3:30 PM Thursday19 - March 2026
ಬ್ರೇಕಿಂಗ್ ನ್ಯೂಸ್
ಕುಶಾಲನಗರದಲ್ಲಿ ವೇಶ್ಯವಾಟಿಕೆ: ಇಬ್ಬರ ಬಂಧನ: ಇನ್ನಿಬ್ಬರು ಯುವತಿಯರು ಸಾಂತ್ವನ ಕೇಂದ್ರಕ್ಕೆ ರಾ.ಹೆ 275 ಬದಿಯ ಅನಧಿಕೃತ ಜಾಹೀರಾತು ಫಲಕ, ಹಣ್ಣಿನ/ಗೂಡಂಗಡಿ ತೆರವುಗೊಳಿಸಲು ಕೊಡಗು ಜಿಲ್ಲಾಡಳಿತ… ಚಿಕ್ಕಮಗಳೂರು ಜಿಲ್ಲೆಯ ಹಲವೆಡೆ ಆಲಿಕಲ್ಲು ಮಳೆ: ಕಾಫಿ ತೋಟದಲ್ಲಿ ಮಲ್ಲಿಗೆ ಹೂವಿನ ಚಿತ್ತಾರ ಮಡಿಕೇರಿಯ ರಾಜಕಾಲುವೆಗೆ ಹಾರಿ ಯುವಕ ಆತ್ಮಹತ್ಯೆಗೆ ಯತ್ನ: ಸ್ಥಳೀಯರಿಂದ ರಕ್ಷಣೆ ಕೃಷಿ ಇಲಾಖೆಯ ಖಾಲಿ ಹುದ್ದೆಗಳ ಭರ್ತಿಗೆ ಕ್ರಮ: ಸದನದಲ್ಲಿ ಸಚಿವ ಎನ್.ಚೆಲುವರಾಯಸ್ವಾಮಿ ಭರವಸೆ ಚಾಮರಾಜನಗರ ಜಿಲ್ಲೆಯಲ್ಲಿ ಮತ್ತೊಂದು ಹುಲಿ ಬಲಿ: ಗುಂಡ್ಲುಪೇಟೆಯ ಪಡಗೂರಿನಲ್ಲಿ ವಿದ್ಯುತ್ ಸ್ಪರ್ಶಕ್ಕೆ ಸಾವು Chikkamagaluru | ಕೈ ಮುಖಂಡನ ವಿರುದ್ಧ ನ್ಯಾಯಕ್ಕಾಗಿ ಪ್ರಧಾನಿ ಮೋದಿಗೆ ಪತ್ರ ಬರೆದ… ಸಚಿವರೇ ಇಲ್ಲ.. ಏನ್ ಮಾಡ್ಬೇಕು..?’ ಈಗ ಹೊರಟ್ಟಿ ಸರದಿ: ಸಚಿವರ ಗೈರು ಕುರಿತು… ಯುಗಾದಿ ಮತ್ತು ರಂಜಾನ್ ಹಬ್ಬಗಳ ಸರಣಿ ರಜೆ | ಪ್ರಯಾಣಿಕರಿಗೆ ಶಾಕ್‌: ಖಾಸಗಿ… Kodagu | ಅಕಾಲಿಕ ಮಳೆ: ಕುಶಾಲನಗರ ತಾಲೂಕು ವ್ಯಾಪ್ತಿಯಲ್ಲಿ ಹಲವು ಮನೆಗಳಿಗೆ ಹಾನಿ

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನದಿಂದ ಸ್ವಗೃಹಕ್ಕೆ ವಾಪಾಸಾದ ಕೊಲ್ಯದ ಆನಂದ್ ಪ್ರಸಾದ್

23/08/2021, 12:43

ಮಂಗಳೂರು (Reporterkarnataka.com) ಅಫ್ಘಾನಿಸ್ತಾನದ ಕಾಬೂಲ್‌ನ ಮಿಲಿಟರಿ ಬೇಸ್‌ನಲ್ಲಿ ಅಕೌಂಟೆಟ್ ಆಗಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ಸೋಮವಾರ ಸ್ವಗೃಹಕ್ಕೆ ವಾಪಾಸಾಗಿದ್ದಾರೆ.

ಅಮೆರಿಕಾ ನ್ಯಾಟೊ ಪಡೆ ಪ್ರಸಾದ್ ಆನಂದ್ ಅವರನ್ನು ಕತಾರ್ ವಿಮಾನ ನಿಲ್ದಾಣಕ್ಕೆ ಏರ್ ಲಿಪ್ಸ್ ಮಾಡಿತ್ತು. ಮೂರು ದಿವಸಗಳಿಂದ ಕತಾರಲ್ಲಿ ಉಳಿದುಕೊಂಡಿದ್ದ ಪ್ರಸಾದ್, ಅಲ್ಲಿಂದ ನಿನ್ನೆ ರಾತ್ರಿ ದೆಹಲಿಗೆ ತಲುಪಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

2013ರಲ್ಲಿ ಅಕೌಂಟೆಟ್ ಆಗಿ ಕಾಬೂಲಿನ ನ್ಯಾಟೋ ಮಿಲಿಟರಿ ಬೇಸ್‌ನಲ್ಲಿ ಕೆಲಸಕ್ಕೆ ಸೇರಿದ್ದರು.
ಹೊರಗಡೆ ತಾಲಿಬಾನಿಗಳ ಅಟ್ಟಹಾಸ ನಡೆಯುತ್ತಿದ್ದು ನಾವು ಮಿಲಿಟರಿ ಬೇಸಲ್ಲಿ ಇದ್ದ ಕಾರಣ ಅಷ್ಟೊಂದು ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಕಾಬೂಲಲ್ಲಿ ಮೂರು ದಿವಸಗಳಿಂದ ಫ್ಲೈಟ್‌ಗಳನ್ನ ಬ್ಲಾಕ್ ಮಾಡಿದ ನಂತರ ಸ್ವಲ್ಪ ಸಂಕಷ್ಟ ಅನುಭವಿಸುವಂತಾಗಿತ್ತು ಎಂದು ಪ್ರಸಾದ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು