12:45 PM Thursday2 - May 2024
ಬ್ರೇಕಿಂಗ್ ನ್ಯೂಸ್
ಮನೆಯ ಮೇಲೆ ಸಿಸಿಬಿ ದಾಳಿ: ಡ್ರಗ್ಸ್ ಮಾರಾಟ ಮಾಡುತ್ತಿದ್ದ ಇಬ್ಬರ ಬಂಧನ; 16… ಈಶ್ವರಪ್ಪ ಪುತ್ರನಿಗೂ ಅಶ್ಲೀಲ ವೀಡಿಯೊ, ಫೋಟೋ, ವರದಿ ಭೀತಿ: ನ್ಯಾಯಾಲಯದಿಂದ ತಡೆಯಾಜ್ಞೆ ತಂದ… ತಾತನಿಂದಲೇ ಮೊಮ್ಮಗನ ಮೇಲೆ ಕ್ರಮ: ಜೆಡಿಎಸ್ ನಿಂದ ಹಾಸನ ಸಂಸದ ಪ್ರಜ್ವಲ್ ರೇವಣ್ಣ… ಸಂಸದ, ಕೇಂದ್ರ ಮಾಜಿ ಸಚಿವ ಶ್ರೀನಿವಾಸ್ ಪ್ರಸಾದ್ ನಿಧನ: ಪ್ರಧಾನಿ ಮೋದಿ ಸಹಿತ… ಅಶ್ಲೀಲ ವೀಡಿಯೊ ಪ್ರಕರಣ: ಬಂಧನದಿಂದ ತಪ್ಪಿಸಿಕೊಳ್ಳಲು ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿದೇಶಕ್ಕೆ… ದತ್ತಪೀಠ ಬಳಿ 100 ಅಡಿ ಆಳಕ್ಕೆ ಉರುಳಿ ಬಿದ್ದ ಪ್ರವಾಸಿಗರ ಮಿನಿ ಬಸ್:… ರಾಜ್ಯದಲ್ಲಿ ಅಭಿವೃದ್ಧಿ ಸ್ಥಗಿತ, ಕಾನೂನು ಸುವ್ಯವಸ್ಥೆ ಚಿಂತಾಜನಕ: ಬೆಳಗಾವಿಯಲ್ಲಿ ಪ್ರಧಾನಿ ಮೋದಿ ವಾಗ್ದಾಳಿ ಬೆಳಗಾವಿಯಲ್ಲಿ ಉತ್ತರ ಕರ್ನಾಟಕ ಶೈಲಿಯ ಜೋಳ ರೊಟ್ಟಿ ಸವಿದ ಪ್ರಧಾನಿ ಮೋದಿ ವಿಜಯಪುರದ ಶಿರನಾಳದಲ್ಲಿ ಶತಾಯುಷಿ ಭಾಗವ್ವ ಮತ ಚಲಾವಣೆ: 108ರ ಹರೆಯದ ಹಿರಿಯಜ್ಜಿ ಪ್ರಧಾನಿ ಮೋದಿ ಏ.28ರಂದು ಶಿರಸಿಗೆ: ಬಿಜೆಪಿ ಅಭ್ಯರ್ಥಿ ವಿಶ್ವೇಶ್ವರ ಹೆಗಡೆ ಕಾಗೇರಿ ಪರ…

ಇತ್ತೀಚಿನ ಸುದ್ದಿ

ಬಂಟ್ವಾಳ: ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ

23/08/2021, 09:49

ಬಂಟ್ವಾಳ(reporterkarnataka.com):

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನಾ ಸಮಾರಂಭ ಬಂಟ್ವಾಳದಲ್ಲಿ ಭಂಡಾರಿಬೆಟ್ಟುವಿನ ಯುವಜನ ವ್ಯಾಯಾಮ ಶಾಲೆಯಲ್ಲಿ ಭಾನುವಾರ ನಡೆಯಿತು.

ಜೈ ತುಲುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಅಧ್ಯಕ್ಷತೆಯಲ್ಲಿ ನಡೆದ ತುಲು ಲಿಪಿ ಕಲಿಯುವ ಕಾರ್ಯಾಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ್ ಅವರು ತುಲು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಚೇತನ್ ಮುಂಡಾಜೆ ಮಾತನಾಡಿ, ತುಲು ಭಾಷೆಗೆ ಲಿಪಿ ಇದ್ದರೂ ಅದೆಷ್ಟೋ ಜನರಿಗೆ ತಿಳಿಯದೆ ಹೋಗಿದೆ. ತುಲು ಭಾಷೆಗೆ ಸುಮಾರು 2500 ವರ್ಷದ ಇತಿಹಾಸ ಇದೆ. ಇಂತಹ ಭಾಷೆಯನ್ನು ನಾವು ಕಲಿಯದೆ ಹಿಂದುಳಿಯುವಂತೆ ಮಾಡಿದ್ದೇವೆ. ಇನ್ನಾದರೂ ಈ ಭಾಷೆಯನ್ನು, ಲಿಪಿಯನ್ನು ಕಲಿತು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ಮಾಡುವ ಎಂದರು.

ಜೈ ತುಲುನಾಡ್ ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಮಾತನಾಡಿ, ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುವ ಕಾಲದಿಂದ ಇಂದಿನ ತನಕವೂ ತುಲುವಿಗೆ ಸ್ಥಾನಮಾನಕ್ಕಾಗಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಅಕಾಡೆಮಿಯೊಟ್ಟಿಗೆ ಸಂಘಟನೆಯು ಸಹಕಾರ ನೀಡುತ್ತಾ ಬರುತ್ತಿದೆ. ತುಲುನಾಡಿನ ಎಲ್ಲಾ ಅಂಗಡಿ, ಶಾಲೆ, ಕಚೇರಿಯಲ್ಲಿ ತುಲು ಲಿಪಿಯ ನಾಮಫಲಕ ಹಾಕಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ ಸಜಿಪ, ಜೈ ತುಲುನಾಡ್ ಉಪಾಧ್ಯಕ್ಷರಾದ ಉದಯ್ ಪೂಂಜ, ಉಪ ಸಂಘಟನಾ ಕಾರ್ಯದರ್ಶಿ ಅಶ್ರಫ್ ಭಸ್ಥಿಕೋಡಿ, ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಹಾಗೂ ಪೃಥ್ವಿ ತುಲುವೆ ಉಪಸ್ಥಿತರಿದ್ದರು. 

ಧೀರಜ್ ಗಣ್ಯರನ್ನು ಸ್ವಾಗತಿಸಿ, ಮಹೇಶ್ ವಂದಿಸಿದರು. ಲಿಖಿತ್‌ರಾಜ್ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು