6:18 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಭಾರತೀಯ ವೈದ್ಯಕೀಯ ಸಂಘ ದ.ಕ.ಜಿಲ್ಲಾ ಶಾಖೆ ವೈದ್ಯರ ದಿನಾಚರಣೆ ; ಸಾಧಕ ವೈದ್ಯರಿಗೆ ಪ್ರಶಸ್ತಿ ಪ್ರದಾನ

09/07/2024, 22:23

 

ಮಂಗಳೂರು(reporterkarnataka.com): ವೈದ್ಯಕೀಯ ವೃತ್ತಿ ಒಂದು ಗೌರವಾನ್ವಿತ ವೃತ್ತಿಯಾಗಿದ್ದು, ವೈದ್ಯರು ಸಮಾಜದಲ್ಲಿ ಉನ್ನತ ಸ್ಥಾನವನ್ನು ಪಡೆದಿದ್ದಾರೆ ಎಂದು ನಿಟ್ಟೆ ವಿಶ್ವ ವಿದ್ಯಾಲಯದ ಕುಲಪತಿ ಡಾ.ಶಾಂತರಾಮ್ ಶೆಟ್ಟಿ ಹೇಳಿದರು.

ಅವರು ಭಾರತೀಯ ವೈದ್ಯಕೀಯ ಸಂಘ ದ.ಕ. ಜಿಲ್ಲಾ ಶಾಖೆಯ ಆಶ್ರಯದಲ್ಲಿ ಇತ್ತೀಚೆಗೆ ಸಂಸ್ಥೆಯ ಸಭಾಂಗಣದಲ್ಲಿ ಜರಗಿದ ವೈದ್ಯರ ದಿನಾಚರಣೆ ಮತ್ತು ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಯಾಗಿ ಭಾಗವಹಿಸಿ ಮಾತನಾಡಿದರು.

ವೈದ್ಯಕೀಯ ವೃತ್ತಿ ಮತ್ತು ಸೇವೆಯ ವಿರುದ್ಧ ಸರಕಾರ ವಿಶೇಷ ಕಾನೂನನ್ನು ಹೊರಡಿಸಿದೆ ಎಂದು ಖೇದ ವ್ಯಕ್ತಪಡಿಸಿ ಅದನ್ನು ವೈದ್ಯಕೀಯ ವೃಂದದವರು ವಿರೋಧಿಸಬೇಕು ಮತ್ತು ಪ್ರತಿಭಟಿಸಬೇಕೆಂದು ಕರೆ ನೀಡಿದರು.

ಭಾರತೀಯ ವೈದ್ಯಕೀಯ ದ.ಕ. ಜಿಲ್ಲಾ ಶಾಖೆಯ ಅಧ್ಯಕ್ಷ ಡಾ.ರಂಜನ್‌ ಅಧ್ಯಕ್ಷೀಯ ಭಾಷಣದಲ್ಲಿ ವೈದ್ಯರ ದಿನಾಚರಣೆಯ ಉದ್ದೇಶ ಮತ್ತು ಮಹತ್ವವನ್ನು ವಿವರಿಸಿ ಸಂಸ್ಥೆಯ ಭವಿಷ್ಯದ ಕಾರ್ಯಚಟುವಟಿಕೆಗಳ ಬಗ್ಗೆ ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಡಾ.ಎಲ್.ಎಲ್.ಜೋಶ್ವಾ (ವೈದ್ಯಕೀಯಶಾಸ್ತ್ರ ತಜ್ಞ), ಡಾ.ಜೀವರಾಜ್ ಸೊರಕೆ (ಶಸ್ತ್ರ ಚಿಕಿತ್ಸಕರು), ಡಾ.ಇಂದುಮತಿ ಮಲ್ಯ (ಸ್ತ್ರಿ ಆರೋಗ್ಯ ಮತ್ತು ಪ್ರಸೂತಿ ತಜ್ಞರು), ಡಾ.ಸುಬೀರ್ ರೆಬೆಲ್ಲೋ (ಕುಟುಂಬ ವೈದ್ಯರು) ಅವರು ವೈದ್ಯಕೀಯ ಕ್ಷೇತ್ರಕ್ಕೆ ಸಲ್ಲಿಸಿದ ಸುದೀರ್ಘ ಅನುಪಮ ಸೇವೆ ಮತ್ತು ಕೊಡುಗೆಯನ್ನು ಪರಿಗಣಿಸಿ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಂಸ್ಥೆಯ ನಿರಂತರ ವೈದ್ಯಕೀಯ ಶಿಕ್ಷಣ ಅಂಗವಾಗಿ ನಗರದ ಯೆನಪೋಯ ಆಸ್ಪತ್ರೆಯ ಕೀಲು ಮೂಳೆ ಶಾಸ್ತ್ರ ವಿಭಾಗದ ತಜ್ಞ ಡಾ.ದೀಪಕ್ ರೈ ಮಂಡಿ ಬದಲಾವಣೆಗೆ ಆಧುನಿಕ ರೊಬೋಟಿಕ್ ಶಸ್ತ್ರ ಚಿಕಿತ್ಸೆ ಬಗ್ಗೆ ಉಪನ್ಯಾಸ ನೀಡಿದರು.

ಸಂಸ್ಥೆಯ ಚುನಾಯಿತ ಅಧ್ಯಕ್ಷರಾದ ಡಾ.ಜೆಸ್ಸಿ ಮರಿಯಾ ಡಿ’ಸೋಜಾ, ಕೋಶಾಧಿಕಾರಿ ಡಾ.ಪ್ರಶಾಂತ್, ಸಂಸ್ಥೆಯ ಪ್ರತಿಷ್ಠಾನದ ಅಧ್ಯಕ್ಷ ಡಾ.ದಿವಾಕರ್ ರಾವ್, ಕೋಶಾಧಿಕಾರಿ ಕೆ.ಆರ್.ಕಾಮತ್ ಉಪಸ್ಥಿತರಿದ್ದರು. ಕಾರ್ಯದರ್ಶಿ ಡಾ. ಅವಿನ್ ಆಳ್ವ ವಂದಿಸಿದರು. ಅಕ್ಷತಾ ಸುಧೀರ್ ಕಾರ್ಯಕ್ರಮ ನಿರೂಪಿಸಿದರು. ಸಭಾ ಕಾರ್ಯಕ್ರಮದ ಬಳಿಕ ಸದಸ್ಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಇತ್ತೀಚಿನ ಸುದ್ದಿ

ಜಾಹೀರಾತು