4:31 AM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಕೋಡಿಕಲ್: ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ವಿಫಲ ಯತ್ನ; ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಪೊಲೀಸರ ವಿನಂತಿ

07/07/2024, 15:43

ಮಂಗಳೂರು(reporterkarnataka.com): ನಗರದ ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರ ಕೊಠಡಿಯ ಕಿಟಕಿಯ ಗ್ರಿಲ್ ಕತ್ತರಿಸಿ ದುಷ್ಕರ್ಮಿ ಗಳ ಗ್ಯಾಂಗ್ ನಿಂದ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.


5- 6 ಮಂದಿ ಇದ್ದ ಕಳ್ಳರ ತಂಡ ಮನೆಯ ಅವರಣದೊಳಗೆ‌ ನುಗ್ಗಿ ಕಿಟಕಿಯ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನಿಸಿತ್ತು. ಕಳ್ಳತನಕ್ಕೆ ಯತ್ನಿಸುವ ಸಿಸಿ ಕ್ಯಾಮೆರಾ ದೃಶ್ಯ ಇದೀಗ ವೈರಲ್ ಆಗುತ್ತಿದೆ. ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕರು ಈ ಕುರಿತು ಜಾಗ್ರತೆ ವಹಿಸಬೇಕು. ಗುಮಾನಿ ಆಸಾಮಿಗಳು ಪರಿಸರದಲ್ಲಿ ಅಥವಾ ಆಸುಪಾಸಿನಲ್ಲಿ ಕಂಡು ಬಂದಲ್ಲಿ ಪೊಲೀಸ್ ಕಂಟ್ರೋಲ್ ನಂಬರ್ 9480802321 ಗೆ ಅಥವಾ 112 ಗೆ ಮಾಹಿತಿ ನೀಡಬೇಕು. ಮನೆಗಳಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಹಾಗೂ ಪ್ರವೇಶ ದಾರಿ ಕಾಣುವ ಹಾಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದು ಮತ್ತು ಅವುಗಳು ಸುಸ್ಥಿತಿಯಲ್ಲಿರುವ ಬಗ್ಗೆ, ರಾತ್ರಿಯ ದೃಶ್ಯಗಳು ಸ್ಪಷ್ಟವಾಗಿ ಕಾಣುವ ಹಾಗೆ ಮತ್ತು ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು