8:22 PM Tuesday21 - October 2025
ಬ್ರೇಕಿಂಗ್ ನ್ಯೂಸ್
ಹಾರಂಗಿ ಜಲಾಶಯ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 95 ಕೋಟಿ ವೆಚ್ಚದಲ್ಲಿ ವಿವಿಧ ಅಭಿವೃದ್ಧಿ… ಕಾರ್ಮಿಕ ಅಧಿಕಾರಿ ಸೋಗಿನಲ್ಲಿ ವಸೂಲಿಗೆ ಯತ್ನ: ಸಾರ್ವಜನಿಕರು ಎಚ್ಚರದಿಂದಿರಲು ಇಲಾಖಾ ಅಧಿಕಾರಿಗಳ ಮನವಿ Mysore | ಎಚ್. ಡಿ. ಕೋಟೆಯಲ್ಲಿ ಹುಲಿ ದಾಳಿ: ಎರಡೂ ಕಣ್ಣು ಕಳೆದುಕೊಂಡ… ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್: ಬಿಜೆಪಿ ಜಿಲ್ಲಾ ಯುವಮೋರ್ಚಾ ಅಧ್ಯಕ್ಷ ಸಹಿತ 5… Kodagu | ಪವಿತ್ರ ಕಾವೇರಿ ತೀರ್ಥೋದ್ಭವಕ್ಕೆ ಕ್ಷಣಗಣನೆ: ಸಾಕ್ಷಿಯಾಗಲಿರುವ ಡಿಸಿಎಂ, ಸಚಿವರು, ಶಾಸಕರು ವಿರಾಜಪೇಟೆಯ ಪೆರಂಬಾಡಿ ಬಳಿ ಉದ್ಯಮಿ ಮೇಲೆ ಹಲ್ಲೆ, ದರೋಡೆ: ಪೊಲೀಸರು ಹೈ ಅಲರ್ಟ್ ಹಾಡು ನಿಲ್ಲಿಸಿದ ಯಕ್ಷ ಕೋಗಿಲೆ: ತೆಂಕುತಿಟ್ಟಿನ ಖ್ಯಾತ ಭಾಗವತ ದಿನೇಶ್ ಅಮ್ಮಣ್ಣಾಯ ಇನ್ನಿಲ್ಲ ನರೇಗಾ ಯೋಜನೆಯಡಿ ಕಾರ್ಮಿಕ ಆಯವ್ಯಯ: ಗ್ರಾಮ ಪಂಚಾಯತಿಗಳಿಗೆ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ Kodagu | ತುಲಾ ಸಂಕ್ರಮಣ: ತಲಕಾವೇರಿಗೆ ಭಾಗಮಂಡಲದ ಭಗಂಡೇಶ್ವರ ದೇವಾಲಯದಿಂದ ಆಭರಣ ಕಾವೇರಿಮನೆ ಚಂದನ್ ಗೆ ಯುಎನ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ ಪ್ರಶಸ್ತಿ ಪ್ರದಾನ

ಇತ್ತೀಚಿನ ಸುದ್ದಿ

ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಗಿರಿಜಾ ಶಂಕರರ ಅದ್ದೂರಿ ಕಲ್ಯಾಣೋತ್ಸವ: ನಂಜುಂಡೇಶ್ವರನ ಕಾಶಿಯಾತ್ರೆ ಸಂಪನ್ನ

11/07/2024, 16:33

ಮೋಹನ್ ನಂಜನಗೂಡು ಮೈಸೂರು

info.reporterkarnataka@gmail.com

ದಕ್ಷಿಣ ಕಾಶಿ ನಂಜನಗೂಡಿನ ಶ್ರೀ ಶ್ರೀಕಂಠೇಶ್ವರ ಸ್ವಾಮಿ ದೇವಾಲಯದಲ್ಲಿ 2024ರ ಶ್ರೀ ಗಿರಿಜಾ ಕಲ್ಯಾಣ ಮಹೋತ್ಸವವು ದೇವಾಲಯದ ಪ್ರಧಾನ ಆಗಮಿಕರಾದ ನಾಗಚಂದ್ರ ದೀಕ್ಷಿತ್ ಅವರ ಪೌರೋಹಿತ್ಯದಲ್ಲಿ ಸಡಗರ ಸಂಭ್ರಮ ಹಾಗೂ ಶ್ರದ್ಧಾಭಕ್ತಿಯಿಂದ ನೆರವೇರಿತು.


ಮಂಗಳವಾರ ಬೆಳಿಗ್ಗೆಯಿಂದಲೇ ಹಲವು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಪ್ರಾರಂಭವಾದ ಕಲ್ಯಾಣೋತ್ಸವದಲ್ಲಿ ಬುಧವಾರ ಸಂಜೆ 5:00 ಗಂಟೆಗೆ ಶ್ರೀ ನಂಜುಂಡೇಶ್ವರರ ಕಾಶಿಯಾತ್ರೆ ನಡೆಯಿತು. ಕಾಶಿಯಾತ್ರೆಯಲ್ಲಿ ಬಣ್ಣ ಬಣ್ಣದ ಹೂವು ಹಾಗೂ ವಜ್ರ ವೈಡೂರ್ಯಗಳಿಂದ ಅಲಂಕರಿಸಲಾದ ಶ್ರೀ ನಂಜುಂಡೇಶ್ವರರ ಉತ್ಸವ ಮೂರ್ತಿಯನ್ನು ಹಲವು ಜಾನಪದ ಕಲಾ ತಂಡಗಳೊಂದಿಗೆ ದೇವಾಲಯದ ಸುತ್ತ ಮೆರವಣಿಗೆ ನಡೆಸಲಾಯಿತು.
ನಂದಿಧ್ವಜ, ನಂದಿ ಕಂಬ ಕುಣಿತ, ಹುಲಿ ವೇಷ, ವೀರಗಾಸೆ, ಪೂಜಾ ಕುಣಿತ, ಒನಕೆ ನೃತ್ಯ, ಗಾಡಿ ಗೊಂಬೆ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಕಾಶಿಯಾತ್ರೆಗೆ ಮೆರಗು ನೀಡಿದವು.
ಕಾಶಿಯಾತ್ರೆ ಮುಗಿಸಿ ಬಂದ ಶ್ರೀ ಯವರ ಉತ್ಸವ ಮೂರ್ತಿಯನ್ನು ದೇವಾಲಯದ ಮುಂಭಾಗ ಇರಿಸಿ ಪೂಜೆ ಸಲ್ಲಿಸಲಾಯಿತು. ನಂತರ ಅಲಂಕೃತ ಶ್ರೀ ಪಾರ್ವತಿ ಅಮ್ಮನವರ ಉತ್ಸವ ಮೂರ್ತಿಯನ್ನು ದೇವಾಲಯದಿಂದ ಹೊರ ತಂದು ಶ್ರೀ ಯವರ ಉತ್ಸವ ಮೂರ್ತಿ ಎದುರಿಗೆ ಇರಿಸಿ ಸಂಬಂಧ ಮಾಲೆ ಕಾರ್ಯಕ್ರಮ ನಡೆಸಲಾಯಿತು.
ಸಂಬಂಧ ಮಾಲೆ ನಂತರ ಶಿವ ಪಾರ್ವತಿ ಯವರ ಉತ್ಸವ ಮೂರ್ತಿಗಳನ್ನು ದೇವಾಲಯದ ಕಲ್ಯಾಣ ಮಂಟಪದಲ್ಲಿರಿಸಿ ಶಾಸ್ತ್ರೋಕ್ತವಾಗಿ ಶುಭ ಮಕರ ಲಗ್ನದಲ್ಲಿ ಧಾರಾ ಮಹೋತ್ಸವ ನಡೆಸಲಾಯಿತು .
ಗಿರಿಜಾ ಕಲ್ಯಾಣ ಮಹೋತ್ಸವಕ್ಕೆ ರಾಜ್ಯದ ನಾನಾ ಮೂಲೆಗಳಿಂದ ಸಾವಿರಾರು ಭಕ್ತರು ಪಾಲ್ಗೊಂಡು ಸೇವೆ ಸಲ್ಲಿಸಿದರು.
ಇದೇ ಸಂದರ್ಭ ಸೇವಾರ್ಥದಾರರಿಗೆ ಸುಮಂಗಲಿಯರು ಪರಸ್ಪರ ಅರಿಶಿನ ಕುಂಕುಮ, ಬಳೆ, ಹೂ ನೀಡಿ ತಮ್ಮ ಭಕ್ತಿ ಭಾವ ಮೆರೆದರು. ದೇವಾಲಯದ ಆಗಮಿಕರಾದ ಈ ನಾಗಚಂದ್ರ ದೀಕ್ಷಿತ್ ಮಾತನಾಡಿ ಗಿರಿಜಾ ಕಲ್ಯಾಣ ಮಹೋತ್ಸವದ ಬಗ್ಗೆ ವಿವರಿಸಿದರು.
ಕಾರ್ಯಕ್ರಮಕ್ಕೆ ಬಂದ ಭಕ್ತರೊಬ್ಬರು ಮಾತನಾಡಿ ಗಿರಿಜಾ ಕಲ್ಯಾಣೋತ್ಸವದ ಬಗ್ಗೆ ಸಂತಸ ವ್ಯಕ್ತಪಡಿಸಿದರು.
ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್ ಕುಮಾರ್, ಸಹಾಯಕ ಅಧಿಕಾರಿ ಸತೀಶ್ ದಂಪತಿಗಳು ಸೇರಿದಂತೆ ದೇವಾಲಯದ ಅರ್ಚಕ ವೃಂದ ದವರು ಪಾಲ್ಗೊಂಡಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು