11:14 PM Sunday9 - August 2026
ಬ್ರೇಕಿಂಗ್ ನ್ಯೂಸ್
ವೀರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಅಟ್ಟಹಾಸ ಮೆರೆದ ಚಿರತೆ ಸೆರೆ ವಿರಾಜಪೇಟೆ | ಮಾಲ್ದಾರೆಯಲ್ಲಿ ಮಹಿಳೆ ಮೇಲೆ ಚಿರತೆ ದಾಳಿ; ಗಂಭೀರ ಗಾಯ Kodagu | ವಿರಾಜಪೇಟೆ ಬಿಇಒ ಹೃದಯಾಘಾತದಿಂದ ಬಸ್ನಲ್ಲೇ ನಿಧನ ಚಿಕ್ಕಮಗಳೂರು | ಅಜ್ಜಂಪುರ ಬಳಿ ಸಚಿವ ಕೆ.ಜೆ.ಜಾರ್ಜ್ ಬೆಂಗಾಲು ವಾಹನ ಅಪಘಾತ ರಾಜೀನಾಮೆ ವಾಪಸ್ ಪಡೆದ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ್: ಸಚಿವ ಲಕ್ಷ್ಮಣ ಸವದಿ… ರಾಜ್ಯ ಸಂಪುಟ ವಿಸ್ತರಣೆ | ಅಪ್ಪ ಸಿದ್ದರಾಮಯ್ಯರ ಪಾತ್ರ ಬಿಚ್ಚಿಟ್ಟ ಪುತ್ರ ಯತೀಂದ್ರ;… ಚಂದ್ರನಿಗೆ ಅಪ್ಪಳಿಸಿದ ಇಲಾನ್ ಮಸ್ಕ್ ಸ್ಪೇಸ್‌ ಎಕ್ಸ್‌ನ ರಾಕೆಟ್‌: 100 ಅಡಿ ಕುಳಿ… 2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:…

ಇತ್ತೀಚಿನ ಸುದ್ದಿ

ಅವಿರತ ಪ್ರತಿಷ್ಠಾನದಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕ ವಿತರಣೆ

07/07/2024, 18:02

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಅವಿರತ ಪ್ರತಿಷ್ಠಾನದ ವತಿಯಿಂದ ಬಣಕಲ್ ವಿಲೇಜ್ ಶಾಲೆಯಲ್ಲಿ ನೋಟ್ ಪುಸ್ತಕಗಳನ್ನು ವಿತರಿಸಲಾಯಿತು.
ಅವಿರತ ಪ್ರತಿಷ್ಠಾನದ ಪರವಾಗಿ ಮಾತನಾಡಿದ ಸುಜ್ಞಾನ್ ಗ್ರಾಮೀಣ ಭಾಗದ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕವಾಗಿ ಅವಿರತ ಪ್ರತಿಷ್ಠಾನ ನಾಡಿನೆಲ್ಲೆಡೆ ತನ್ನದೇ ಕೊಡುಗೆ ನೀಡುತ್ತಾ ಬಂದಿದ್ದು, ಅದರಲ್ಲಿ ನೋಟ್ ಬುಕ್ ವಿತರಣೆಯು ಪ್ರಮುಖ ಕಾರ್ಯಕ್ರಮವಾಗಿದೆ ಎಂದರು.
ಶಾಲಾ ಮುಖ್ಯ ಶಿಕ್ಷಕರಾದ ಶಿವಮೂರ್ತಿ ಮಾತನಾಡಿ ಅವಿರತ ಪ್ರತಿಷ್ಠಾನದವರಿಗೆ ಧನ್ಯವಾದಗಳನ್ನು ಅರ್ಪಿಸಿದರು. ಅಲ್ಲದೇ ಬಣಕಲ್ ವಿಲೇಜ್ ಶಾಲೆಯಲ್ಲಿ ಸ್ಮಾರ್ಟ್ ಕ್ಲಾಸ್ ಸೇರಿದಂತೆ ತಂತ್ರಜ್ಞಾನ ಆಧಾರಿತ ಆಧುನಿಕ ಶಿಕ್ಷಣ ಕ್ರಮಗಳನ್ನು ಅಳವಡಿಸಿ ಕೊಂಡಿದ್ದು ಬಣಕಲ್ ಸುತ್ತಮುತ್ತಲಿನ ಜನರು ತಮ್ಮ ಮಕ್ಕಳನ್ನು ಶಾಲೆಗೆ ದಾಖಲಿಸುವ ಮೂಲಕ ಸೌಲಭ್ಯಗಳ ಸದುಪಯೋಗ ಪಡಿಸಿಕೊಳ್ಳ ಬೇಕು ಎಂದು ಮನವಿ ಮಾಡಿದರು.
ಶಾಲಾ ಶಿಕ್ಷಕರಾದ ಪೂರ್ಣೇಶ್ ಮತ್ತಾವರ, ಎಸ್.ಡಿ.ಎಂ.ಸಿ ಸದಸ್ಯರು, ಪೋಷಕರು ಹಾಜರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು