12:37 AM Tuesday22 - October 2024
ಬ್ರೇಕಿಂಗ್ ನ್ಯೂಸ್
ಸುರತ್ಕಲ್ ಎನ್ ಐಟಿಕೆ: ಯುವ ಸ್ಕೌಟ್ಸ್ ಮತ್ತು ಗೈಡ್ಸ್ ಸಂಪರ್ಕಿಸುವ ‘ಜಂಬೋರಿ ಆನ್… ರೈಲ್ವೆ ಹಳಿ ಮೇಲೆ ಕಲ್ಲು ಇಟ್ಟ ದುಷ್ಕರ್ಮಿಗಳನ್ನು ತಕ್ಷಣ ಬಂಧಿಸಿ: ಸಂಸದ ಕ್ಯಾ.… ಕ್ರೂರ ವಿಧಿಯಾಟ: ಮದುವೆ ನಿಶ್ಚಿತಾರ್ಥವಾದ ಯುವತಿ ರಸ್ತೆ ಅಪಘಾತಕ್ಕೆ ಬಲಿ; ಮುಂದಿನ ತಿಂಗಳು… ಚಿಕ್ಕಮಗಳೂರು: ಭಾರೀ ಮಳೆ; ಜನಜೀವನ ಅಸ್ತವ್ಯಸ್ತ; ಸಿಡಿಲಿಗೆ ಎತ್ತು ಬಲಿ ವಿಜ್ಞಾನ ಮೇಳ: ಸೆನ್ಸಾರ್ ಆಧಾರಿತ ಮಾದರಿಯಲ್ಲಿ ಸೇವಾ ಭಾರತಿ ವಿದ್ಯಾರ್ಥಿ ನಹುಷ್ ಪ್ರಥಮ ಏಷ್ಯಾದ ಗೇಮಿಂಗ್ ಮತ್ತು ಅನಿಮೇಷನ್ ರಾಜಧಾನಿಯಾಗುವುದು ಕರ್ನಾಟಕದ ಗುರಿ: ಐಜಿಸಿ 2024ರಲ್ಲಿ ಸಚಿವ… ಬಿಳಾಲುಕೊಪ್ಪ-ಬಸರೀಕಟ್ಟೆ ರಸ್ತೆ ಕೆಸರುಮಯ: ಬಸ್ ಸಂಚಾರ ಸ್ಥಗಿತ, ಪ್ರಯಾಣಿಕರ ಪರದಾಟ ಅ.19-21: ಎಸಿಪಿಐ ಮತ್ತು ಮಂಗಳೂರು ವಿವಿ ಕ್ರೈಸ್ತ ವಿದ್ಯಾಪೀಠದಿಂದ 47ನೇ ವಾರ್ಷಿಕ ಸಂಶೋಧನಾ… ಮಂಗಳೂರಿನಲ್ಲಿ ಹೈಕೋರ್ಟ್ ಪೀಠ ಸ್ಥಾಪನೆ: ಪ್ರಬಲ ಹೋರಾಟಕ್ಕೆ ಸಜ್ಜು ಸೈಂಟ್ ಜೋಸೆಫ್ ವಿಶ್ವವಿದ್ಯಾನಿಲಯಕ್ಕೆ ಹಳೆ ವಿದ್ಯಾರ್ಥಿನಿ, ಮಾಲ್ಡೀವ್ಸ್ ಗಣರಾಜ್ಯದ ಪ್ರಥಮ ಮಹಿಳೆ ಸಾಜಿದಾ…

ಇತ್ತೀಚಿನ ಸುದ್ದಿ

ಉರ್ವ ವೇಲ್ಸ್ ಪೇಟೆ ಶ್ರೀ ಬಬ್ಬುಸ್ವಾಮಿ ಕ್ಷೇತ್ರ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆ

09/07/2024, 17:56

ಮಂಗಳೂರು(reporterkarnataka.com): ತುಳುನಾಡಿನಲ್ಲಿ ಪ್ರತಿಯೊಂದು ಧಾರ್ಮಿಕ ಕ್ಷೇತ್ರಗಳು ಕಾರಣಿಕ ಕ್ಷೇತ್ರಗಳಾಗಿ ಪ್ರಸಿದ್ಧಿ ಪಡೆದಿವೆ. ಧಾರ್ಮಿಕ ಆಚರಣೆಗಳು ನಿರಂಂತರವಾಗಿ ಮುಂದುವರಿಯಬೇಕು. ಜೀರ್ಣೋದ್ಧಾರ ಕಾರ್ಯಕ್ಕೆ ಸಿದ್ಧವಾಗುತ್ತಿರುವ ಉರ್ವ ವೇಲ್ಸ್ ಪೇಟೆ‌ ಶ್ರೀ ಬಬ್ಬುಸ್ವಾಮಿ‌ ಕ್ಷೇತ್ರದ ಕಾರ್ಯಗಳಿಗೆ‌ ತನ್ನಿಂದಾದ ಅಗತ್ಯ ನೆರವು ಒದಗಿಸಲಾಗುವುದು ಎಂದು ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ.ವೇದವ್ಯಾಸ ಕಾಮತ್ ಹೇಳಿದರು.

ಅವರು ಸೋಮವಾರ ಶ್ರೀ ಕೋಟೆದ ಬಬ್ಬುಸ್ವಾಮಿ ದೈವಸ್ಥಾನ ಉರ್ವ ವೇಲ್ಸ್ ಪೇಟೆ ಇಲ್ಲಿನ ಶ್ರೀ ಬಬ್ಬುಸ್ವಾಮಿ ಹಾಗೂ ಪರಿವಾರ ದೈವಗಳ ದೈವಸ್ಥಾನದ ಪುನರ್ ನಿರ್ಮಾಣದ ವಿಜ್ಞಾಪಣಾ ಪತ್ರ ಬಿಡುಗಡೆಗೊಳಿಸಿ ಮಾತನಾಡಿದರು.
ದೈವ ದೇವರ ಕೆಲಸ ಮಾಡುವುದೆಂದರೆ ಅದೊಂದು ಪುಣ್ಯದ ಕೆಲಸ. ಶಾಸಕನಾಗಿ ನನಗೂ ಹಲವು ಕ್ಷೇತ್ರಗಳ ಅಭಿವೃದ್ಧಿ ಕಾರ್ಯದಲ್ಲಿ ಪಾಲ್ಗೊಳ್ಳುವ ಅವಕಾಶ ಸಿಕ್ಕಿದೆ. ಸಾರ್ವಜನಿಕರು, ಜನಪ್ರತಿನಿಧಿಗಳಿಂದ ಕೂಡ ವೇಲ್ಸ್ ಪೇಟೆಯ ಬಬ್ಬುಸ್ವಾಮಿ‌ ಕ್ಷೇತ್ರದ ಅಭಿವೃದ್ಧಿಗೆ ನೆರವು ದೊರೆಯುವಂತಾಗಲಿ ಎಂದವರು ಹೇಳಿದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್‌ ಚೌಟ‌ ಶುಭ ಹಾರೈಸಿದರು.
ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ಕಾರ್ಯಕ್ರಮ ಉದ್ಘಾಟಿಸಿದರು.
ಕ್ಷೇತ್ರದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ಡಾ.ಬಿ.ಜಿ.ಸುವರ್ಣ, ಕ್ಷೇತ್ರದ ಗುರಿಕಾರ ಬಾಲಕೃಷ್ಣ ಯು.ಎಸ್‌. ಮಾಜಿ ಮೇಯರ್ ಶಶಿಧರ ಹೆಗ್ಡೆ, ಕಾರ್ಪೋರೇಟರ್ ಗಳಾದ ಗಣೇಶ್ ಕುಲಾಲ್, ಕಿರಣ್ ಕುಮಾರ್ ಕೋಡಿಕಲ್, ಮನೊಜ್ ಕೋಡಿಕಲ್, ಸುರೇಖಾ ಶ್ರೀನಿವಾಸ್, ಸಿನೆಮಾ ನಿರ್ದೇಶಕ ವಿಜಯ್ ಕುಮಾರ್ ಕೋಡಿಯಾಲ್ ಬೈಲ್, ಉರ್ವ ಮಾರಿಯಮ್ಮ ಕ್ಷೇತ್ರದ ಆಡಳಿತ ಮೊಕ್ತೇಸರ ಲಕ್ಷ್ಮಣ್ ಕೋಡಿಕಲ್ ಚಾಮುಂಡೇಶ್ವರಿ ಕ್ಷೇತ್ರದ ಪ್ರಮುಖರಾದ ದೀಪಕ್, ಪ್ರಮುಖರಾದ ಬಾಬಾ ಅಲಂಕಾರ್‌,ರಾಧಾಕೃಷ್ಣ ಅಶೋಕನಗರ, ಕೃಷ್ಣ ಅಡಿಗ, ರವಿ ಕಾಪಿಕಾಡ್, ಅಮಿತಕಲಾ, ಸುಧಾಕರ ಆಳ್ವ, ಅರುಣ್ ಉರ್ವ, ಭುಜಂಗ ಶ್ರೀಯಾನ್, ರಮಾನಾಥ ಶೆಟ್ಟಿ, ವಿಠೋಬಾ ನೆಲ್ಲಿಪಾಡಿ, ಉದ್ಯಮಿ ದೀಪಕ್ ಶೆಟ್ಟಿ, ಮತ್ತಿತರರು ಉಪಸ್ಥಿತರಿದ್ದರು.
ಸಮಿತಿಯ ಜೊತೆ ಕಾರ್ಯದರ್ಶಿ ರಘುವೀರ್ ಬಾಬು ಗುಡ್ಡೆ ಸ್ವಾಗತಿಸಿದರು. ರಘುವೀರ್ ಕದ್ರಿ ವಂದಿಸಿದರು. ಚೇತನ್ ಪಿಲಿಕುಳ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು