5:23 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಬಿಜೈ ಸಮೀಪ ಮನೆ ದರೋಡೆ: ಮನೆಮಂದಿಯ ಕಟ್ಟಿ ಹಾಕಿ ಹಲ್ಲೆ; ಚಡ್ಡಿ ಗ್ಯಾಂಗ್ ಕೃತ್ಯ?

09/07/2024, 12:28

ಮಂಗಳೂರು(reporterkarnataka.com):ಉರ್ವ ಬಳಿ ಮನೆಯ ಕಿಟಕಿ ಗ್ರಿಲ್ ಕತ್ತರಿಸಿ ಮನೆ ದರೋಡೆಗೆ ವಿಫಲ ಯತ್ನ ನಡೆಸಿದ ಬೆನ್ನಲ್ಲೇ
ನಗರದಲ್ಲಿ ಮತ್ತೆ ದರೋಡೆ ಪ್ರಕರಣ ಬೆಳಕಿಗೆ ಬಂದಿದೆ. ನಗರದ ಬಿಜೈ ಕಾಪಿಕಾಡ್ ಬಳಿಯ ದಡ್ಡಲ್ ಕಾಡು ಕೋಟೆಕಣಿ ಸಮೀಪ ಇಂದು
ಮುಂಜಾನೆ ಮನೆಯೊಂದಕ್ಕೆ ನುಗ್ಗಿದ ಕಳ್ಳರು ಇಬ್ಬರನ್ನು ಕಟ್ಟಿಹಾಕಿ ಹಲ್ಲೆ ನಡೆಸಿ ಚಿನ್ನಾಭರಣ ದರೋಡೆ ಮಾಡಿದ ಘಟನೆ ನಡೆದಿದೆ.
ಚಡ್ಡಿ ಗ್ಯಾಂಗ್ ತಂಡ ಉರ್ವದಲ್ಲಿ ಮನೆ ದರೋಡೆಗೆ ಯತ್ನಿಸಿತ್ತು. ಸುಮಾರು 5 ಮಂದಿ ಇದ್ದ ತಂಡ ಕಳ್ಳತನಕ್ಕೆ ಯತ್ನಿಸುವ ದೃಶ್ಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿತ್ತು.
ಬಿಜೈ ಪ್ರಕರಣದಲ್ಲಿ ದರೋಡೆಕೋರರು ಕಾರಿನಲ್ಲಿ ಆಗಮಿಸಿದ್ದು, ಹೆಜಮಾಡಿ ಟೋಲ್ ಗೇಟ್ ಸಮೀಪ ಕಾರು ನಿಲ್ಲಿಸಿ ಪರಾರಿಯಾಗಿದ್ದಾರೆ. ಉರ್ವ ಪೊಲೀಸರು, ಹಿರಿಯ ಅಧಿಕಾರಿಗಳು, ಬೆರಳಚ್ಚು ತಜ್ಞರು ತೆರಳಿ ಪರಿಶೀಲನೆ ನಡೆಸಿದ್ದಾರೆ. ಮುಲ್ಕಿ ಪೊಲೀಸರು ಕಾರನ್ನು ಪತ್ತೆಹಚ್ಚಿ, ವಶಕ್ಕೆ ಪಡೆದುಕೊಂಡಿದ್ದಾರೆ.
ಘಟನೆ ಬೆನ್ನಲ್ಲೇ ಪೊಲೀಸರು ದರೋಡೆಗೈದ ಮನೆಯ ಸುತ್ತಮುತ್ತ, ರಸ್ತೆ, ಹೆದ್ದಾರಿಯ ಸಿಸಿ ಕ್ಯಾಮೆರಾಗಳನ್ನು ಶೋಧ ನಡೆಸುತ್ತಿದ್ದಾರೆ. ಇದು ಕೂಡ ಚಡ್ಡಿ ಗ್ಯಾಂಗ್ ಕೃತ್ಯ ಇರಬಹುದೇ ಎಂಬ ಶಂಕೆ ವ್ಯಕ್ತವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು