1:15 AM Wednesday25 - February 2026
ಬ್ರೇಕಿಂಗ್ ನ್ಯೂಸ್
ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

ಇತ್ತೀಚಿನ ಸುದ್ದಿ

ಕೃಷ್ಣಾಪುರ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ, ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿ ಉದ್ಘಾಟನೆ

10/07/2024, 20:59

ಸುರತ್ಕಲ್(reporterkarnataka.com): ಮಂಗಳೂರು ಉತ್ತರದ ಕೃಷ್ಣಾಪುರ 5 ನೇ ಬ್ಲಾಕಿನ ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ ಮತ್ತು ಸರಕಾರಿ ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿಯ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.
ಶಾಸಕ ಡಾ. ಭರತ್ ಶೆಟ್ಟಿ ವೈ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಶಿಸ್ತುಬದ್ಧ ವ್ಯಕ್ತಿತ್ವವನ್ನು ರೂಢಿಸಿಕೊಂಡು ಅಮೂಲ್ಯ ಪ್ರಜೆಗಳಾಗಬೇಕು. ಪೂರಕವಾಗಿ ಯೋಗ್ಯ ಪರಿಸರವು ರೂಪುಗೊಳ್ಳಬೇಕು. ಸರ್ವರೂ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಆಶಿಸಿದರು.
ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕವನ್ನು ವಿತರಿಸಲಾಯಿತು.
ಲೋಕೋಪಯೋಗಿ ಇಲಾಖೆಯ ಮಂಗಳೂರು ವರ್ತುಲ ಅಧೀಕ್ಷಕ ಅಭಿಯಂತರ ಗೋಕುಲ್ ದಾಸ್ ಶುಭ ಹಾರೈಸಿದರು.
ಮಹಾನಗರ ಪಾಲಿಕೆ ಸದಸ್ಯೆ ಲಕ್ಷ್ಮೀ ಶೇಖರ್ ದೇವಾಡಿಗ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೃಕ್ಷಾರೋಪಣ ಮಾಡಲಾಯಿತು.
ಗುತ್ತಿಗೆದಾರ ಕಬೀರ್ ಅವರನ್ನು ಗೌರವಿಸಲಾಯಿತು.
ಮಾಜಿ ಕಾರ್ಪೋರೇಟರ್ ತಿಲಕ್ ರಾಜ್ ಕೃಷ್ಣಾಪುರ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಪಿ. ಸುಧಾಕರ ಕಾಮತ್, ಅಧ್ಯಕ್ಷ ಅಶೋಕ್ ಕೃಷ್ಣಾಪುರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕರುಣಾಕರ ದೇವಾಡಿಗ ಮತ್ತು ಮಧುಸೂದನ್ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯೋಪಾದ್ಯಾಯಿನಿ ವೀಣಾ ಬೇಳಂಜೆ ಸ್ವಾಗತಿಸಿ, ಚಂದ್ರಾವತಿ ವಂದಿಸಿದರು. ಸೌಮ್ಯ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು