5:20 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ: ಕಾರಣ ಏನು ಗೊತ್ತೇ?

13/07/2024, 19:07

ಪುತ್ತೂರು(reporterkarnataka.com): ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ)ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಕೋಡಿಂಬಾಳ ಅವರು ಪುಡಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ಪುತ್ತೂರು ರಾಜಕೀಯ ವಲಯದಲ್ಲಿ ಸಣ್ಣ ಮಟ್ಟಿನ ಕಂಪನ ಉಂಟು ಮಾಡಿದೆ.
ಪುತ್ತೂರು ಶಾಸಕ ಅಶೋಕ್ ರೈ ಅವರು ಜೂ.11ರಂದು ಬೆಂಗಳೂರಿನಿಂದ ಕರೆ ಮಾಡಿ, ಪುಡಾ ಸತ್ತಿದೆ. ನಿಮ್ಮ ಕಾರ್ಯವೈಖರಿ ಬಗ್ಗೆ ಜನ ಮಾತನಾಡಲು ಶುರು ಮಾಡುತ್ತಾರೆ ಎಂದು ಹೇಳಿದರು. ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಮಾಡಿದಾಗ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ.6 ರವರೆಗೆ ಇತ್ತು. ಬಳಿಕ ಸಿಕ್ಕ 22 ದಿನದಲ್ಲಿ ಕಟ್ ಕನ್ವರ್ಷನ್ ಹಾಗೂ ಶ್ರೀ ಮಹಾಲಿಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ. ನನ್ನನ್ನು ಯಾವುದೇ ಶಿಫಾರಸು ಇಲ್ಲದೇ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ನೀಡುವುದು ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಭಾಸ್ಕರ ಕೋಡಿಂಬಾಳ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು