2:45 AM Wednesday25 - February 2026
ಬ್ರೇಕಿಂಗ್ ನ್ಯೂಸ್
ಖಾಲಿಯಿರುವ ಹುದ್ದೆಗಳ ಹಂತ ಹಂತವಾಗಿ ಭರ್ತಿ: ಕಾರ್ಕಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಿಎಂ, ಡಿಸಿಎಂ ಕುರ್ಚಿ ಕಾಳಗದಲ್ಲಿ ಬ್ಯುಸಿ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಹೊನ್ನಾರು ರಂಗೋತ್ಸವ: 26ರ ವರೆಗೆ ಕಲಾಸಕ್ತರಿಗೆ ನಾಟಕ ವೀಕ್ಷಿಸುವ ಸದಾವಕಾಶ ಇಬ್ಬರು ಅಂತರ್ ರಾಜ್ಯ ಗಾಂಜಾ ಮಾರಾಟಗಾರರ ಸಹಿತ 4 ಮಂದಿ ಬಂಧನ: 12… ಯುವ ಕಾಂಗ್ರೆಸ್ಸಿಗರು ಬೇಷರತ್ ಕ್ಷಮೆ ಕೇಳಲಿ: ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಧೀರಜ್… ಸಿದ್ದಾಪುರ: ವಾಹನಗಳ ಮೇಲೆ ಮುಂದುವರೆದ ಕಾಡಾನೆ ದಾಳಿ; ಕೂದಲು ಎಳೆ ಅಂತರದಲ್ಲಿ ಕಾರ್ಮಿಕರು… ಪಿರಿಯಾಪಟ್ಟಣದ ರಾಷ್ಟ್ರೀಯ ಹೆದ್ದಾರಿ 275 ನಲ್ಲಿ ಅರಣ್ಯ ಬೆಂಕಿಗೆ ಅಹುತಿ:ಅಪಾರ ಪ್ರಮಾಣದ ಬಿದಿರು… ಸಿದ್ದಾಪುರ ಸಮೀಪದ ಕರಡಿಗೋಡು ಗ್ರಾಮದಲ್ಲಿ ವಾಹನ ಡಿಕ್ಕಿ: ಕಾಡುಕೋಣ ಕಾಲು ಮುರಿತ ಐರ್ಲೆಂಡ್‌ನಲ್ಲಿ ಕಡಬ ಕುಟ್ರುಪಾಡಿಯ ಯುವಕ ನಿಗೂಢವಾಗಿ ಸಾವು: ನೇಣು ಬಿಗಿದ ಸ್ಥಿತಿಯಲ್ಲಿ ಶವ… Kodagu | ಸಿದ್ದಾಪುರ: ಟ್ರ್ಯಾಕ್ಟರ್ ಮಗುಚಿ ಬಾದಾಮಿಯ ಕಾರ್ಮಿಕ ದುರ್ಮರಣ

ಇತ್ತೀಚಿನ ಸುದ್ದಿ

ನಂಜನಗೂಡಿನಲ್ಲಿ ನೀಲಿ ಬಾವುಟಗಳ ಅಬ್ಬರ: ಸಂಭ್ರಮ – ಸಡಗರದಿಂದ ನಡೆದ ಡಾ.ಅಂಬೇಡ್ಕರ್ ಜಯಂತೋತ್ಸವ

10/07/2024, 21:02

ಮೋಹನ್ ನಂಜನಗೂಡು ಮೈಸೂರು
info.reporterkarnataka@gmail.com

ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ದರ್ಶನ್ ದ್ರುವ ನಾರಾಯಣ್ ಅವರ ನೇತೃತ್ವದಲ್ಲಿ ತಾಲ್ಲೂಕಿನ ಡಾ.ಬಿ.ಆರ್. ಅಂಬೇಡ್ಕರ್ ಯುವಕರ ಸಂಘಟನೆಗಳ ಒಕ್ಕೂಟ ಮತ್ತು ದಲಿತ ಸಂಘಟನೆಗಳಿಂದ ಡಾ.ಬಿ.ಆರ್. ಅಂಬೇಡ್ಕರ್ ರವರ 133ನೇ ಜಯಂತೋತ್ಸವ ಮೆರವಣಿಗೆಯನ್ನು ಅದ್ದೂರಿ ಮತ್ತು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ನಂಜನಗೂಡು ಪಟ್ಟಣದ ಜೂನಿಯರ್ ಕಾಲೇಜು ಮೈದಾನದಲ್ಲಿ ಅಂಬೇಡ್ಕರ್ ಭಾವಚಿತ್ರ ಹೊತ್ತ ಬೆಳ್ಳಿರಥಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಶಾಸಕ ದರ್ಶನ್ ಧ್ರುವ ನಾರಾಯಣ್ ವಿಧಾನ ಪರಿಷತ್ ಸದಸ್ಯ ಡಾ. ಯತಿಂದ್ರ ಸಿದ್ದರಾಮಯ್ಯ, ಸಂಸದ ಸುನಿಲ್ ಬೋಸ್ ಚಾಲನೆ ನೀಡಿದರು.
ಮೆರವಣಿಗೆಯಲ್ಲಿ ವಿವಿಧ ಜಾನಪದ ಕಲಾತಂಡಗಳು ಹಾಗೂ
ಸ್ತಬ್ಧಚಿತ್ರಗಳು ಪಾಲ್ಗೊಂಡಿದ್ದವು.
ಪಟ್ಟಣದ ಆರ್.ಪಿ. ರಸ್ತೆ ಮೂಲಕ ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯದವರೆಗೆ ನಡೆದ ಮೆರವಣಿಗೆಯಲ್ಲಿ ಜೈ ಭೀಮ್ ಜೈ ಭೀಮ್ ಎಂದು ಜೈ ಘೋಷ ಕೂಗಿ ಹರ್ಷ ವ್ಯಕ್ತಪಡಿಸಿದರು. ನಂಜನಗೂಡು ಸಂಚಾರಿ ಪೊಲೀಸ್ ಠಾಣೆಯ ಸ್ತಬ್ಧಚಿತ್ರ, ಸಂವಿಧಾನದ ಪೀಠಿಕೆ ಮತ್ತು ಅಂಬೇಡ್ಕರ್ ಸಂದೇಶವುಳ್ಳ ಸ್ತಬ್ಧಚಿತ್ರ, ಮಹಿಳಾ ಮತ್ತು ಮಕ್ಕಳ ಸುರಕ್ಷತೆಯ ಬಗ್ಗೆ ಸ್ತಬ್ಧ ಚಿತ್ರ, ಬಾಲ್ಯ ವಿವಾಹದ ಬಗ್ಗೆ ಬೀದಿ ನಾಟಕ ಪ್ರದರ್ಶನ ಮಂಗಳವಾದ್ಯ ಮತ್ತು ನಗಾರಿ ತಮಟೆಗಳು ಮೆರವಣಿಗೆಯಲ್ಲಿ ಭಾಗವಹಿಸಿದ್ದವು
ದಲಿತ ಸಂಘಟನೆಗಳ ಮುಖಂಡರು ಮತ್ತು ಮತ್ತು ಯುವಕರು ನೀಲಿ ಬಾವುಟಗಳನ್ನು ಪ್ರದರ್ಶನ ಮಾಡಿ ಅಂಬೇಡ್ಕರ್ ಸ್ಲೋಗನ್ ಗಳನ್ನು ಕೂಗಿ ಹರ್ಷ ವ್ಯಕ್ತಪಡಿಸಿದರು.
ತಾಲ್ಲೂಕು ಮತ್ತು ಜಿಲ್ಲಾ ಮಟ್ಟದ ಎಲ್ಲಾ ಇಲಾಖೆ ಅಧಿಕಾರಿಗಳು ಸೇರಿದಂತೆ ಸುಮಾರು 5 ಸಾವಿರಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಲಾಗಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು