3:35 PM Thursday6 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಬಂಟ್ವಾಳ: ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನೆ

23/08/2021, 09:49

ಬಂಟ್ವಾಳ(reporterkarnataka.com):

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಜೈ ತುಲುನಾಡ್ (ರಿ.) ಮತ್ತು ತುಲುನಾಡ ಯುವಸೇನೆ ಬಂಟ್ವಾಳ ಇವರ ಸಹಭಾಗಿತ್ವದಲ್ಲಿ ‘ಬಲೆ ತುಲು ಲಿಪಿ ಕಲ್ಪುಗ’ ಕಾರ್ಯಾಗಾರ ಉದ್ಘಾಟನಾ ಸಮಾರಂಭ ಬಂಟ್ವಾಳದಲ್ಲಿ ಭಂಡಾರಿಬೆಟ್ಟುವಿನ ಯುವಜನ ವ್ಯಾಯಾಮ ಶಾಲೆಯಲ್ಲಿ ಭಾನುವಾರ ನಡೆಯಿತು.

ಜೈ ತುಲುನಾಡ್ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಅಧ್ಯಕ್ಷತೆಯಲ್ಲಿ ನಡೆದ ತುಲು ಲಿಪಿ ಕಲಿಯುವ ಕಾರ್ಯಾಗಾರವನ್ನು ಚೇತನ್ ಮುಂಡಾಜೆ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ತುಲು ಲಿಪಿ ಶಿಕ್ಷಕರಾದ ಜಗದೀಶ ಗೌಡ ಕಲ್ಕಳ್ ಅವರು ತುಲು ಲಿಪಿ ಬರೆಯುವ ಮೂಲಕ ಕಾರ್ಯಾಗಾರಕ್ಕೆ ಚಾಲನೆ ನೀಡಿದರು.

ಚೇತನ್ ಮುಂಡಾಜೆ ಮಾತನಾಡಿ, ತುಲು ಭಾಷೆಗೆ ಲಿಪಿ ಇದ್ದರೂ ಅದೆಷ್ಟೋ ಜನರಿಗೆ ತಿಳಿಯದೆ ಹೋಗಿದೆ. ತುಲು ಭಾಷೆಗೆ ಸುಮಾರು 2500 ವರ್ಷದ ಇತಿಹಾಸ ಇದೆ. ಇಂತಹ ಭಾಷೆಯನ್ನು ನಾವು ಕಲಿಯದೆ ಹಿಂದುಳಿಯುವಂತೆ ಮಾಡಿದ್ದೇವೆ. ಇನ್ನಾದರೂ ಈ ಭಾಷೆಯನ್ನು, ಲಿಪಿಯನ್ನು ಕಲಿತು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯ ಮಾಡುವ ಎಂದರು.

ಜೈ ತುಲುನಾಡ್ ಸಂಘಟನೆಯ ಅಧ್ಯಕ್ಷ ಸುದರ್ಶನ್ ಸುರತ್ಕಲ್ ಮಾತನಾಡಿ, ಸಂಘಟನೆ ಸಾಮಾಜಿಕ ಜಾಲತಾಣದಲ್ಲಿ ಕೆಲಸ ಮಾಡುವ ಕಾಲದಿಂದ ಇಂದಿನ ತನಕವೂ ತುಲುವಿಗೆ ಸ್ಥಾನಮಾನಕ್ಕಾಗಿ ಶಕ್ತಿಮೀರಿ ಪ್ರಯತ್ನ ಮಾಡುತ್ತಿದ್ದೇವೆ. ಅಕಾಡೆಮಿಯೊಟ್ಟಿಗೆ ಸಂಘಟನೆಯು ಸಹಕಾರ ನೀಡುತ್ತಾ ಬರುತ್ತಿದೆ. ತುಲುನಾಡಿನ ಎಲ್ಲಾ ಅಂಗಡಿ, ಶಾಲೆ, ಕಚೇರಿಯಲ್ಲಿ ತುಲು ಲಿಪಿಯ ನಾಮಫಲಕ ಹಾಕಬೇಕು ಎಂದರು.

ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಸೀತಾರಾಮ ಸಜಿಪ, ಜೈ ತುಲುನಾಡ್ ಉಪಾಧ್ಯಕ್ಷರಾದ ಉದಯ್ ಪೂಂಜ, ಉಪ ಸಂಘಟನಾ ಕಾರ್ಯದರ್ಶಿ ಅಶ್ರಫ್ ಭಸ್ಥಿಕೋಡಿ, ತುಲು ಲಿಪಿ ಶಿಕ್ಷಕರಾದ ಪೂರ್ಣಿಮಾ ಬಂಟ್ವಾಳ ಹಾಗೂ ಪೃಥ್ವಿ ತುಲುವೆ ಉಪಸ್ಥಿತರಿದ್ದರು. 

ಧೀರಜ್ ಗಣ್ಯರನ್ನು ಸ್ವಾಗತಿಸಿ, ಮಹೇಶ್ ವಂದಿಸಿದರು. ಲಿಖಿತ್‌ರಾಜ್ ಸೆರ್ಕಳ ಕಾರ್ಯಕ್ರಮ ನಿರೂಪಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು