1:50 PM Tuesday16 - June 2026
ಬ್ರೇಕಿಂಗ್ ನ್ಯೂಸ್
ವಿರಾಜಪೇಟೆ ಸಮೀಪದ ರೆಸಾರ್ಟ್ ಈಜುಕೋಳದಲ್ಲಿ ಬಿದ್ದು ಗೋವಾದ ಪ್ರವಾಸಿಗ ಸಾವು ಇಂದಿರಾ ಲಂಕೇಶ್ ನಿಧನ: ಮಾಜಿ ಸಿಎಂ ಸಿದ್ಧರಾಮಯ್ಯ, ಖ್ಯಾತ ನಟ ಪ್ರಕಾಶ್ ರೈ… ಮೈಸೂರು ಪಬ್‌ನಲ್ಲಿ ಭೀಕರ ಅಗ್ನಿ ದುರಂತ: ಇಬ್ಬರು ಸಜೀವ ದಹನ; ಹಲವರ ಸ್ಥಿತಿ… ಶಬರಿಮಲೆ ಮಣಿಕಂಠನ ದರ್ಶನಕ್ಕಾಗಿ ಇರುಮುಡಿ ಹೊತ್ತು ಶಬರಿಮಲೆಗೆ ಹೊರಟ ಕೇಂದ್ರ ಸಚಿವ ಕುಮಾರಸ್ವಾಮಿ ಬಾಗಲಕೋಟೆ: ಭೂ ವ್ಯವಹಾರ ಸಂಬಂಧ ಅಧಿಕಾರಿಗೆ ರೈತನಿಂದ ಚಪ್ಪಲಿ ಸೇವೆ ಕುಶಾಲನಗರ: ನದಿ ಪಾಲಾಗಿದ್ದ ಮತ್ತೋರ್ವ ಯುವಕನ ಮೃತದೇಹ ಪತ್ತೆ ಸೋಮವಾರಪೇಟೆ:ತೋಟದಲ್ಲಿ ಒಣಗಿದ್ದ ಮರ ಬಿದ್ದು ಬೆಳೆಗಾರ ಸಾವು ಸೋಮವಾರಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ 2 ಲೀಟರ್‍ ಗಿಂತ ಕಡಿಮೆ ಪ್ರಮಾಣದ ಕುಡಿಯುವ… ಹುಣಸೂರು ತಾಲೂಕಿನ ಕೂಡ್ಲೂರಿನಲ್ಲಿ ವ್ಯಾಘ್ರ ಸೆರೆ: ಅರಣ್ಯ ಇಲಾಖೆಯ ಬೋನಿಗೆ ಬಿದ್ದ ಹುಲಿ 15 ಸಾವಿರ ಲಂಚ ಸ್ವೀಕಾರ: ಮೂಡಿಗೆರೆ ಸರ್ವೇ ಇಲಾಖೆ ಮಹಿಳಾ ಸಿಬ್ಬಂದಿ ಸುಮಾ…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನದಿಂದ ಸ್ವಗೃಹಕ್ಕೆ ವಾಪಾಸಾದ ಕೊಲ್ಯದ ಆನಂದ್ ಪ್ರಸಾದ್

23/08/2021, 12:43

ಮಂಗಳೂರು (Reporterkarnataka.com) ಅಫ್ಘಾನಿಸ್ತಾನದ ಕಾಬೂಲ್‌ನ ಮಿಲಿಟರಿ ಬೇಸ್‌ನಲ್ಲಿ ಅಕೌಂಟೆಟ್ ಆಗಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ಸೋಮವಾರ ಸ್ವಗೃಹಕ್ಕೆ ವಾಪಾಸಾಗಿದ್ದಾರೆ.

ಅಮೆರಿಕಾ ನ್ಯಾಟೊ ಪಡೆ ಪ್ರಸಾದ್ ಆನಂದ್ ಅವರನ್ನು ಕತಾರ್ ವಿಮಾನ ನಿಲ್ದಾಣಕ್ಕೆ ಏರ್ ಲಿಪ್ಸ್ ಮಾಡಿತ್ತು. ಮೂರು ದಿವಸಗಳಿಂದ ಕತಾರಲ್ಲಿ ಉಳಿದುಕೊಂಡಿದ್ದ ಪ್ರಸಾದ್, ಅಲ್ಲಿಂದ ನಿನ್ನೆ ರಾತ್ರಿ ದೆಹಲಿಗೆ ತಲುಪಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

2013ರಲ್ಲಿ ಅಕೌಂಟೆಟ್ ಆಗಿ ಕಾಬೂಲಿನ ನ್ಯಾಟೋ ಮಿಲಿಟರಿ ಬೇಸ್‌ನಲ್ಲಿ ಕೆಲಸಕ್ಕೆ ಸೇರಿದ್ದರು.
ಹೊರಗಡೆ ತಾಲಿಬಾನಿಗಳ ಅಟ್ಟಹಾಸ ನಡೆಯುತ್ತಿದ್ದು ನಾವು ಮಿಲಿಟರಿ ಬೇಸಲ್ಲಿ ಇದ್ದ ಕಾರಣ ಅಷ್ಟೊಂದು ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಕಾಬೂಲಲ್ಲಿ ಮೂರು ದಿವಸಗಳಿಂದ ಫ್ಲೈಟ್‌ಗಳನ್ನ ಬ್ಲಾಕ್ ಮಾಡಿದ ನಂತರ ಸ್ವಲ್ಪ ಸಂಕಷ್ಟ ಅನುಭವಿಸುವಂತಾಗಿತ್ತು ಎಂದು ಪ್ರಸಾದ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು