3:32 AM Saturday19 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನದಿಂದ ಸ್ವಗೃಹಕ್ಕೆ ವಾಪಾಸಾದ ಕೊಲ್ಯದ ಆನಂದ್ ಪ್ರಸಾದ್

23/08/2021, 12:43

ಮಂಗಳೂರು (Reporterkarnataka.com) ಅಫ್ಘಾನಿಸ್ತಾನದ ಕಾಬೂಲ್‌ನ ಮಿಲಿಟರಿ ಬೇಸ್‌ನಲ್ಲಿ ಅಕೌಂಟೆಟ್ ಆಗಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ಸೋಮವಾರ ಸ್ವಗೃಹಕ್ಕೆ ವಾಪಾಸಾಗಿದ್ದಾರೆ.

ಅಮೆರಿಕಾ ನ್ಯಾಟೊ ಪಡೆ ಪ್ರಸಾದ್ ಆನಂದ್ ಅವರನ್ನು ಕತಾರ್ ವಿಮಾನ ನಿಲ್ದಾಣಕ್ಕೆ ಏರ್ ಲಿಪ್ಸ್ ಮಾಡಿತ್ತು. ಮೂರು ದಿವಸಗಳಿಂದ ಕತಾರಲ್ಲಿ ಉಳಿದುಕೊಂಡಿದ್ದ ಪ್ರಸಾದ್, ಅಲ್ಲಿಂದ ನಿನ್ನೆ ರಾತ್ರಿ ದೆಹಲಿಗೆ ತಲುಪಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

2013ರಲ್ಲಿ ಅಕೌಂಟೆಟ್ ಆಗಿ ಕಾಬೂಲಿನ ನ್ಯಾಟೋ ಮಿಲಿಟರಿ ಬೇಸ್‌ನಲ್ಲಿ ಕೆಲಸಕ್ಕೆ ಸೇರಿದ್ದರು.
ಹೊರಗಡೆ ತಾಲಿಬಾನಿಗಳ ಅಟ್ಟಹಾಸ ನಡೆಯುತ್ತಿದ್ದು ನಾವು ಮಿಲಿಟರಿ ಬೇಸಲ್ಲಿ ಇದ್ದ ಕಾರಣ ಅಷ್ಟೊಂದು ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಕಾಬೂಲಲ್ಲಿ ಮೂರು ದಿವಸಗಳಿಂದ ಫ್ಲೈಟ್‌ಗಳನ್ನ ಬ್ಲಾಕ್ ಮಾಡಿದ ನಂತರ ಸ್ವಲ್ಪ ಸಂಕಷ್ಟ ಅನುಭವಿಸುವಂತಾಗಿತ್ತು ಎಂದು ಪ್ರಸಾದ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು