1:25 PM Wednesday4 - March 2026
ಬ್ರೇಕಿಂಗ್ ನ್ಯೂಸ್
ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು

ಇತ್ತೀಚಿನ ಸುದ್ದಿ

ಹೊಸ್ಮಾರುವಿನಲ್ಲಿ ಕಾಂಪ್ಲೆಕ್ಸ್‌ಗೆ ಪ್ರಥಮ ಬಾರಿ ತುಲುಲಿಪಿ ನಾಮಫಲಕ

22/08/2021, 18:08

ಹೊಸ್ಮಾರು(reporterkarnataka.com); ರವೀಂದ್ರ ಪೂಜಾರಿ ಮಾಲಿಕತ್ವದ ಹೊಸ್ಮಾರು ಈದು ಕ್ರಾಸ್ ಬಳಿಯಿರುವ ಮನ್ವಿತ್ ಕಾಂಪ್ಲೆಕ್ಸ್‌ಗೆ ಜೈ ತುಲುನಾಡ್ ರಿ. ಸಂಘಟನೆ ಕಾರ್ಲ ಘಟಕದ ಸಹಕಾರದೊಂದಿಗೆ ತುಲು ಲಿಪಿಯಲ್ಲಿ ನಾಮಫಲಕ ಅಳವಡಿಸಲಾಯಿತು.


ಈದು ಗ್ರಾಮದಲ್ಲಿ ಪ್ರಥಮ ಬಾರಿ ಕಾಂಪ್ಲೆಕ್ಸ್‌ಗೆ ತುಲುಲಿಪಿ ಅಳವಡಿಕೆ ಮಾಡಿದ ಹೆಗ್ಗಳಿಕೆಗೆ ಪಾತ್ರವಾಯಿತು. ರವೀಂದ್ರ ಪೂಜಾರಿಯವರು ತುಲುಲಿಪಿಯ ಬಗ್ಗೆ ಅಪಾರ ಆಸಕ್ತಿ ಹೊಂದಿದ್ದು ತಾನು ಹೊರ ದೇಶದಲ್ಲಿದ್ದರೂ ಕೂಡ ತುಲು ಲಿಪಿಯನ್ನು ಕಲಿಯುತ್ತಿದ್ದಾರೆ ಮತ್ತು ಅವರ ಪತ್ನಿ ಮಕ್ಕಳು ತುಲುಲಿಪಿಯನ್ನು ಕಲಿಯುತ್ತಿದ್ದಾರೆ.

ನಾಮ ಫಲಕದ ಉದ್ಘಾಟನೆಯನ್ನು ಪೂರ್ಣಿಮಾ ರವೀಂದ್ರ ಪೂಜಾರಿ ನೆರೆವೇರಿಸಿದರು. ಈ ಸಂದರ್ಭದಲ್ಲಿ ಜೈ ತುಲುನಾಡ್ ರಿ. ಕೇಂದ್ರ ಸಂಘಟನಾ ಕಾರ್ಯದರ್ಶಿ ಆರ್‌.ಸಿ   ದುರ್ಗಾನಗರ, ಕಾರ್ಲ ಯುನಿಟ್‌ನ ಸಂಚಾಲಕರಾದ ವಿಶು ಶ್ರೀಕೇರ, ಶೇಖರ್ ಶ್ರೀಗಂಗೆ, ನಾರಾವಿ  ಸಂತ ಅಂತೋನಿ ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕ ಪ್ರದೀಪ್ ಬಿ.

ಹಾಗೂ ಸದಸ್ಯರಾದ ಪ್ರಶಾಂತ್ ಶ್ರೀನಿಧಿ, ಪ್ರೀತಂ ಕೋಟ್ಯಾನ್ ಬಜಗೋಳಿ, ದಿವಾಕರ್ ಈದು, ಗಣೇಶ್ ಈದು, ಲಕ್ಮೀ , ಹೋಟೆಲ್ ನ್ಯೂ ಸುರಕ್ಷಾ ಮಾಲಕರಾದ ಗುಲಾಬಿ ಗೋಪಾಲ್, ಶೃಂಗಾರ ಪ್ಯಾನ್ಸಿ& ಪಾರ್ಲರ್ ಮಾಲಕರಾದ ವೀಣಾ ಸತೀಶ್ ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು