8:53 PM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಮಂಗಳೂರು ಎಂಎಸ್ ಪಿಟಿಸಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ: ಅಂಗನವಾಡಿಗಳಿಗೆ ಗುಣಮಟ್ಟದ ಆಹಾರ ಪೂರೈಸಲು ಸೂಚನೆ

13/07/2024, 23:49

ಮಂಗಳೂರು(reporterkarnataka.com): ನಗರದ ಹೊರವಲಯದ ಮೂಡುಶೆಡ್ಡೆ- ಶಿವನಗರದಲ್ಲಿರುವ ಸಮಗ್ರ ಶಿಶು ಅಭಿವೃದ್ಧಿ ಯೋಜನೆಯ ಮಹಿಳಾ ಪೂರಕ ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರ (ಎಂಎಸ್‌ಪಿಸಿ) ಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ದಿಢೀರ್ ಭೇಟಿ ನೀಡಿ, ಪರಿಶೀಲನೆ ನಡೆಸಿದರು.
ಅಂಗನವಾಡಿಗಳಿಗೆ ಪೂರೈಕೆಯಾಗುವ ಆಹಾರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರು. ಕೇಂದ್ರದ ಉದ್ಯೋಗನಿರತ ಮಹಿಳೆಯರಿಂದಲೇ ಆಹಾರ ಸಾಮಗ್ರಿಗಳ ತಯಾರಿಕೆಯ ಬಗ್ಗೆ ಮಾಹಿತಿ ಪಡೆದರು.
ಪುಷ್ಟಿ ನ್ಯೂಟ್ರಿಮಿಕ್ಸ್, ಹಾಲಿನ ಪುಡಿ ಮತ್ತಿತರ ಆಹಾರ ಸಾಮಗ್ರಿಗಳ ಗುಣಮಟ್ಟವನ್ನು ಸಚಿವರು ಪರೀಕ್ಷಿಸಿದರಲ್ಲದೇ, ಉತ್ಪಾದನಾ ಆಹಾರ ಸಾಮಗ್ರಿಗಳ ಬಗ್ಗೆ ಸ್ಥಳದಲ್ಲೇ ಇದ್ದ ಶಿಶು ಅಭಿವೃದ್ಧಿ ಯೋಜನಾ ಅಧಿಕಾರಿಯಿಂದ ಮಾಹಿತಿ ಪಡೆದರು. ಆಹಾರ ಸಮಗ್ರಗಳ ಪ್ಯಾಕ್ ಮಾಡುವ ತೂಕವನ್ನು ಕೂಡ ಗಮನಿಸಿದರು.
ಅಂಗನವಾಡಿ ಕೇಂದ್ರಗಳಿಗೆ ಪೂರೈಕೆಯಾಗುವ ಎಲ್ಲ ಆಹಾರ ಸಾಮಗ್ರಿಗಳಲ್ಲಿ, ಅದರಲ್ಲೂ ಉತ್ಪಾದನೆಯಲ್ಲೂ ಗುಣಮಟ್ಟವನ್ನು ಕಾಯ್ದುಕೊಳ್ಳಬೇಕು. ಆಹಾರ ಸಾಮಗ್ರಿಗಳು ಕಳಪೆ ಇದ್ದಲ್ಲಿ ಅಥವಾ ಯಾವುದೇ ಲೋಪದೋಷ ಇದ್ದಲ್ಲಿ ಕೂಡಲೇ ಸಂಬಂಧಪಟ್ಟವರ ಗಮನಕ್ಕೆ ತರಬೇಕು. ಇಲ್ಲವಾದರೆ ನೇರವಾಗಿ ತಮಗೆ ಪತ್ರ ಬರೆಯಬೇಕು ಎಂದು ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಸೂಚಿಸಿದರು.


ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಉಸ್ಮಾನ್, ಜಿಲ್ಲಾ ನಿರೂಪಣಾ ಅಧಿಕಾರಿ ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ರಶ್ಮಿ, ಪೌಷ್ಟಿಕ ಆಹಾರ ತಯಾರಿಕಾ ಕೇಂದ್ರದ ನಿರ್ವಹಣಾ ಅಧಿಕಾರಿ ಶೈಲಾ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು