7:17 AM Friday7 - November 2025
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ‘ಬಿಸಿತುಪ್ಪ’ವಾಗಿದೆ: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ Bangalore | ಕೆಂಪೇಗೌಡ ಬಸ್ ನಿಲ್ದಾಣಕ್ಕೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ದಿಢೀರ್… ಸರ್ಕಾರಕ್ಕೆ ಕಾಳಜಿ ಇದ್ದಲ್ಲಿ ಬೆಳೆಗಾರರ ಆಗ್ರಹದಂತೆ ಕಬ್ಬಿಗೆ ದರ ನಿಗದಿಗೊಳಿಸಲಿ, ಪ್ರತಿ ಟನ್… ಸಿ & ಡಿ ಸಮಸ್ಯೆ | ಎಲ್ಲರಿಗೂ ಅನುಕೂಲವಾಗುವ ರೀತಿ ಸಮಿತಿ ರಚನೆ:… Chikkamagaluru | ತುಂಡಾಗಿ ಬಿದ್ದಿದ್ದ ವಿದ್ಯುತ್ ವಯರ್ ಸ್ಪರ್ಶ: 3 ಹಸುಗಳು ದಾರುಣ… ಕೊರಗರು ಪ್ರಾಚೀನ ಪ್ರೋಟೋ ದ್ರಾವಿಡ ಪೂರ್ವಜರ ಜೀವಂತ ಪ್ರತಿನಿಧಿಗಳು: ಮಹತ್ವದ ಸಂಶೋಧನೆಯಿಂದ ಬಹಿರಂಗ ಸ್ಪರ್ಶ್‌ ಆಸ್ಪತ್ರೆಯ ಹೆಣ್ಣೂರು ಶಾಖೆಯಲ್ಲಿ “ಕ್ಯಾನ್ಸರ್‌ ಚಿಕಿತ್ಸಾ ಘಟಕ”ಕ್ಕೆ ನಟ ಶಿವರಾಜ್‌ ಕುಮಾರ್‌… Kodagu | ಮಡಿಕೇರಿ ತಾಳತ್ ಮನೆ ಬಳಿ ಡಸ್ಟ್ ರ್ ಕಾರಿಗೆ ಬೆಂಕಿ:… ರೈತರಿಗೆ ಅನ್ಯಾಯ ಆಗದಂತೆ ಕ್ರಮ: ಬೆಳಗಾವಿ ಕಬ್ಬು ಬೆಳೆಗಾರರ ಹೋರಾಟಕ್ಕೆ ಸಚಿವೆ ಹೆಬ್ಬಾಳ್ಕರ್… 40 ಸಾವಿರ ಲಂಚ ಸ್ವೀಕಾರ: ಮೆಸ್ಕಾಂ ಜೂನಿಯರ್ ಇಂಜಿನಿಯರ್ ಮಲ್ಲಿಕಾರ್ಜುನ ಸ್ವಾಮಿ ಲೋಕಾಯುಕ್ತ…

ಇತ್ತೀಚಿನ ಸುದ್ದಿ

ಅಫ್ಘಾನಿಸ್ತಾನದಿಂದ ಸ್ವಗೃಹಕ್ಕೆ ವಾಪಾಸಾದ ಕೊಲ್ಯದ ಆನಂದ್ ಪ್ರಸಾದ್

23/08/2021, 12:43

ಮಂಗಳೂರು (Reporterkarnataka.com) ಅಫ್ಘಾನಿಸ್ತಾನದ ಕಾಬೂಲ್‌ನ ಮಿಲಿಟರಿ ಬೇಸ್‌ನಲ್ಲಿ ಅಕೌಂಟೆಟ್ ಆಗಿದ್ದ ಕೊಲ್ಯ ಕಣೀರುತೋಟ ನಿವಾಸಿ ಪ್ರಸಾದ್ ಆನಂದ್ (39) ಸೋಮವಾರ ಸ್ವಗೃಹಕ್ಕೆ ವಾಪಾಸಾಗಿದ್ದಾರೆ.

ಅಮೆರಿಕಾ ನ್ಯಾಟೊ ಪಡೆ ಪ್ರಸಾದ್ ಆನಂದ್ ಅವರನ್ನು ಕತಾರ್ ವಿಮಾನ ನಿಲ್ದಾಣಕ್ಕೆ ಏರ್ ಲಿಪ್ಸ್ ಮಾಡಿತ್ತು. ಮೂರು ದಿವಸಗಳಿಂದ ಕತಾರಲ್ಲಿ ಉಳಿದುಕೊಂಡಿದ್ದ ಪ್ರಸಾದ್, ಅಲ್ಲಿಂದ ನಿನ್ನೆ ರಾತ್ರಿ ದೆಹಲಿಗೆ ತಲುಪಿದ್ದಾರೆ. ಇಂದು ಬೆಳಗ್ಗೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

2013ರಲ್ಲಿ ಅಕೌಂಟೆಟ್ ಆಗಿ ಕಾಬೂಲಿನ ನ್ಯಾಟೋ ಮಿಲಿಟರಿ ಬೇಸ್‌ನಲ್ಲಿ ಕೆಲಸಕ್ಕೆ ಸೇರಿದ್ದರು.
ಹೊರಗಡೆ ತಾಲಿಬಾನಿಗಳ ಅಟ್ಟಹಾಸ ನಡೆಯುತ್ತಿದ್ದು ನಾವು ಮಿಲಿಟರಿ ಬೇಸಲ್ಲಿ ಇದ್ದ ಕಾರಣ ಅಷ್ಟೊಂದು ಗಮನಕ್ಕೆ ಬಂದಿಲ್ಲ ಎಂದಿದ್ದಾರೆ. ಕಾಬೂಲಲ್ಲಿ ಮೂರು ದಿವಸಗಳಿಂದ ಫ್ಲೈಟ್‌ಗಳನ್ನ ಬ್ಲಾಕ್ ಮಾಡಿದ ನಂತರ ಸ್ವಲ್ಪ ಸಂಕಷ್ಟ ಅನುಭವಿಸುವಂತಾಗಿತ್ತು ಎಂದು ಪ್ರಸಾದ್ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು