1:14 AM Thursday3 - July 2025
ಬ್ರೇಕಿಂಗ್ ನ್ಯೂಸ್
ಕಡೂರು: 6 ದಿನಗಳ ಹುಡುಕಾಟದ ನಂತರವೂ ಸಿಗದ ಫಾರೆಸ್ಟ್ ಗಾರ್ಡ್ ಶರತ್‌ ಸುಳಿವು ಸೋರುತ್ತಿದೆ ಸೂರು; ಕೊಠಡಿ ತುಂಬಾ ನೀರು: ರಾಷ್ಟ್ರಕವಿ ಕುವೆಂಪು ಓದಿದೆ ಶಾಲೆಯ ಕೇಳುವವರೇ… ಮಲೆನಾಡಲ್ಲಿ ಮುಂದುವರಿದ ಮಳೆ: ಶೃಂಗೇರಿಯ ಗಾಂಧಿ ಮೈದಾನದ ರಸ್ತೆಗೆ ನುಗ್ಗಿ ನೆರೆ ನೀರು;… ಮುಖ್ಯಮಂತ್ರಿ ಸ್ಥಾನಕ್ಕೆ ಯಾವುದೇ ಪೈಪೋಟಿಯಿಲ್ಲ: ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ Accident | ಸುರತ್ಕಲ್ ಬಳಿ ಎರಡು ಖಾಸಗಿ ಬಸ್ಸುಗಳು ಮುಖಾಮುಖಿ ಡಿಕ್ಕಿ: 28… Chikkaballapura | ರಾಜ್ಯ ಸಚಿವ ಸಂಪುಟ ಸಭೆ: ಮುಖ್ಯಮಂತ್ರಿ ಘೋಷಿಸಿದ ಯೋಜನೆ, ತೀರ್ಮಾನಗಳೇನು? JDS Protest | ರಾಜ್ಯದಲ್ಲಿ ಆರ್ಥಿಕ ಅರಾಜಕತೆ: ಬೆಂಗಳೂರು ಪ್ರತಿಭಟನೆಯಲ್ಲಿ ಜೆಡಿಎಸ್ ಆರೋಪ Dharwad | ಅಸಂಘಟಿತ ಕಾರ್ಮಿಕರ ಕಲ್ಯಾಣಕ್ಕಾಗಿ ಸರ್ಕಾರದಿಂದ ಕ್ರಾಂತಿಕಾರಕ ಯೋಜನೆ ಜಾರಿ: ಕಾರ್ಮಿಕ… ಬೆಂಗಳೂರು ಕಾಲ್ತುಳಿತದ ಪ್ರಕರಣ; ಸಿಎಟಿ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶವಿದೆ: ಮುಖ್ಯಮಂತ್ರಿ Karnataka CM | ಮಾಧ್ಯಮಗಳು ನನ್ನನ್ನೂ ಸೇರಿ ಅಧಿಕಾರಸ್ಥರ ಓಲೈಕೆ ಮಾಡಬಾರದು: ಮುಖ್ಯಮಂತ್ರಿ…

ಇತ್ತೀಚಿನ ಸುದ್ದಿ

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ

14/07/2024, 15:29

ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ

info.reporterkarnataka@gmail.com

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು.
ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿದರು.
ನೂರಾರೂ ವರ್ಷಗಳಿಂದ ಸೌಹಾರ್ದದ ಪ್ರತೀಕವಾದ ನಾಲತವಾಡದಲ್ಲಿ ಮುಂದೆಯೂ ಪರಸ್ಪರ ಸಹಕಾರ ಹಾಗೂ ಸೌಹಾರ್ದದಿಂದ ಪ್ರತಿಯೊಬ್ಬರೂ ಹಬ್ಬ ಆಚರಿಸಬೇಕು. ಮೊಹರಂ ಹಬ್ಬದಲ್ಲಿ ಶಾಂತಿಗೆ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕೆಂದರು,
ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕಿ, ಶಾಂತಿ ಕಾಪಾಡುವ ಅಗತ್ಯವಿದೆ. ವದಂತಿಗಳಿಗೆ ಕಿವಿಗೊಡದೆ ಸಾಮರಸ್ಯದಿಂದ ಹಬ್ಬ ಆಚರಿಸಿ ಎಂದರು.

ಹಬ್ಬದ ದಿನದಂದು ನಮ್ಮ ಇಲಾಖೆಯಿಂದ ಸೂಕ್ತ ಬಂದೋ ಬಸ್ತ್ ಒದಗಿಸುವ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ವೇಳೆ ಪ್ರಮುಖರಾದ ಬಾಲಚಂದ್ರ ಗದಗಿನ ಮಾತನಾಡಿದರು.
ಸಭೆಯಲ್ಲಿ ಮುಖ್ಯ ಪೇದೆ, ಪಿ.ಎಸ್.ಪಾಟೀಲ, ಹನಮಂತ ಹೆಬ್ಬುಲಿ, ಬಸವರಾಜ ಹಿಪ್ಪರಗಿ, ಬಸವರಾಜ ಚಿಂಚೋಳಿ, ಚಿದಾನಂದ, ಮತ್ತು ಸಿಕ್ಕಲಗಾರ, ಅವಟಿ, ಖಾಜಿ, ಹವೇಲಿ, ನಾಡಗೌಡ, ಬಾರಪೇಟ, ತಳಗಿನ ಮಸೀದ್, ಜಾಲಗಾರ ಓಣಿಯ ಮಸೀದಿಯ ಪ್ರಮುಖರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು