12:34 PM Tuesday4 - August 2026
ಬ್ರೇಕಿಂಗ್ ನ್ಯೂಸ್
ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ ಕಾವೇರಿ ನೀರು ಹಂಚಿಕೆ ವಿವಾದ | ಕಾನೂನು ತಜ್ಞರು, ಪ್ರತಿಪಕ್ಷಗಳ ಸಲಹೆ ಬಳಿಕ… ಮಂಗಳೂರು ಪೊಲೀಸರಿಂದ ಸುಮಾರು 82 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶ: 157… ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು…

ಇತ್ತೀಚಿನ ಸುದ್ದಿ

ರಾಹುಲ್ ವಿರುದ್ಧ ಹೇಳಿಕೆ ಶಾಸಕ ಡಾ. ಭರತ್ ಶೆಟ್ಟಿ ಅವರ ಸಂಸ್ಕೃತಿಯನ್ನು ಬಿಂಬಿಸುತ್ತದೆ: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ

09/07/2024, 17:51

ಮಂಗಳೂರು(reporterkarnataka.com): ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿಯವರ ಕಪಾಳಕ್ಕೆ ಹೊಡೆಯಬೇಕು ಎಂಬ ಬಿಜೆಪಿ ಶಾಸಕ ಡಾ.ಭರತ್ ಶೆಟ್ಟಿ ಅವರ ಹೇಳಿಕೆ ಅವರ ಸಂಸ್ಕೃತಿ ಏನು ಎಂಬುದನ್ನು ತಿಳಿಸುತ್ತದೆ. ಶಾಸಕರು ದ್ವೇಷ ಬಿತ್ತುವುದನ್ನು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಆಗ್ರಹಿಸಿದ್ದಾರೆ.

ಶಾಸಕರು ಮಾತಾಡುವಾಗ ತಾನೊಬ್ಬ ಸುಶಿಕ್ಷಿತ, ವೈದ್ಯ, ಶಾಸಕನಾಗಿದ್ದೇನೆ ಎಂಬುದ್ದಕ್ಕಾದರೂ ಬೆಲೆ ಕೊಡಬೇಕಿತ್ತು. ಅವರು ಮಾತನಾಡುದ ಮಾತು ಹಿಂದು ಸಮಾಜ ತಿಳಿಸಿಕೊಟ್ಟ ಸಂಸ್ಕೃತಿಯೇ? ಒಬ್ಬ ಹಿಂದು ಸಮಾಜದ ವ್ಯಕ್ತಿ ಎಂದು ಬಿಂಬಿಸಿಕೊಳ್ಳುತ್ತಿರುವ ವ್ಯಕ್ತಿ ಸಂವಿಧಾನದ ಹುದ್ದೆಗಾದರೂ ಗೌರವ ಕೊಡಬೇಕಿತ್ತು ಎಂದು ಅವರು ನುಡಿದರು.
ಪ್ರತಿಭಟನೆ ವೇಳೆ ಸಂಸದ ಬೃಜೇಶ್ ಚೌಟ ಅವರೂ ಇದ್ದರು. ಚೌಟರು ರಸ್ತೆಯಲ್ಲಿ ಕುಳಿತು ಪ್ರತಿಭಟನೆ ಮಾಡುವುದಕ್ಕಿಂತ, ರಾಹುಲ್ ‌ಗಾಂಧಿಯವರು ಏನು ಮಾತನಾಡಿದ್ದಾರೆ, ಆ ಬಗ್ಗೆ ಸದನದಲ್ಲಿ ಪ್ರತಿಕ್ರಿಯಿಸುವ ಅವಕಾಶ ಇದೆ. ಅಲ್ಲಿ ಈ ವಿಚಾರದ ಬಗ್ಗೆ ಮಾತಾಡಲಿ. ಅದು ಬಿಟ್ಟು ರಸ್ತೆಯಲ್ಲಿ ನಿಂತು ಪ್ರತಿಭಟಿಸುವುದಲ್ಲ ಎಂದು ಪದ್ಮರಾಜ್ ನುಡಿದಿದ್ದಾರೆ.

ಪ್ರತಿಪಕ್ಷದ ನಾಯಕನಾಗಿ ರಾಹುಲ್‌ಗಾಂಧಿ ಸದನದಲ್ಲಿ ಮಾತನಾಡಿರುವುದನ್ನು ಹಿಂದು ಸಮಾಜ ಸೇರಿ ಸ್ವಾಮೀಜಿಗಳು ಸ್ವಾಗತಿಸಿದ್ದಾರೆ. ರಾಹುಲ್ ಗಾಂಧಿ ಹಿಂದು ಸಮಾಜವನ್ನು ಎಂದೂ ದೂಷಣೆ ಮಾಡಿಲ್ಲ. ಹಿಂದು ಸಮಾಜದ ಹೆಸರು ಹೇಳಿಕೊಂಡು ದ್ವೇಷಕಾರುತ್ತಿರುವ ಬಿಜೆಪಿ, ಆರ್.ಎಸ್.ಎಸ್.ನ ದ್ವೇಷದ ರಾಜಕಾರಣವನ್ನು ವಿರೋಧಿಸಿದ್ದಾರೆ ಎಂಬುದು ಸಮಸ್ತ ಭಾರತೀಯರಿಗೆ ತಿಳಿದಿದೆ. ಅದನ್ನು ಶಾಸಕರು ವಿಷಯಾಂತರ ಮಾಡಿ ಮತ್ತೆ ದ್ವೇಷ ಬಿತ್ತುವುದನ್ನು ಶಾಸಕರು ಕೈಬಿಟ್ಟು ಕೂಡಲೇ ರಾಹುಲ್ ಗಾಂಧಿಯವರ ವಿರುದ್ಧ ಹೇಳಿಕೆಗೆ ಕ್ಷಮೆ ಕೇಳಲಿ ಎಂದು ಈ ಮೂಲಕ ಆಗ್ರಹಿಸುತ್ತೇನೆ ಎಂದಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು