2:54 AM Wednesday25 - March 2026
ಬ್ರೇಕಿಂಗ್ ನ್ಯೂಸ್
ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ… ಲ್ಯಾಂಬೊರ್ಗಿನಿ ಕಾರು ಗಿರಿಗಿಟ್ಲೆ ಹೊಡೆಸಿದ ಪ್ರಕರಣ: ಮುತ್ತಪ್ಪ ರೈ ಪುತ್ರ ರಿಕ್ಕಿ ರೈ,… ಮತ್ತೆ ಬಾಬಾ ಬುಡನ್ ಗಿರಿ ದತ್ತಪೀಠ ವಿವಾದ: ಪೂಜಾ-ವಿಧಿ ವಿಧಾನದ ವಿಚಾರದಲ್ಲಿ ಮುಸ್ಲಿಮರ… ದಾವಣಗೆರೆ ದಕ್ಷಿಣ ಬಿಜೆಪಿ ಅಭ್ಯರ್ಥಿ ನಾಮಪತ್ರ ಸಲ್ಲಿಕೆ: ಯಡಿಯೂರಪ್ಪ ನೇತೃತ್ವದಲ್ಲಿ ಬೃಹತ್‌ ರೋಡ್‌… ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣ: ಮರುತನಿಖೆ ಕೋರಿ ಸಲ್ಲಿಸಿದ ಮೇಲ್ಮನವಿ ಸುಪ್ರೀಂ ಕೋರ್ಟ್… ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ; ಒಮ್ಮತದಿಂದ ಸಮರ್ಥ್‌ಗೆ ಟಿಕೆಟ್‌: ಡಿಸಿಎಂ ಡಿ.ಕೆ. ಶಿವಕುಮಾರ್ ಬಾಗಲಕೋಟೆ: ಕಾಂಗ್ರೆಸ್ ಅಭ್ಯರ್ಥಿ ಉಮೇಶ್ ಮೇಟಿ, ಬಿಜೆಪಿಯಿಂದ ವೀರಣ್ಣ ಚರಂತಿಮಠ ನಾಮಪತ್ರ ಸಲ್ಲಿಕೆ

ಇತ್ತೀಚಿನ ಸುದ್ದಿ

ಸಮಾಜಘಾತಕರಿಗೆ ಸಿಂಹಸ್ವಪ್ನವಾಗಿದ್ದ ಠಾಣೆ ಇದೀಗ ಕೇಳುವವರಿಲ್ಲ!: ಗೃಹ ಸಚಿವರೇ, ಮುಚ್ಚಿಹೋದ ಬದನವಾಳು ಉಪ ಪೊಲೀಸ್ ಠಾಣೆಗೆ ಕಾಯಕಲ್ಪ ಎಂದು?

08/07/2024, 16:19

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಿ.ಶ್ರೀನಿವಾಸ್ ಪ್ರಸಾದ್ ಹಾಗೂ ದಿ.ಧೃವನಾರಾಯಣ್ ರವರ ನಿರಂತರ ಒತ್ತಡಕ್ಕೆ ಮಣಿದ ಸರ್ಕಾರ ಸ್ಥಾಪಿಸಿದ ಬದನವಾಳು ಉಪ ಪೊಲೀಸ್ ಠಾಣೆ ಅವಸಾನದ ಅಂಚಿಗೆ ತಲುಪಿದೆ. ಪೊಲೀಸ್ ಇಲಾಖೆಯ ನಿರ್ಲಕ್ಷ್ಯಕ್ಕೆ ಒಳಗಾಗಿ ನಿರಪಯುಕ್ತವಾಗಿ ಪಾಳು ಬಿದ್ದಿದೆ. ಲಕ್ಷಾಂತರ ರೂ ವೆಚ್ಚ ಮಾಡಿ ನಿರ್ಮಿಸಿದ ಸುಸಜ್ಜಿತ ಕಟ್ಟಡ ಬಳಕೆಗೆ ಬಾರದೆ ಮೂಕ ರೋಧನೆ ಅನುಭವಿಸುತ್ತಿದೆ.
ಕಿಡಿಗೇಡಿಗಳು ಸಮಾಜ ಘಾತಕರಿಗೆ ಸಿಂಹಸ್ವಪ್ನವಾಗಿದ್ದ ಠಾಣೆ ಇದೀಗ ಕೇಳುವವರಿಲ್ಲದೆ ಅಸ್ತಿತ್ವಕ್ಕಾಗಿ ಎದುರು ನೋಡುತ್ತಿದೆ.
ನಂಜನಗೂಡು ತಾಲ್ಲೂಕಿನ ಬದನವಾಳು ಗ್ರಾಮದಲ್ಲಿ ಹಿಂದೆ ನಡೆದ ಮತೀಯ ಸಂಘರ್ಷ ರಾಜ್ಯದಲ್ಲಿ ಮತ್ತು ದೇಶದಲ್ಲಿ ಸಂಚಲನ ಮೂಡಿಸಿತ್ತು. ಕಿಡಿಗೇಡಿಗಳ ಅಟ್ಟಹಾಸಕ್ಕೆ ಬದನವಾಳು ಗ್ರಾಮ ನಲುಗಿತ್ತು. ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಖದೀಮರ ಹೆಡೆಮುರಿ ಕಟ್ಟುವ ಉದ್ದೇಶದಿಂದಲೇ ಇಲ್ಲೊಂದು ಉಪಠಾಣೆ ಸ್ಥಾಪನೆ ಆಗಲೇಬೇಕೆಂದು ಪಟ್ಟುಹಿಡಿದ ಶ್ರೀನಿವಾಸ್ ಪ್ರಸಾದ್ ಹಾಗೂ ಧೃವನಾರಾಯಣ್ ಸರ್ಕಾರದ ಕಣ್ಣು ತೆರೆಸಿ ಯಶಸ್ವಿಯಾಗಿ 1992-93ನೇ ಸಾಲಿನಲ್ಲಿ ಲಕ್ಷಾಂತರ ರೂ. ಖರ್ಚು ಮಾಡಿ ಠಾಣೆ ಚಾಲನೆಗೆ ಬಂತು. ಹತ್ತಾರು ವರ್ಷಗಳ ಕಾಲ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸಾರ್ವಜನಿಕರ ಹಿತರಕ್ಷಣೆಗಾಗಿ ಸ್ಪಂದಿಸಿದ ಪೊಲೀಸ್ ಠಾಣೆ ಇದೀಗ ಸಾಕಷ್ಟು ಅನುಕೂಲಗಳಿದ್ದ ಸುಸಜ್ಜಿತ ಕಟ್ಟಡ ಕ್ರಮೇಣ ಅವಸಾನದ ಅಂಚಿಗೆ ತಲುಪಿದೆ. ಲಕ್ಷಾಂತರ ರೂ ವೆಚ್ಚ ಮಾಡಿದ ಕಟ್ಟಡಕ್ಕೆ ಸೂಕ್ತ ನಿರ್ವಹಣೆ ಇಲ್ಲದೆ ಸೊರಗಿದೆ. ಇಲ್ಲಿ ನಡೆಯಬೇಕಿದ್ದ ಕಾರ್ಯಚಟುವಟಿಕೆಗಳು ದೊಡ್ಡ ಕವಲಂದೆ ಪೊಲೀಸ್ ಠಾಣೆಗೆ ಶಿಫ್ಟ್ ಆಗಿದೆ. ಬದನವಾಳು ಗ್ರಾಮದಲ್ಲಿ ಮುಚ್ಚಿ ಹೋಗಿರುವ ಸುಸಜ್ಜಿತ ಕೊಠಡಿಯಲ್ಲಿ ಎರಡು ಸೆಲ್ ಗಳಿವೆ. ಪೀಠೋಪಕರಣಗಳು ಸಧ್ಯ ಗೆದ್ದಲು ಹಿಡಿದಿದೆ. ಕೇಳುವವರಿಲ್ಲದ ಕಾರಣ ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎನ್ನಲಾಗಿದೆ. ಎಲ್ಲಾ ರೀತಿಯ ಮೂಲಭೂತ ಸೌಕರ್ಯಗಳಿದ್ದರೂ ಇದನ್ನ ಕಡೆಗಣಿಸಿದ್ದೇಕೆ ಎಂಬ ಪ್ರಶ್ನೆಗೆ ಉತ್ತರ ಸಿಗುತ್ತಿಲ್ಲ.


ನಂಜನಗೂಡು ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ಈ ಉಪ ಪೊಲೀಸ್ ಠಾಣೆಗೆ ಜೀವ ತುಂಬಲು
ಗೃಹ ಸಚಿವರೇ ಮನಸ್ಸು ಮಾಡಬೇಕಿದೆ. ಸ್ಥಳೀಯರ ಪಾಲಿಗೆ ಕಾನೂನು ಸುವ್ಯವಸ್ಥೆ ಹತೋಟಿಗೆ ತರಲು ವರದಾನವಾಗಿದ್ದ ಈ ಉಪಠಾಣೆಗೆ ಕಾಯಕಲ್ಪ ನೀಡಿ ಮರುಬಳಕೆ ಮಾಡುವರೇ ಕಾದುನೋಡಬೇಕಿದೆ…?
..l

ಇತ್ತೀಚಿನ ಸುದ್ದಿ

ಜಾಹೀರಾತು