6:59 AM Sunday8 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಕೋಡಿಕಲ್: ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ವಿಫಲ ಯತ್ನ; ಸಾರ್ವಜನಿಕರು ಜಾಗ್ರತೆ ವಹಿಸುವಂತೆ ಪೊಲೀಸರ ವಿನಂತಿ

07/07/2024, 15:43

ಮಂಗಳೂರು(reporterkarnataka.com): ನಗರದ ಕೋಡಿಕಲ್ ರಸ್ತೆಯಲ್ಲಿನ ಮನೆಯೊಂದರ ಕೊಠಡಿಯ ಕಿಟಕಿಯ ಗ್ರಿಲ್ ಕತ್ತರಿಸಿ ದುಷ್ಕರ್ಮಿ ಗಳ ಗ್ಯಾಂಗ್ ನಿಂದ ಕಳ್ಳತನಕ್ಕೆ ವಿಫಲ ಯತ್ನ ನಡೆಸಿದ ಘಟನೆ ನಡೆದಿದೆ.


5- 6 ಮಂದಿ ಇದ್ದ ಕಳ್ಳರ ತಂಡ ಮನೆಯ ಅವರಣದೊಳಗೆ‌ ನುಗ್ಗಿ ಕಿಟಕಿಯ ಗ್ರಿಲ್ ಕತ್ತರಿಸಿ ಕಳ್ಳತನಕ್ಕೆ ಯತ್ನಿಸಿತ್ತು. ಕಳ್ಳತನಕ್ಕೆ ಯತ್ನಿಸುವ ಸಿಸಿ ಕ್ಯಾಮೆರಾ ದೃಶ್ಯ ಇದೀಗ ವೈರಲ್ ಆಗುತ್ತಿದೆ. ಉರ್ವ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಸಾರ್ವಜನಿಕರು ಈ ಕುರಿತು ಜಾಗ್ರತೆ ವಹಿಸಬೇಕು. ಗುಮಾನಿ ಆಸಾಮಿಗಳು ಪರಿಸರದಲ್ಲಿ ಅಥವಾ ಆಸುಪಾಸಿನಲ್ಲಿ ಕಂಡು ಬಂದಲ್ಲಿ ಪೊಲೀಸ್ ಕಂಟ್ರೋಲ್ ನಂಬರ್ 9480802321 ಗೆ ಅಥವಾ 112 ಗೆ ಮಾಹಿತಿ ನೀಡಬೇಕು. ಮನೆಗಳಲ್ಲಿ ಹಾಗೂ ಅಂಗಡಿ ಮುಂಗಟ್ಟುಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ ಹಾಗೂ ಪ್ರವೇಶ ದಾರಿ ಕಾಣುವ ಹಾಗೆ ಸಿಸಿ ಕ್ಯಾಮರಾಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದು ಮತ್ತು ಅವುಗಳು ಸುಸ್ಥಿತಿಯಲ್ಲಿರುವ ಬಗ್ಗೆ, ರಾತ್ರಿಯ ದೃಶ್ಯಗಳು ಸ್ಪಷ್ಟವಾಗಿ ಕಾಣುವ ಹಾಗೆ ಮತ್ತು ಹೆಚ್ಚಿನ ರೆಸಲ್ಯೂಶನ್ ಹೊಂದಿರುವ ಬಗ್ಗೆ ಖಚಿತ ಪಡಿಸಿಕೊಳ್ಳಲು ವಿನಂತಿ.

ಇತ್ತೀಚಿನ ಸುದ್ದಿ

ಜಾಹೀರಾತು