3:47 PM Wednesday23 - April 2025
ಬ್ರೇಕಿಂಗ್ ನ್ಯೂಸ್
Terror Attack | ಕಾಶ್ಮೀರ: ಭಾರತೀಯ ಸೇನಾ ಕಾರ್ಯಾಚರಣೆಗೆ ಹತರಾದ ಉಗ್ರಗಾಮಿಗಳು: ಕಣಿವೆಯಲ್ಲಿ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ದಾಳಿ ನಡೆಸಿದ ಉಗ್ರಗಾಮಿಗಳ ವಿರುದ್ಧ ಸೇನಾ ಕಾರ್ಯಾಚರಣೆ: ಇಬ್ಬರು… ಕಾಶ್ಮೀರದಲ್ಲಿ ಕನ್ನಡಿಗರ ಮೇಲೆ ಉಗ್ರರ ದಾಳಿಗೆ ಶಿವಮೊಗ್ಗದ ಉದ್ಯಮಿ ಸಾವು: ಮುಖ್ಯಮಂತ್ರಿ ತುರ್ತುಸಭೆ;… Terrorist Attack | ಕಾಶ್ಮೀರದಲ್ಲಿ ಮತ್ತೆ ಉಗ್ರರ ಅಟ್ಟಹಾಸ: ಭೀಕರ ನರಮೇಧಕ್ಕೆ ಸಾವಿನ… Mandya | ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ವರದಿ ಸರಿಯಿಲ್ಲವೆನ್ನಲು ಬಿಜೆಪಿಗೆ ನೈತಿಕ… ಕಾಶ್ಮೀರದಲ್ಲಿ ಪ್ರವಾಸಿಗರ ಮೇಲೆ ಉಗ್ರರ ದಾಳಿ: ಶಿವಮೊಗ್ಗದ ಉದ್ಯಮಿ ಸಹಿತ 5ಕ್ಕೂ ಹೆಚ್ಚು… Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ…

ಇತ್ತೀಚಿನ ಸುದ್ದಿ

ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ: ಕಾರಣ ಏನು ಗೊತ್ತೇ?

13/07/2024, 19:07

ಪುತ್ತೂರು(reporterkarnataka.com): ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ)ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಕೋಡಿಂಬಾಳ ಅವರು ಪುಡಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ಪುತ್ತೂರು ರಾಜಕೀಯ ವಲಯದಲ್ಲಿ ಸಣ್ಣ ಮಟ್ಟಿನ ಕಂಪನ ಉಂಟು ಮಾಡಿದೆ.
ಪುತ್ತೂರು ಶಾಸಕ ಅಶೋಕ್ ರೈ ಅವರು ಜೂ.11ರಂದು ಬೆಂಗಳೂರಿನಿಂದ ಕರೆ ಮಾಡಿ, ಪುಡಾ ಸತ್ತಿದೆ. ನಿಮ್ಮ ಕಾರ್ಯವೈಖರಿ ಬಗ್ಗೆ ಜನ ಮಾತನಾಡಲು ಶುರು ಮಾಡುತ್ತಾರೆ ಎಂದು ಹೇಳಿದರು. ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಮಾಡಿದಾಗ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ.6 ರವರೆಗೆ ಇತ್ತು. ಬಳಿಕ ಸಿಕ್ಕ 22 ದಿನದಲ್ಲಿ ಕಟ್ ಕನ್ವರ್ಷನ್ ಹಾಗೂ ಶ್ರೀ ಮಹಾಲಿಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ. ನನ್ನನ್ನು ಯಾವುದೇ ಶಿಫಾರಸು ಇಲ್ಲದೇ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ನೀಡುವುದು ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಭಾಸ್ಕರ ಕೋಡಿಂಬಾಳ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು