4:55 PM Friday15 - May 2026
ಬ್ರೇಕಿಂಗ್ ನ್ಯೂಸ್
ತರೀಕೆರೆ | ರೆವೆನ್ಯೂ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ: ರೈತನಿಂದ 30 ಸಾವಿರ ಲಂಚ… ಸ್ಯಾಂಡಲ್‌ವುಡ್‌ಗೆ ಬಿಗ್ ಶಾಕ್: ಹೃದಯಘಾತಕ್ಕೆ ನಟ ದಿಲೀಪ್ ರಾಜ್ ಬಲಿ ಪ್ರಧಾನಿ ಮೋದಿ ಕರೆ ಬೆನ್ನಲ್ಲೆ, ಅಡುಗೆ ಎಣ್ಣೆ ದರದಲ್ಲಿ ಭಾರಿ ಇಳಿಕೆ: ಅಕ್ಕಿ… ವಿದ್ಯುತ್ ಕಂಬದಲ್ಲಿ ಶಾರ್ಟ್ ಸರ್ಕ್ಯೂಟ್: ಬೈಕ್ ಸವಾರರ ನಿರ್ಲಕ್ಷ್ಯದ ಸವಾರಿ; ಅಪಾಯದಿಂದ ಪಾರು. ಬೆಂಗಳೂರು ಉಪನಗರ ರೈಲು ಯೋಜನೆ: 𝟭𝟱𝟯 ಮೆಟ್ರೋ ಕೋಚ್ ಗಳ ಖರೀದಿಗೆ ಐಸಿಎಫ್… ಚಿಕ್ಕಮಗಳೂರು | ಬ್ರೇಕ್ ಫೇಲ್: ಬಸ್ ನಿಲ್ದಾಣದ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಸರಕಾರಿ… ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ: ಕಾಂಗ್ರೆಸ್​​ನ ರಾಜೇಗೌಡರಿಗೆ ಮತ್ತೆ ದಕ್ಕಿದ ಶಾಸಕ… ದೇಶದ ಜನತೆಗೆ ಮೋದಿ ಮಿತವ್ಯಯದ ಕರೆ: ವಾಗ್ದಾಳಿ ನಡೆಸಿದ ರಾಹುಲ್‌ಗೆ ಬಿಜೆಪಿ ತಿರುಗೇಟು ಶೃಂಗೇರಿ ಕ್ಷೇತ್ರ ಮರು ಎಣಿಕೆ: ಹೈಕೋರ್ಟ್ ಆದೇಶಕ್ಕೆ ಸುಪ್ರೀಂಕೋರ್ಟ್ ತಡೆ: ಮತ್ತೆ ರಾಜೇಗೌಡ… ಪತಿಯೊಂದಿಗೆ ಜಗಳವಾಡಿ 8ನೇ ಮಹಡಿಯಿಂದ ಜಿಗಿದು ಮಹಿಳೆ ಆತ್ಮಹತ್ಯೆ: ಸಾಮಾಜಿಕ ಜಾಲತಾಣಗಳಲ್ಲಿ ದೃಶ್ಯ…

ಇತ್ತೀಚಿನ ಸುದ್ದಿ

ರಂಗಕರ್ಮಿ, ಚಲನಚಿತ್ರ ನಿರ್ದೇಶಕ, ‘ಗುಡ್ಡದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಇನ್ನಿಲ್ಲ: ರಂಗ ಜಂಗಮ ಇನ್ನು ನೆನಪು ಮಾತ್ರ

16/07/2024, 18:08

ಮಂಗಳೂರು(reporterkarnataka.com): ಪ್ರಸಿದ್ದ ನಾಟಕಕಾರ, ಚಲನಚಿತ್ರ ಹಾಗೂ ರಂಗ ನಿರ್ದೇಶಕ, ‘ಗುಡ್ಡೆದ ಭೂತ’ ಖ್ಯಾತಿಯ ಸದಾನಂದ ಸುವರ್ಣ ಅವರು ಇಂದು ನಿಧನರಾದರು.
ಘಟಶ್ರಾದ್ಧ,ಕುಬಿ ಮತ್ತು ಇಯಾಲದಂತಹ ಕಲಾತ್ಮಕ ಸದಭಿರುಚಿಯ ಸಿನೆಮಾಗಳನ್ನು ಕನ್ನಡಿಗರಿಗೆ ಉಣ ಬಡಿಸಿದ್ದ ಸದಾನಂದ ಸುವರ್ಣ ಅವರು ತಮ್ಮ 92ನೇ ವಯಸ್ಸಿನಲ್ಲಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದರು.
ಸಿನಿಮಾ ಮಾತ್ರವಲ್ಲದೆ ಕನ್ನಡ ಮತ್ತು ತುಳು ರಂಗ ಭೂಮಿಯಲ್ಲಿ ನೂರಾರು ಅತ್ಯುತ್ತಮ ಯಶಸ್ವೀ ನಾಟಕಗಳನ್ನು ರಚಿಸಿ ಅವರು ನಿರ್ದೇಶಿಸಿದ್ದರು. ಗುಡ್ಡೆದ ಭೂತದ ಅವರ ಜನಪ್ರಿಯ ಟಿವಿ ಧಾರಾವಾಹಿ. 80ರ ದಶಕದಲ್ಲಿ ದೂರದರ್ಶನ ಚಂದನದಲ್ಲಿ ಪ್ರಸಾರವಾಗುತ್ತಿತ್ತು. ಖ್ಯಾತ ನಟ ಪ್ರಕಾಶ್ ರೈ ಇದರಲ್ಲಿ ಅಭಿನಯಿಸಿದ್ದರು. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಡಾ. ಕೋಟ ಶಿವರಾಮ ಕಾರಂತರ ಕುರಿತು ಸಾಕ್ಷ್ಯಚಿತ್ರವನ್ನು ಸದಾನಂದ ಸುವರ್ಣರು ನಿರ್ದೇಶಿಸಿದ್ದರು.
ಸದಾನಂದ ಸುವರ್ಣ ಅವರು ಓರ್ವ ಪ್ರಯೋಗಶೀಲ ನಿರ್ದೇಶಕರಾಗಿದ್ದರು. ಮುಂಬಯಿ ರಂಗಭೂಮಿಯಲ್ಲಿ ಅತ್ಯಂತ ಕ್ರಿಯಾಶೀಲರಾಗಿದ್ದ ಸುವರ್ಣರು ನಂತರ ಮಂಗಳೂರಿನ ರಂಗಭೂಮಿಗೆ ಬಂದು ರಂಗಭೂಮಿಯಲ್ಲಿ ಹೊಸ ಛಾಪನ್ನು ಒತ್ತಿದವರು. ಮಂಗಳೂರಿನ ಹವ್ಯಾಸಿ ನಟ ನಟಿಯರಿಗೆ ಉರುಳು, ಕೋರ್ಟ್ ಮಾರ್ಷಲ್, ಮಳೆ ನಿಲ್ಲುವ ವರೆಗೆ ಮುಂತಾದ ನಾಟಕಗಳನ್ನು ನಿರ್ದೇಶಿಸಿದ್ದರು.
ರಾಜ್ಯ ಸರ್ಕಾರವು ಇತ್ತೀಚೆಗಷ್ಟೇ ಪ್ರತಿಷ್ಠಿತ ಬಿ.ವಿ.ಕಾರಂತ ಪ್ರಶಸ್ತಿಯನ್ನು ನೀಡಿ ಗೌರವಿಸಿದೆ.
ವಿಜಯ ಕರ್ನಾಟಕ ಪತ್ರಿಕೆಯ ಮಂಗಳೂರು ಆವೃತ್ತಿಯ ಹಿರಿಯ ಉಪ ಸಂಪಾದಕರಾಗಿದ್ದ ದಿ. ಡಾ. ಸೀತಾಲಕ್ಷ್ಮಿ ಕರ್ಕಿಕೋಡಿ ಅವರು ಸದಾನಂದ ಸುವರ್ಣರ ರಂಗ ಸಾಧನೆಯ ಕುರಿತೇ “ರಂಗ ಜಂಗಮ ಸದಾನಂದ ಸುವರ್ಣ” ಅನ್ನುವ ಸಂಶೋಧನಾ ಪ್ರಬಂಧವನ್ನು ಮುಂಬಯಿ ವಿಶ್ವವಿದ್ಯಾಲಯಕ್ಕೆ ಸಲ್ಲಿಸಿ ಡಾಕ್ಟರೇಟ್ ಪಡೆದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು