11:14 PM Thursday18 - September 2025
ಬ್ರೇಕಿಂಗ್ ನ್ಯೂಸ್
ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ

ಇತ್ತೀಚಿನ ಸುದ್ದಿ

ಕೃಷ್ಣಾಪುರ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ, ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿ ಉದ್ಘಾಟನೆ

10/07/2024, 20:59

ಸುರತ್ಕಲ್(reporterkarnataka.com): ಮಂಗಳೂರು ಉತ್ತರದ ಕೃಷ್ಣಾಪುರ 5 ನೇ ಬ್ಲಾಕಿನ ದ. ಕ. ಜಿಪಂ ಹಿರಿಯ ಪ್ರಾಥಮಿಕ ಶಾಲೆಯ ನೂತನ ವಿವೇಕ ಕೊಠಡಿ ಮತ್ತು ಸರಕಾರಿ ಪ್ರೌಢಶಾಲೆಯ ನೂತನ ಗ್ರಂಥಾಲಯ ಕೊಠಡಿಯ ಉದ್ಘಾಟನಾ ಸಮಾರಂಭ ಮಂಗಳವಾರ ನಡೆಯಿತು.
ಶಾಸಕ ಡಾ. ಭರತ್ ಶೆಟ್ಟಿ ವೈ ಉದ್ಘಾಟನೆಯನ್ನು ನೆರವೇರಿಸಿ ಮಾತನಾಡುತ್ತಾ ವಿದ್ಯಾರ್ಥಿಗಳು ಶಿಸ್ತುಬದ್ಧ ವ್ಯಕ್ತಿತ್ವವನ್ನು ರೂಢಿಸಿಕೊಂಡು ಅಮೂಲ್ಯ ಪ್ರಜೆಗಳಾಗಬೇಕು. ಪೂರಕವಾಗಿ ಯೋಗ್ಯ ಪರಿಸರವು ರೂಪುಗೊಳ್ಳಬೇಕು. ಸರ್ವರೂ ವ್ಯವಸ್ಥೆಯ ಉಪಯೋಗವನ್ನು ಪಡೆದುಕೊಳ್ಳುವಂತಾಗಬೇಕು ಎಂದು ಆಶಿಸಿದರು.
ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಸಂಸ್ಥೆಯ ಎಲ್ಲಾ ವಿದ್ಯಾರ್ಥಿಗಳಿಗೆ ನೋಟ್ ಪುಸ್ತಕವನ್ನು ವಿತರಿಸಲಾಯಿತು.
ಲೋಕೋಪಯೋಗಿ ಇಲಾಖೆಯ ಮಂಗಳೂರು ವರ್ತುಲ ಅಧೀಕ್ಷಕ ಅಭಿಯಂತರ ಗೋಕುಲ್ ದಾಸ್ ಶುಭ ಹಾರೈಸಿದರು.
ಮಹಾನಗರ ಪಾಲಿಕೆ ಸದಸ್ಯೆ ಲಕ್ಷ್ಮೀ ಶೇಖರ್ ದೇವಾಡಿಗ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದರು.
ವೃಕ್ಷಾರೋಪಣ ಮಾಡಲಾಯಿತು.
ಗುತ್ತಿಗೆದಾರ ಕಬೀರ್ ಅವರನ್ನು ಗೌರವಿಸಲಾಯಿತು.
ಮಾಜಿ ಕಾರ್ಪೋರೇಟರ್ ತಿಲಕ್ ರಾಜ್ ಕೃಷ್ಣಾಪುರ, ಹಳೆ ವಿದ್ಯಾರ್ಥಿ ಸಂಘದ ಗೌರವಾಧ್ಯಕ್ಷ ಪಿ. ಸುಧಾಕರ ಕಾಮತ್, ಅಧ್ಯಕ್ಷ ಅಶೋಕ್ ಕೃಷ್ಣಾಪುರ, ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಕರುಣಾಕರ ದೇವಾಡಿಗ ಮತ್ತು ಮಧುಸೂದನ್ ಉಪಸ್ಥಿತರಿದ್ದರು.
ಪ್ರಭಾರ ಮುಖ್ಯೋಪಾದ್ಯಾಯಿನಿ ವೀಣಾ ಬೇಳಂಜೆ ಸ್ವಾಗತಿಸಿ, ಚಂದ್ರಾವತಿ ವಂದಿಸಿದರು. ಸೌಮ್ಯ ನಾಗೇಶ್ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು