12:11 PM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಭಾರತೀಯ ವೈದ್ಯಕೀಯ ಸಂಘ ದ.ಕ.ಜಿಲ್ಲಾ ಶಾಖೆ ವೈದ್ಯರ ದಿನಾಚರಣೆ ; ಸಾಧಕ ವೈದ್ಯರಿಗೆ ಪ್ರಶಸ್ತಿ ಪ್ರದಾನ

09/07/2024, 22:23

 

ಮಂಗಳೂರು(reporterkarnataka.com): ವೈದ್ಯಕೀಯ ವೃತ್ತಿ ಒಂದು ಗೌರವಾನ್ವಿತ ವೃತ್ತಿಯಾಗಿದ್ದು, ವೈದ್ಯರು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದಾರೆ ಎಂದು ನಿಟ್ಟೆ ವಿಶ್ವ ವಿದ್ಯಾಲಯದ ಕುಲಪತಿ ಡಾ.ಶಾಂತರಾಮ್ ಶೆಟ್ಟಿ ಹೇಳಿದರು.

ಅವರು ಭಾರತೀಯ ವೈದ್ಯಕೀಯ ಸಂಘ ದ.ಕ. ಜಿಲ್ಲಾ ಶಾಖೆಯ ಆಶ್ರಯದಲ್ಲಿ ಇತ್ತೀಚೆಗೆ ಸಂಸ್ಥೆಯ ಸಭಾಂಗಣದಲ್ಲಿ ಜರಗಿದ ವೈದ್ಯರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.

ವೈದ್ಯಕೀಯ ವೃತ್ತಿ ಮತ್ತು ಸೇವೆಯ ವಿರುದ್ಧ ಸರಕಾರ ವಿಶೇಷ ಕಾನೂನನ್ನು ಹೊರಡಿಸಿದೆ ಎಂದು ಖೇದ ವ್ಯಕ್ತಪಡಿಸಿ ಅದನ್ನು ವೈದ್ಯಕೀಯ ವೃಂದದವರು ವಿರೋಧಿಸಬೇಕು ಮತ್ತು ಪ್ರತಿಭಟಿಸಬೇಕೆಂದು ಕರೆ ನೀಡಿದರು.

ಭಾರತೀಯ ವೈದ್ಯಕೀಯ ದ.ಕ. ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ರಂಜನ್‌ ಅಧ್ಯಕ್ಷೀಯ ಭಾಷಣದಲ್ಲಿ ವೈದ್ಯರ ದಿನಾಚರಣೆಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿ ಸಂಸ್ಥೆಯ ಭವಿಷ್ಯದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ.ಎಲ್.ಎಲ್.ಜೋಶ್ವಾ (ವೈದ್ಯಕೀಯಶಾಸ್ತ್ರ ತಜ್ಞ), ಡಾ.ಜೀವರಾಜ್ ಸೊರಕೆ (ಶಸ್ತ್ರ ಚಿಕಿತ್ಸಕರು), ಡಾ.ಇಂದುಮತಿ ಮಲ್ಯ (ಸ್ತ್ರಿ ಆರೋಗ್ಯ ಮತ್ತು ಪ್ರಸೂತಿ ತಜ್ಞರು), ಡಾ.ಸುಬೀರ್ ರೆಬೆಲ್ಲೋ (ಕುಟುಂಬ ವೈದ್ಯರು) ಅವರು ವೈದ್ಯಕೀಯ ಕ್ಷೇತ್ರಕ್ಕೆ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಮತ್ತು ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣ ಅಂಗವಾಗಿ ನಗರದ ಯೆನಪೋಯ ಆಸ್ಪತ್ರೆಯ ಕೀಲು ಮೂಳೆ ಶಾಸ್ತ್ರ ವಿಭಾಗದ ತಜ್ಞ ಡಾ.ದೀಪಕ್ ರೈ ಮಂಡಿ ಬದಲಾವಣೆಗೆ ಆಧುನಿಕ ರೊಬೋಟಿಕ್ ಶಸ್ತ್ರ ಚಿಕಿತ್ಸೆ ಬಗ್ಗೆ ಉಪನ್ಯಾಸ ನೀಡಿದರು.

ಸಂಸ್ಥೆಯ ಚುನಾಯಿತ ಅಧ್ಯಕ್ಷರಾದ ಡಾ.ಜೆಸ್ಸಿ ಮರಿಯಾ ಡಿ’ಸೋಜಾ, ಕೋಶಾಧಿಕಾರಿ ಡಾ.ಪ್ರಶಾಂತ್, ಸಂಸ್ಥೆಯ ಪ್ರತಿಷ್ಠಾನದ ಅಧ್ಯಕ್ಷ ಡಾ.ದಿವಾಕರ್ ರಾವ್, ಕೋಶಾಧಿಕಾರಿ ಕೆ.ಆರ್.ಕಾಮತ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಡಾ. ಅವಿನ್ ಆಳ್ವ ವಂದಿಸಿದರು. ಅಕ್ಷತಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಇತ್ತೀಚಿನ ಸುದ್ದಿ

ಜಾಹೀರಾತು