8:00 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ

14/07/2024, 15:29

ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ

info.reporterkarnataka@gmail.com

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು.
ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿದರು.
ನೂರಾರೂ ವರ್ಷಗಳಿಂದ ಸೌಹಾರ್ದದ ಪ್ರತೀಕವಾದ ನಾಲತವಾಡದಲ್ಲಿ ಮುಂದೆಯೂ ಪರಸ್ಪರ ಸಹಕಾರ ಹಾಗೂ ಸೌಹಾರ್ದದಿಂದ ಪ್ರತಿಯೊಬ್ಬರೂ ಹಬ್ಬ ಆಚರಿಸಬೇಕು. ಮೊಹರಂ ಹಬ್ಬದಲ್ಲಿ ಶಾಂತಿಗೆ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕೆಂದರು,
ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕಿ, ಶಾಂತಿ ಕಾಪಾಡುವ ಅಗತ್ಯವಿದೆ. ವದಂತಿಗಳಿಗೆ ಕಿವಿಗೊಡದೆ ಸಾಮರಸ್ಯದಿಂದ ಹಬ್ಬ ಆಚರಿಸಿ ಎಂದರು.

ಹಬ್ಬದ ದಿನದಂದು ನಮ್ಮ ಇಲಾಖೆಯಿಂದ ಸೂಕ್ತ ಬಂದೋ ಬಸ್ತ್ ಒದಗಿಸುವ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ವೇಳೆ ಪ್ರಮುಖರಾದ ಬಾಲಚಂದ್ರ ಗದಗಿನ ಮಾತನಾಡಿದರು.
ಸಭೆಯಲ್ಲಿ ಮುಖ್ಯ ಪೇದೆ, ಪಿ.ಎಸ್.ಪಾಟೀಲ, ಹನಮಂತ ಹೆಬ್ಬುಲಿ, ಬಸವರಾಜ ಹಿಪ್ಪರಗಿ, ಬಸವರಾಜ ಚಿಂಚೋಳಿ, ಚಿದಾನಂದ, ಮತ್ತು ಸಿಕ್ಕಲಗಾರ, ಅವಟಿ, ಖಾಜಿ, ಹವೇಲಿ, ನಾಡಗೌಡ, ಬಾರಪೇಟ, ತಳಗಿನ ಮಸೀದ್, ಜಾಲಗಾರ ಓಣಿಯ ಮಸೀದಿಯ ಪ್ರಮುಖರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು