ಇತ್ತೀಚಿನ ಸುದ್ದಿ
ನಂಜನಗೂಡು: 23 ಡೆಂಗ್ಯೂ, 9 ಚಿಕನ್ ಗುನ್ಯಾ ಪ್ರಕರಣ ಪತ್ತೆ: ಎಚ್ಚೆತ್ತ ತಾಲೂಕು ಆಡಳಿತ; ಶಾಸಕ ದರ್ಶನ್ ಧೃವನಾರಾಯಣ್ ನೇತೃತ್ವದಲ್ಲಿ ಸಭೆ
07/07/2024, 17:59
ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com
ನಂಜನಗೂಡು ತಾಲೂಕಿನಲ್ಲಿ ಡೆಂಗ್ಯೂ ಅಬ್ಬರ ಹೆಚ್ಚುತ್ತಿದೆ. ತಾಲೂಕಿನಾದ್ಯಂತ ಈಗಾಗಲೇ 23 ಡೆಂಗ್ಯೂ ಹಾಗೂ 9 ಚಿಕನ್ ಗುನ್ಯಾ ಪ್ರಕರಣಗಳು ಬೆಳಕಿಗೆ ಬಂದಿದೆ. ಎಚ್ಚೆತ್ತ ತಾಲೂಕು ಆಡಳಿತ ಮುನ್ನೆಚ್ಚರಿಕೆ ಕ್ರಮಕ್ಕೆ ಮುಂದಾಗಿದೆ. ಪಟ್ಟಣದ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಇಂದು ಶಾಸಕ ದರ್ಶನ್ ಧೃವನಾರಾಯಣ್ ಹಾಗೂ ತಹಸೀಲ್ದಾರ್ ಶಿವಕುಮಾರ್ ಕಾಸ್ನೂರ್ , ಇ ಓ ಜೆರಾಲ್ಡ್ ರಾಜೇಶ್ ತಾಲೂಕು ಆರೋಗ್ಯ ವೈದ್ಯಾಧಿಕಾರಿ ಡಾ. ಈಶ್ವರ್ ನೇತೃತ್ವದಲ್ಲಿ ಸಭೆ ನಡೆದಿದೆ.
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಜಾಗೃತಿಯಿಂದ ಕೆಲಸ ಮಾಡಬೇಕು, ಜನರಲ್ಲಿ ಜಾಗೃತಿಯನ್ನು ಮೂಡಿಸಬೇಕು, ಸೊಳ್ಳೆ ಪ್ರಮಾಣ ಹೆಚ್ಚಾಗದಂತೆ ನಿಗವಹಿಸಬೇಕು.
ಮುಖ್ಯಮಂತ್ರಿಗಳ ತವರು ಕ್ಷೇತ್ರವಾಗಿರುವ ಕಾರಣ ಅಧಿಕಾರಿಗಳು ತಮ್ಮ ಜವಾಬ್ದಾರಿಯನ್ನ ಹೆಚ್ಚಿಸಿ ಕಟ್ಟುನಿಟ್ಟಾಗಿ ಕಾರ್ಯ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಯಾವ ಗ್ರಾಮ ಪಂಚಾಯಿತಿಯಲ್ಲಿ ಮತ್ತು ನಗರಸಭೆ ಯಾವ ವಾರ್ಡ್ ಗಳಲ್ಲಿ ಅತಿ ಹೆಚ್ಚು ಪ್ರಕರಣ ಕಂಡುಬರುತ್ತದೆ. ಅದಕ್ಕೆ ಅಧಿಕಾರಿಗಳೇ ಹೊಣೆಗಾರರಾಗುತ್ತೀರಿ. ಅಂತಹ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಮುಂದಾಗ ಬೇಕಾಗುತ್ತದೆ ಎಂದು ಶಾಸಕ ದರ್ಶನ್ ಎಚ್ಚರಿಕೆ ನೀಡಿದರು.
ಇದೇ ವೇಳೆ ಜಾಗೃತಿ ಮೂಡಿಸುವ ಬಿತ್ತಿ ಪತ್ರಗಳನ್ನು
ಬಿಡುಗಡೆಗೊಳಿಸಿದರು.
ಸಭೆಯಲ್ಲಿ ನಗರಸಭೆಯ ಆಯುಕ್ತ ನಂಜುಂಡಸ್ವಾಮಿ ಸಿ ಡಿಪಿಓ ಭವ್ಯಶ್ರೀ, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯಿತಿ ಪಿಡಿಒಗಳು ಸಭೆಯಲ್ಲಿ ಹಾಜರಿದ್ದರು.