವರಲ್ಲ,…

ಇತ್ತೀಚಿನ ಸುದ್ದಿ

ಮಂಗಳೂರು ಪಾಲ್ದನೆ ಚರ್ಚ್ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ

07/07/2024, 15:39

ಮಂಗಳೂರು(reporterkarnataka.com): ಮಂಗಳೂರಿನ ಪಾಲ್ದನೆ ಸಂತ ತೆರೆಸಾ ಚರ್ಚ್ ನ ಐಸಿವೈಎಂ ಘಟಕದ ನೂತನ ಪದಾಧಿಕಾರಿಗಳ ಪ್ರಮಾಣ ವಚನ ಕಾರ್ಯಕ್ರಮ ಇಂದು ನೆರವೇರಿತು.
ಬೆಳಗ್ಗಿನ ಬಲಿಪೂಜೆಯ ಸಂದರ್ಭದಲ್ಲಿ ಚರ್ಚ್ ಪ್ರಧಾನ ಗುರು ಹಾಗೂ ಸಂಘಟನೆಯ ನಿರ್ದೇಶಕ ಫಾ. ಆಲ್ಬನ್ ಡಿ’ಸೋಜಾ ಅವರು ಪದಾಧಿಕಾರಿಗಳಿಗೆ ಪ್ರಮಾಣ ವಚನ ಬೋಧಿಸಿದರು.
ಕಾರ್ಯಕ್ರಮದಲ್ಲಿ ಐಸಿವೈಎಂ ನೂತನ ಅಧ್ಯಕ್ಷ ವಿಲ್ಸನ್‌ ಪಿಂಟೊ, ಕಾರ್ಯದರ್ಶಿ ವೆನಿಶಾ ಪಿಂಟೊ, ಉಪಾಧ್ಯಕ್ಷೆ ವಿಯೋಲಾ ಡಿ’ಸೋಜಾ, ಜತೆ ಕಾರ್ಯದರ್ಶಿ ಡಿಯೋನ್ ಫೆರ್ನಾಂಡಿಸ್‌, ಖಜಾಂಚಿ ಫ್ರೀಡಲ್‌ ಡಿ’ಸೋಜಾ, “ಆಂಮ್ಚೊ ಯುವಕ್‌’ ಪ್ರತಿನಿಧಿ ಆ್ಯಶೆಲ್‌ ಲೋಬೊ, ರೆಡ್‌ ಡ್ರಾಪ್‌ ಪ್ರತಿನಿಧಿ ಗ್ಲ್ಯಾವಿನ್‌ ಡಿ’ಸೋಜಾ, ಕ್ರೀಡಾ ಕಾರ್ಯದರ್ಶಿ ಬ್ರೆಂಡನ್‌ ಪಿರೇರಾ, ಆಧ್ಯಾತ್ಮಿಕ ಕಾರ್ಯದರ್ಶಿ ವಿನೋಲಾ ಪಿಂಟೊ, ನಿಕಟ ಪೂರ್ವ ಅಧ್ಯಕ್ಷ ರಾಯನ್‌ ನೊರೊನ್ಹಾ, ವಲಯ ಪ್ರತಿನಿಧಿ ವಿಲೀಶಾ ಬ್ರ್ಯಾಗ್ಸ್‌ ಅವರು ಪ್ರಮಾಣ ವಚನ ಸ್ವೀಕರಿಸಿದರು. ಆಧ್ಯಾತ್ಮಿಕ ನಿರ್ದೇಶಕ ಫಾ. ಆಲ್ಬನ್‌ ಡಿ’ಸೋಜಾ, ಸಂಘಟನೆಯ ಸಚೇತಕ ಹಾಗೂ ಮದರ್ ತೆರೆಸಾ ವಾರ್ಡ್ ಮುಖ್ಯಸ್ಥ ರೋಶನ್‌ ಮೊಂತೇರೊ, ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಎಲಿಯಾಸ್‌ ಫೆರ್ನಾಂಡಿಸ್‌ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು