8:50 PM Thursday23 - October 2025
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆ: ಕಡೂರು ಸಮೀಪದ ಹಡಗಲು ಗ್ರಾಮ ಅಕ್ಷರಶಃ ಜಲಾವೃತ ಕೊಡಗಿನಲ್ಲಿ ಅಸ್ಸಾಂ ಕಾರ್ಮಿಕರಿಂದ ಆಟೋ ಚಾಲಕನ ಮೇಲೆ ಹಲ್ಲೆ: ಸೋಮವಾರಪೇಟೆ ಪೊಲೀಸ್ ಠಾಣೆಯಲ್ಲಿ… ಕೊಡ್ಲಿಪೇಟೆಯಲ್ಲಿ ಉದ್ಯಮಿ ಮೇಲೆ ಲಾರಿ ಹರಿಸಿ ಕೊಲೆ ಯತ್ನ: ವಾಹನ ಬಿಟ್ಟು ಚಾಲಕ… ಪುತ್ತೂರು: ಅಕ್ರಮ ಜಾನುವಾರು ಸಾಗಾಟ; ಆರೋಪಿ ಕಾಲಿಗೆ ಪೊಲೀಸರು ಗುಂಡೇಟು; ಓರ್ವನ ಸೆರೆ,… ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು