7:15 AM Thursday18 - December 2025
ಬ್ರೇಕಿಂಗ್ ನ್ಯೂಸ್
ನಕಲಿ‌ ದಾಖಲೆ ಸೃಷ್ಟಿಸಿ 512 ಎಕರೆ ಅರಣ್ಯ-ಕಂದಾಯ ಭೂಮಿ ಕಬಳಿಕೆ ಯತ್ನ: ಆರೋಪಿ… ಇಂಜಿನಿಯರಿಂಗ್ ಸೀಟುಗಳನ್ನು ನುಂಗುತ್ತಿರುವ ಖಾಸಗಿ ವಿಶ್ವವಿದ್ಯಾಲಯಗಳು: ಸದನದ ಗಮನ ಸೆಳೆದ ಶಾಸಕ ಡಾ.… Kodagu | ಭಾಗಮಂಡಲ ಮೀಸಲು ಅರಣ್ಯದಲ್ಲಿ ಅಕ್ರಮ ಜಿಂಕೆ ಬೇಟೆ: ಆರೋಪಿಗಳು ಅರಣ್ಯ… 1600 ಪಿ.ಎಸ್.ಐ ಹುದ್ದೆಗಳ ನೇಮಕಾತಿಗೆ ಆರ್ಥಿಕ ಇಲಾಖೆಗೆ ಪ್ರಸ್ತಾವನೆ: ಗೃಹ ಸಚಿವ ಡಾ.ಜಿ.ಪರಮೇಶ್ವರ ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ…

ಇತ್ತೀಚಿನ ಸುದ್ದಿ

ಶಾಲೆ ಕೊಠಡಿ, ಅಂಗನವಾಡಿ ಕಟ್ಟಡ ಕಳಪೆ ಕಾಮಗಾರಿ: ಗುತ್ತೇದಾರ ಪರವಾನಿಗೆ ರದ್ದುಪಡಿಸಲು ಆಗ್ರಹ

16/07/2024, 17:29

ಶಿವು ರಾಠೋಡ ಜೇವರ್ಗಿ ಕಲಬುರಗಿ

info.reporterkarnataka@gmail.com

ಜೇವರ್ಗಿ ತಾಲೂಕಿನ ಚೆನ್ನೂರು ಗ್ರಾಮದಲ್ಲಿರುವ ಅಂಗನವಾಡಿ ಕೇಂದ್ರ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕೋಣೆಗಳು ಮಳೆಯಿಂದ ಸಂಪೂರ್ಣವಾಗಿ ಸೋರುತ್ತಿದ್ದು ಅಲ್ಲೇ ಮಕ್ಕಳು ವಿದ್ಯಾಭ್ಯಾಸ ಮಾಡಲು ಜೀವ ಕೈಯಲ್ಲಿ ಹಿಡಿದುಕೊಂಡು ಅಭ್ಯಾಸ ಮಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಜೇವರ್ಗಿ ತಾಲೂಕಿನ ಶ್ರೀರಾಮ ಸೇನದ ಅಧ್ಯಕ್ಷರ ಮಲ್ಕಣ್ಣ ಹಿರಿ ಪೂಜಾರಿ ಆರೋಪಿಸಿದ್ದಾರೆ.


ಮಕ್ಕಳಿಗೆ ವಿದ್ಯಾಭ್ಯಾಸ ಮಾಡಿಸುವುದರಲ್ಲದೆ ಅಡುಗೆ ಮಾಡಿಸಲು ಸಂಪೂರ್ಣ ಕೋಣೆ ಜಲಾವೃತಗೊಂಡಿದೆ ಈ ಕಾಮಗಾರಿ ಮಾಡಿದ ಗುತ್ತೇದಾರರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಜೊತೆಗೆ ಅವರ ಗುತ್ತೇದಾರ್ ಪರವಾನಿಗೆಯನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿದ್ದಾರೆ.
ಈ ಅಂಗನವಾಡಿ ಕಟ್ಟಡ ನಿರ್ಮಾಣವಾಗಿ ಕೆಲವೇ ವರ್ಷಗಳಲ್ಲಿ ಈ ರೀತಿ ಮಳೆಯಿಂದ ಸೋರುತ್ತಿದೆ. ಜೊತೆಗೆ ಅಲ್ಲಲ್ಲಿ ಮೇಲ್ಚಾವಣಿ ಕುಸಿದು ಮಕ್ಕಳ ಮೇಲೆ ಬೀಳುತ್ತಿದೆ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಕಡೆ ಗಮನ ಹರಿಸಿ ಮಕ್ಕಳಿಗೆ ವಿದ್ಯಾಭ್ಯಾಸ ಮಾಡಲು ಸೂಕ್ತ ವ್ಯವಸ್ಥೆ ಮಾಡಿಕೊಡಬೇಕು. ಈ ಕಾಮಗಾರಿ ಮಾಡಿದ ಗುತ್ತೇದಾರರ ಪರವಾನಿಗೆ ರದ್ದು ಪಡಿಸಬೇಕು ಎಂದು ಒತ್ತಾಯಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು