2:42 AM Tuesday9 - June 2026
ಬ್ರೇಕಿಂಗ್ ನ್ಯೂಸ್
Bangalore | ನೌಕರಿ ಕೊಡಿಸುವುದಾಗಿ 40 ಮಂದಿಗೆ 5.3 ಕೋಟಿ ವಂಚನೆ: ಅಪ್ಪ… ಶಕ್ತಿ ಯೋಜನೆಯಿಂದ ವ್ಯಾಪಾರ ನಷ್ಟ, ಸಾಲಗಾರರ ಕಾಟ: ಮಂಡ್ಯದಲ್ಲಿ ಪತ್ನಿ, ಮಗನನ್ನು ಕೊಂದು… ರಾಜ್ಯಸಭೆ ಚುನಾವಣೆ: ರಾಜ್ಯದಿಂದ ಕಾಂಗ್ರೆಸ್ಸಿನ ಮೂವರು, ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧ ಆಯ್ಕೆ ಬಿಪಿಎಲ್ ಮಾತ್ರವಲ್ಲ, ಎಪಿಎಲ್ ಕುಟುಂಬಗಳಿಗೂ ಗುಡ್‌ನ್ಯೂಸ್: ಆರೋಗ್ಯ ಸಚಿವ ಖಾದರ್ ಜಲಸಂಪನ್ಮೂಲ ಖಾತೆಯಲ್ಲೇ ಮುಂದುವರಿಯುವೆ; ನಂಗೆ ಬೆಂಗಳೂರು ಉಸ್ತುವಾರಿಯೂ ಬೇಡ, ಏನೂ ಬೇಡ: ರಾಮಲಿಂಗಾ… ಇಂಡಿಯಾ ಮೈತ್ರಿಕೂಟದ ಸಭೆ: ಎಸ್ ಐಆರ್ ವಿರುದ್ಧ ಸುಪ್ರೀಂಕೋರ್ಟ್ ಸಿಜೆಗೆ ದೂರು ಸೇರಿದಂತೆ… ಮಳೆಗಾಲ ಎಫೆಕ್ಟ್: ಜೂನ್ 10ರಿಂದ ಕೊಡಗು ಜಿಲ್ಲೆಯಲ್ಲಿ ಬುಲೆಟ್ ಟ್ಯಾಂಕರ್ ಸಹಿತ ಭಾರೀ… ಸೈಟ್ ಇಲ್ಲದವರಿಗೆ ಉಚಿತ ಸೈಟ್ ಭಾಗ್ಯ: ಮುಖ್ಯಮಂತ್ರಿ ಡಿಕೆಶಿ ಮಹತ್ವದ ಘೋಷಣೆ Mangaluru | ನೂತನ ಆರೋಗ್ಯ ಸಚಿವ ಯು.ಟಿ.ಖಾದರ್ ಗೆ ಕಡಲನಗರಿಯಲ್ಲಿ ಭಾರೀ ಸ್ವಾಗತ Chikkamagaluru | ಅಧಿಕಾರಿಗಳ ನಿರ್ಲಕ್ಷ: ಸ್ವಂತ ಖರ್ಚಿನಲ್ಲಿ ರಸ್ತೆ ದುರಸ್ತಿಗೆ ಮುಂದಾದ ಕಡಿದಾಳು…

ಇತ್ತೀಚಿನ ಸುದ್ದಿ

ಪುಡಾ ಅಧ್ಯಕ್ಷ ಸ್ಥಾನಕ್ಕೆ ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ: ಕಾರಣ ಏನು ಗೊತ್ತೇ?

13/07/2024, 19:07

ಪುತ್ತೂರು(reporterkarnataka.com): ಪುತ್ತೂರು ನಗರ ಅಭಿವೃದ್ಧಿ ಯೋಜನಾ ಪ್ರಾಧಿಕಾರ(ಪುಡಾ)ಅಧ್ಯಕ್ಷ ಸ್ಥಾನಕ್ಕೆ ಕೆ.ಭಾಸ್ಕರ ಕೋಡಿಂಬಾಳ ದಿಢೀರ್ ರಾಜೀನಾಮೆ ನೀಡಿದ್ದಾರೆ.
ಶಾಸಕ ಅಶೋಕ್ ರೈ ಮಾತಿನಿಂದ ನೊಂದು ಕೋಡಿಂಬಾಳ ಅವರು ಪುಡಾ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಲು ನಿರ್ಧರಿಸಿದ್ದಾರೆ. ಕಾಂಗ್ರೆಸ್ಸಿನ ಹಿರಿಯ ನಾಯಕನ ಈ ರಾಜೀನಾಮೆ ನಿರ್ಧಾರ ಪುತ್ತೂರು ರಾಜಕೀಯ ವಲಯದಲ್ಲಿ ಸಣ್ಣ ಮಟ್ಟಿನ ಕಂಪನ ಉಂಟು ಮಾಡಿದೆ.
ಪುತ್ತೂರು ಶಾಸಕ ಅಶೋಕ್ ರೈ ಅವರು ಜೂ.11ರಂದು ಬೆಂಗಳೂರಿನಿಂದ ಕರೆ ಮಾಡಿ, ಪುಡಾ ಸತ್ತಿದೆ. ನಿಮ್ಮ ಕಾರ್ಯವೈಖರಿ ಬಗ್ಗೆ ಜನ ಮಾತನಾಡಲು ಶುರು ಮಾಡುತ್ತಾರೆ ಎಂದು ಹೇಳಿದರು. ನಾನು ಪುಡಾ ಅಧ್ಯಕ್ಷನಾಗಿ ಪದಗ್ರಹಣ ಮಾಡಿದಾಗ ಲೋಕಸಭಾ ಚುನಾವಣೆಯ ನೀತಿ ಸಂಹಿತೆ ಜಾರಿ ಆಯಿತು. ಅದು ಜೂ.6 ರವರೆಗೆ ಇತ್ತು. ಬಳಿಕ ಸಿಕ್ಕ 22 ದಿನದಲ್ಲಿ ಕಟ್ ಕನ್ವರ್ಷನ್ ಹಾಗೂ ಶ್ರೀ ಮಹಾಲಿಂಗೇಶ್ವರ ದೇಗುಲದ ಬಿಲ್ ಮಂಜೂರು ಮಾಡುವ ಕಾರ್ಯವನ್ನು ಮಾಡಿದ್ದೇನೆ. ನನ್ನನ್ನು ಯಾವುದೇ ಶಿಫಾರಸು ಇಲ್ಲದೇ ಶಾಸಕರು ಆಯ್ಕೆ ಮಾಡಿದ್ದು, ಅವರಿಗೆ ನನ್ನ ಕಾರ್ಯವೈಖರಿ ಇಷ್ಟವಾಗದಿದ್ದಾಗ ರಾಜೀನಾಮೆ ನೀಡುವುದು ಸೂಕ್ತ ಎಂದು ಭಾವಿಸಿ ಈ ನಿರ್ಧಾರಕ್ಕೆ ಬಂದಿರುವುದಾಗಿ ಭಾಸ್ಕರ ಕೋಡಿಂಬಾಳ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು