3:26 PM Friday19 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ… ದೆಹಲಿ ಮಟ್ಟದಲ್ಲಿ ಹೈವೋಲ್ಟೇಜ್ ಸಂಧಾನ: ಬೆಂಗಳೂರು ಅಭಿವೃದ್ಧಿ ಸಚಿವರಾಗಿ ಕೃಷ್ಣ ಬೈರೇಗೌಡ ಅಧಿಕಾರ… ತೀರ್ಪು ಮುನ್ನವೇ ಶಂಕಿತ ಉಗ್ರ ಕೊಡಗು ಮೂಲದ ಅಬ್ದುಲ್ ಖಾದರ್ ಸಾವು ಮೈಸೂರು ದುರಂತ: ಅಕ್ರಮ ಪಬ್, ಬಾರ್, ರೆಸ್ಟೋರೆಂಟ್‌ಗಳ ಮೇಲೆ ಕ್ರಮ: ಸಚಿವ ಡಾ.… ವಿಜಯಪುರ | ಭೀಕರ ರಸ್ತೆ ಅಪಘಾತ: ಟಿಪ್ಪರ್-ಬಸ್ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ 3…

ಇತ್ತೀಚಿನ ಸುದ್ದಿ

ಬಂಟ್ವಾಳ: ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ

23/08/2021, 09:49

ಬಂಟ್ವಾಳ(reporterkarnataka.com):

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನಾ ಸಮಾರಂಭ ಬಂಟ್ವಾಳದಲ್ಲಿ ಭಂಡಾರಿಬೆಟ್ಟುವಿನ ಯುವಜನ ವ್ಯಾಯಾಮ ಶಾಲೆಯಲ್ಲಿ ಭಾನುವಾರ ನಡೆಯಿತು.

ಜೈ ತುಲುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಅಧ್ಯಕ್ಷತೆಯಲ್ಲಿ ನಡೆದ ತುಲು ಲಿಪಿ ಕಲಿಯುವ ಕಾರ್ಯಾಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ್ ಅವರು ತುಲು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಚೇತನ್ ಮುಂಡಾಜೆ ಮಾತನಾಡಿ, ತುಲು ಭಾಷೆಗೆ ಲಿಪಿ ಇದ್ದರೂ ಅದೆಷ್ಟೋ ಜನರಿಗೆ ತಿಳಿಯದೆ ಹೋಗಿದೆ. ತುಲು ಭಾಷೆಗೆ ಸುಮಾರು 2500 ವರ್ಷದ ಇತಿಹಾಸ ಇದೆ. ಇಂತಹ ಭಾಷೆಯನ್ನು ನಾವು ಕಲಿಯದೆ ಹಿಂದುಳಿಯುವಂತೆ ಮಾಡಿದ್ದೇವೆ. ಇನ್ನಾದರೂ ಈ ಭಾಷೆಯನ್ನು, ಲಿಪಿಯನ್ನು ಕಲಿತು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ಮಾಡುವ ಎಂದರು.

ಜೈ ತುಲುನಾಡ್ ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಮಾತನಾಡಿ, ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುವ ಕಾಲದಿಂದ ಇಂದಿನ ತನಕವೂ ತುಲುವಿಗೆ ಸ್ಥಾನಮಾನಕ್ಕಾಗಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಅಕಾಡೆಮಿಯೊಟ್ಟಿಗೆ ಸಂಘಟನೆಯು ಸಹಕಾರ ನೀಡುತ್ತಾ ಬರುತ್ತಿದೆ. ತುಲುನಾಡಿನ ಎಲ್ಲಾ ಅಂಗಡಿ, ಶಾಲೆ, ಕಚೇರಿಯಲ್ಲಿ ತುಲು ಲಿಪಿಯ ನಾಮಫಲಕ ಹಾಕಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ ಸಜಿಪ, ಜೈ ತುಲುನಾಡ್ ಉಪಾಧ್ಯಕ್ಷರಾದ ಉದಯ್ ಪೂಂಜ, ಉಪ ಸಂಘಟನಾ ಕಾರ್ಯದರ್ಶಿ ಅಶ್ರಫ್ ಭಸ್ಥಿಕೋಡಿ, ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಹಾಗೂ ಪೃಥ್ವಿ ತುಲುವೆ ಉಪಸ್ಥಿತರಿದ್ದರು. 

ಧೀರಜ್ ಗಣ್ಯರನ್ನು ಸ್ವಾಗತಿಸಿ, ಮಹೇಶ್ ವಂದಿಸಿದರು. ಲಿಖಿತ್‌ರಾಜ್ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು