10:15 AM Friday9 - May 2025
ಬ್ರೇಕಿಂಗ್ ನ್ಯೂಸ್
Karnataka CM | ಮೈಶುಗರ್ ಕಾರ್ಖಾನೆಗೆ 50 ಕೋಟಿ ಕೊಟ್ಟಿದ್ದಷ್ಟೆ ಅಲ್ಲ, ವಿದ್ಯುತ್… ಆಪರೇಷನ್ ಸಿಂಧೂರ; ಪ್ರಧಾನಿ ಮೋದಿ ಅವರ ಬದ್ಧತೆ, ಧೃಢ ನಿರ್ಧಾರವನ್ನು ಸ್ವಾಗತಿಸಿದ ಮಾಜಿ… ಬೆಂಗಳೂರು ಜ್ಞಾನಭಾರತಿ ವಿಶ್ವವಿದ್ಯಾಲಯದಲ್ಲಿ ರಿಜಿಸ್ಟ್ರಾರ್ ಹುದ್ದೆಗೆ 35 ಲಕ್ಷ ರೂ. ವಂಚನೆ: ಎಫ್… Doddaballapura | ಘಾಟಿ ಸುಬ್ರಹ್ಮಣ್ಯ ಕ್ಷೇತ್ರ: ಸರಳ ಸಾಮೂಹಿಕ ವಿವಾಹದಲ್ಲಿ 66 ಜೋಡಿಗಳಿಗೆ… Ex CM | ಸಿಂಧೂರ ಕಳೆದುಕೊಂಡ ಹೆಣ್ಣು ಮಕ್ಕಳ ಪ್ರತೀಕಾರ: ಮಾಜಿ ಮುಖ್ಯಮಂತ್ರಿ… Chikkamagaluru | ಮಲೆನಾಡಿನಲ್ಲಿ ಮಿತಿಮೀರಿದ ಕಾಡುಪ್ರಾಣಿಗಳ ಉಪಟಳ: ಮೂಡಿಗೆರೆ ಸಮೀಪ ಹಸುವನ್ನು ಕೊಂದ… ಮಾಜಿ ಮುಖ್ಯಮಂತ್ರಿ, ದಿವಂಗತ ಕೆ.ಸಿ.ರೆಡ್ಡಿ ಅವರ ಜನ್ಮದಿನ: ಭಾವಚಿತ್ರಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಲಾರ್ಪಣೆ ಮಾವಿನ ರಾಜಧಾನಿ ಶ್ರೀನಿವಾಸಪುರ ಮತ್ತೆ ಸಜ್ಜು: ಮೇ 15ರಿಂದ ಮಾರಾಟ ಭರ್ಜರಿ ಆರಂಭ Chikkamagaluru | ಕಾಶ್ಮೀರದಲ್ಲಿ ಉಗ್ರರ ದಾಳಿ: ಕೊಟ್ಟಿಗೆಹಾರ ಬಂದ್; ಅಂಗಡಿ-ಮುಂಗಟ್ಟು ಸ್ತಬ್ದ Murder | ನಾರಾಯಣಪುರ: ಗೌಡಪ್ಪ ಕೊಲೆ ಪ್ರಕರಣಕ್ಕೆ ಹೊಸ ಟ್ವಿಸ್ಟ್; ಅಪ್ರಾಪ್ತ ವಯಸ್ಸಿನ…

ಇತ್ತೀಚಿನ ಸುದ್ದಿ

ಭಾರತೀಯ ವೈದ್ಯಕೀಯ ಸಂಘ ದ.ಕ.ಜಿಲ್ಲಾ ಶಾಖೆ ವೈದ್ಯರ ದಿನಾಚರಣೆ ; ಸಾಧಕ ವೈದ್ಯರಿಗೆ ಪ್ರಶಸ್ತಿ ಪ್ರದಾನ

09/07/2024, 22:23

 

ಮಂಗಳೂರು(reporterkarnataka.com): ವೈದ್ಯಕೀಯ ವೃತ್ತಿ ಒಂದು ಗೌರವಾನ್ವಿತ ವೃತ್ತಿಯಾಗಿದ್ದು, ವೈದ್ಯರು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದಾರೆ ಎಂದು ನಿಟ್ಟೆ ವಿಶ್ವ ವಿದ್ಯಾಲಯದ ಕುಲಪತಿ ಡಾ.ಶಾಂತರಾಮ್ ಶೆಟ್ಟಿ ಹೇಳಿದರು.

ಅವರು ಭಾರತೀಯ ವೈದ್ಯಕೀಯ ಸಂಘ ದ.ಕ. ಜಿಲ್ಲಾ ಶಾಖೆಯ ಆಶ್ರಯದಲ್ಲಿ ಇತ್ತೀಚೆಗೆ ಸಂಸ್ಥೆಯ ಸಭಾಂಗಣದಲ್ಲಿ ಜರಗಿದ ವೈದ್ಯರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.

ವೈದ್ಯಕೀಯ ವೃತ್ತಿ ಮತ್ತು ಸೇವೆಯ ವಿರುದ್ಧ ಸರಕಾರ ವಿಶೇಷ ಕಾನೂನನ್ನು ಹೊರಡಿಸಿದೆ ಎಂದು ಖೇದ ವ್ಯಕ್ತಪಡಿಸಿ ಅದನ್ನು ವೈದ್ಯಕೀಯ ವೃಂದದವರು ವಿರೋಧಿಸಬೇಕು ಮತ್ತು ಪ್ರತಿಭಟಿಸಬೇಕೆಂದು ಕರೆ ನೀಡಿದರು.

ಭಾರತೀಯ ವೈದ್ಯಕೀಯ ದ.ಕ. ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ರಂಜನ್‌ ಅಧ್ಯಕ್ಷೀಯ ಭಾಷಣದಲ್ಲಿ ವೈದ್ಯರ ದಿನಾಚರಣೆಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿ ಸಂಸ್ಥೆಯ ಭವಿಷ್ಯದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ.ಎಲ್.ಎಲ್.ಜೋಶ್ವಾ (ವೈದ್ಯಕೀಯಶಾಸ್ತ್ರ ತಜ್ಞ), ಡಾ.ಜೀವರಾಜ್ ಸೊರಕೆ (ಶಸ್ತ್ರ ಚಿಕಿತ್ಸಕರು), ಡಾ.ಇಂದುಮತಿ ಮಲ್ಯ (ಸ್ತ್ರಿ ಆರೋಗ್ಯ ಮತ್ತು ಪ್ರಸೂತಿ ತಜ್ಞರು), ಡಾ.ಸುಬೀರ್ ರೆಬೆಲ್ಲೋ (ಕುಟುಂಬ ವೈದ್ಯರು) ಅವರು ವೈದ್ಯಕೀಯ ಕ್ಷೇತ್ರಕ್ಕೆ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಮತ್ತು ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣ ಅಂಗವಾಗಿ ನಗರದ ಯೆನಪೋಯ ಆಸ್ಪತ್ರೆಯ ಕೀಲು ಮೂಳೆ ಶಾಸ್ತ್ರ ವಿಭಾಗದ ತಜ್ಞ ಡಾ.ದೀಪಕ್ ರೈ ಮಂಡಿ ಬದಲಾವಣೆಗೆ ಆಧುನಿಕ ರೊಬೋಟಿಕ್ ಶಸ್ತ್ರ ಚಿಕಿತ್ಸೆ ಬಗ್ಗೆ ಉಪನ್ಯಾಸ ನೀಡಿದರು.

ಸಂಸ್ಥೆಯ ಚುನಾಯಿತ ಅಧ್ಯಕ್ಷರಾದ ಡಾ.ಜೆಸ್ಸಿ ಮರಿಯಾ ಡಿ’ಸೋಜಾ, ಕೋಶಾಧಿಕಾರಿ ಡಾ.ಪ್ರಶಾಂತ್, ಸಂಸ್ಥೆಯ ಪ್ರತಿಷ್ಠಾನದ ಅಧ್ಯಕ್ಷ ಡಾ.ದಿವಾಕರ್ ರಾವ್, ಕೋಶಾಧಿಕಾರಿ ಕೆ.ಆರ್.ಕಾಮತ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಡಾ. ಅವಿನ್ ಆಳ್ವ ವಂದಿಸಿದರು. ಅಕ್ಷತಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಇತ್ತೀಚಿನ ಸುದ್ದಿ

ಜಾಹೀರಾತು