5:44 AM Sunday6 - October 2024
ಬ್ರೇಕಿಂಗ್ ನ್ಯೂಸ್
ಮಂಗಳೂರು-ಪೊಳಲಿಗೆ ಬೆಂಜನಪದವು- ಕಲ್ಪನೆ ಮಾರ್ಗವಾಗಿ ಕೆಎಸ್‌ಆರ್‌ಟಿಸಿ ಬಸ್ ಆರಂಭ ಕೋಲಾರ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕ್ಟೋಬರ್ 7 ರಿಂದ ಇ-ಖಾತಾ ಲಭ್ಯ ಬೆಂಗಳೂರು: ಹೃದಯವಾಹಿನಿ ರಜತ ಮಹೋತ್ಸವ, ಪ್ರಥಮ ಅನಿವಾಸಿ ಕನ್ನಡಿಗರ ಸಮ್ಮೇಳನ ವಿಧಾನ ಸಭೆ ಸ್ಪೀಕರ್ ಯು.ಟಿ.ಖಾದರ್ ಕೊಟ್ಟಿಗೆಹಾರ ಭೇಟಿ: ಬಣಕಲ್ ಪ್ರಾಥಮಿಕ ಆರೋಗ್ಯ ಕೇಂದ್ರ… ಕೊಟ್ಟಿಗೆಹಾರ: ಗಾಂಧಿ ಜಯಂತಿಯಂದು ಮಾಂಸ ಮಾರಾಟ; ನಿಯಮ ಉಲ್ಲಂಘಿಸಿದ ಮಾರಾಟಗಾರರು ಗಾಂಧೀಜಿ ಚಿಂತನೆಗಳು ಎಲ್ಲಾ ಪತ್ರಕರ್ತರಿಗೆ ಎಂದೆಂದಿಗೂ ಮಾರ್ಗದರ್ಶಿ: ಮಂಗಳೂರು ಬಿಷಪ್ ಡಾ. ಪೀಟರ್… ಸಾಲ ಕೇಳ್ತಾ ಇಲ್ಲ, ಕೆಲಸ ಮಾಡಿದ್ದಕ್ಕೆ ನ್ಯಾಯ ಕೊಡಿ: ಪ್ರತಿಭಟನಾ ಸಭೆಯಲ್ಲಿ ರಾಜ್ಯ… ಈಚರ್ ಲಾರಿ – ಬೈಕ್ ಮಧ್ಯೆ ಭೀಕರ ಅಪಘಾತ: ಮೂವರು ಮಕ್ಕಳು ಸಹಿತ… ಬೈಕ್ ಗೆ ಗುದ್ದಿದ ಕಾಡುಕೋಣ: ರಸ್ತೆಗೆ ಬಿದ್ದು ಸವಾರನಿಗೆ ಗಾಯ ಅಪ್ರಾಪ್ತ ಬಾಲಕಿಯ ಅತ್ಯಾಚಾರ ಪ್ರಕರಣ: ಪೋಕ್ಸೋ ನ್ಯಾಯಾಲಯದಲ್ಲಿ ಆರೋಪಿಯ ಖುಲಾಸೆ

ಇತ್ತೀಚಿನ ಸುದ್ದಿ

ಕೋಡಿಕಲ್: ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ವಿಫಲ ಯತ್ನ; ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಪೊಲೀಸರ ವಿನಂತಿ

07/07/2024, 15:43

ಮಂಗಳೂರು(reporterkarnataka.com): ನಗರದ ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರ ಕೊಠಡಿಯ ಕಿಟಕಿಯ ಗ್ರಿಲ್ ಕತ್ತರಿಸಿ ದುಷ್ಕರ್ಮಿ ಗಳ ಗ್ಯಾಂಗ್ ನಿಂದ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.


5- 6 ಮಂದಿ ಇದ್ದ ಕಳ್ಳರ ತಂಡ ಮನೆಯ ಅವರಣದೊಳಗೆ‌ ನುಗ್ಗಿ ಕಿಟಕಿಯ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನಿಸಿತ್ತು. ಕಳ್ಳತನಕ್ಕೆ ಯತ್ನಿಸುವ ಸಿಸಿ ಕ್ಯಾಮೆರಾ ದೃಶ್ಯ ಇದೀಗ ವೈರಲ್ ಆಗುತ್ತಿದೆ. ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕರು ಈ ಕುರಿತು ಜಾಗ್ರತೆ ವಹಿಸಬೇಕು. ಗುಮಾನಿ ಆಸಾಮಿಗಳು ಪರಿಸರದಲ್ಲಿ ಅಥವಾ ಆಸುಪಾಸಿನಲ್ಲಿ ಕಂಡು ಬಂದಲ್ಲಿ ಪೊಲೀಸ್ ಕಂಟ್ರೋಲ್ ನಂಬರ್ 9480802321 ಗೆ ಅಥವಾ 112 ಗೆ ಮಾಹಿತಿ ನೀಡಬೇಕು. ಮನೆಗಳಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಹಾಗೂ ಪ್ರವೇಶ ದಾರಿ ಕಾಣುವ ಹಾಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದು ಮತ್ತು ಅವುಗಳು ಸುಸ್ಥಿತಿಯಲ್ಲಿರುವ ಬಗ್ಗೆ, ರಾತ್ರಿಯ ದೃಶ್ಯಗಳು ಸ್ಪಷ್ಟವಾಗಿ ಕಾಣುವ ಹಾಗೆ ಮತ್ತು ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು