7:49 AM Saturday30 - May 2026
ಬ್ರೇಕಿಂಗ್ ನ್ಯೂಸ್
ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..! ಉಪ ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ

ಇತ್ತೀಚಿನ ಸುದ್ದಿ

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಶಾಂತಿ-ಸೌಹಾರ್ದದಿಂದ ಆಚರಿಸಬೇಕು: ಶಾಂತಿ ಸಭೆಯಲ್ಲಿ ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ

14/07/2024, 15:29

ಶಿವು ರಾಠೋಡ ಮುದ್ದೇಬಿಹಾಳ ವಿಜಯಪುರ

info.reporterkarnataka@gmail.com

ಮೊಹರಂ ಹಬ್ಬವನ್ನು ಹಿಂದೂ–ಮುಸ್ಲಿಮರು ಒಟ್ಟಿಗೆ ಶಾಂತಿ-ಸೌಹಾರ್ದದಿಂದ ಆಚರಿಸಬೇಕೆಂದು ಪಿಎಸ್ಐ ಸಂಜಯ್ ತಿಪ್ಪಾರೆಡ್ಡಿ ಹೇಳಿದರು.
ಇಲ್ಲಿನ ಹೊರ ಪೊಲೀಸ್ ಠಾಣೆಯಲ್ಲಿ ಶನಿವಾರ ನಡೆದ ಮೊಹರಂ ಶಾಂತಿ ಸಭೆಯಲ್ಲಿ ಮಾತನಾಡಿದರು.
ನೂರಾರೂ ವರ್ಷಗಳಿಂದ ಸೌಹಾರ್ದದ ಪ್ರತೀಕವಾದ ನಾಲತವಾಡದಲ್ಲಿ ಮುಂದೆಯೂ ಪರಸ್ಪರ ಸಹಕಾರ ಹಾಗೂ ಸೌಹಾರ್ದದಿಂದ ಪ್ರತಿಯೊಬ್ಬರೂ ಹಬ್ಬ ಆಚರಿಸಬೇಕು. ಮೊಹರಂ ಹಬ್ಬದಲ್ಲಿ ಶಾಂತಿಗೆ ಭಂಗ ಬಾರದಂತೆ ಎಚ್ಚರಿಕೆ ವಹಿಸಬೇಕೆಂದರು,
ಕಿಡಿಗೇಡಿಗಳ ಕೃತ್ಯಕ್ಕೆ ಕಡಿವಾಣ ಹಾಕಿ, ಶಾಂತಿ ಕಾಪಾಡುವ ಅಗತ್ಯವಿದೆ. ವದಂತಿಗಳಿಗೆ ಕಿವಿಗೊಡದೆ ಸಾಮರಸ್ಯದಿಂದ ಹಬ್ಬ ಆಚರಿಸಿ ಎಂದರು.

ಹಬ್ಬದ ದಿನದಂದು ನಮ್ಮ ಇಲಾಖೆಯಿಂದ ಸೂಕ್ತ ಬಂದೋ ಬಸ್ತ್ ಒದಗಿಸುವ ಎಲ್ಲಾ ಕ್ರಮ ಕೈಗೊಳ್ಳುತ್ತೇವೆ ಎಂದರು.
ಈ ವೇಳೆ ಪ್ರಮುಖರಾದ ಬಾಲಚಂದ್ರ ಗದಗಿನ ಮಾತನಾಡಿದರು.
ಸಭೆಯಲ್ಲಿ ಮುಖ್ಯ ಪೇದೆ, ಪಿ.ಎಸ್.ಪಾಟೀಲ, ಹನಮಂತ ಹೆಬ್ಬುಲಿ, ಬಸವರಾಜ ಹಿಪ್ಪರಗಿ, ಬಸವರಾಜ ಚಿಂಚೋಳಿ, ಚಿದಾನಂದ, ಮತ್ತು ಸಿಕ್ಕಲಗಾರ, ಅವಟಿ, ಖಾಜಿ, ಹವೇಲಿ, ನಾಡಗೌಡ, ಬಾರಪೇಟ, ತಳಗಿನ ಮಸೀದ್, ಜಾಲಗಾರ ಓಣಿಯ ಮಸೀದಿಯ ಪ್ರಮುಖರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು