7:21 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ: ಬೆಂಕಿ ಉಪಯೋಗಿಸದೇ ನಡೆದ ಸ್ಪರ್ಧೆ!

16/07/2024, 18:21

ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿಎಂಡಿ ಕೇಶವ ಪ್ರಸಾದ್ ಮುಳಿಯ ವಹಿಸಿದ್ದರು. ಖ್ಯಾತ ಹಿನ್ನಲೆ ಗಾಯಕಿ ಶ್ವೇತಾ ಪ್ರಭು ಉಪಸ್ಥಿತರಿದ್ದರು.

ಪಾಕೋತ್ಸವದಲ್ಲಿ ಶ್ರೀಮಾನ್ – ಶ್ರೀಮತಿ ವಿಭಾಗದಲ್ಲಿ ಪುಷ್ಪಲತಾ – ಕೃಷ್ಣಾನಂದ ಪ್ರಥಮ, ಸವಿತಾ – ಸುರೇಶ್ ದ್ವಿತೀಯ, ಲಾವಣ್ಯ – ನವೀನ್ ತೃತೀಯ ಸ್ಥಾನ ಪಡೆದರು. ಬಂಧು-ಮಿತ್ರರು ವಿಭಾಗದಲ್ಲಿ ದಿವ್ಯಾ – ಹರ್ಷಿಕಾ ಪ್ರಥಮ, ಹೇಮಾವತಿ – ಜ್ಞಾನೇಶ್ವರಿ – ಮೈತ್ರಿ ಭಟ್ ದ್ವಿತೀಯ, ಮಹಾಲಕ್ಷ್ಮೀ ತೃತೀಯ ಸ್ಥಾನ ಪಡೆದರು. ಲಕ್ಕಿಡ್ರಾದಲ್ಲಿ ಕೃತಿಕಾ ಅಕ್ಷಯ್ ಜೋಶಿ ಪ್ರಥಮ, ಸರೋಜಾ ದ್ವಿತೀಯ ಸ್ಥಾನ ಗಳಿಸಿದರು.
ಪಾಕಶಾಲಾ ನಿರ್ದೇಶಕಿ ವಿನೋದ ವಿ.ಅಡಿಗ ಮಾತನಾಡಿ ಚಿನ್ನ ಮತ್ತು ಹಣವು ಮಹಿಳೆಯರಿಗೆ ತುಂಬಾ ಹತ್ತಿರವಾಗಿದೆ. ಆದರೆ ಇಂದು ಬೆಂಕಿ ಉಪಯೋಗಿಸದೇ ನಡೆದ ಸ್ಪರ್ಧೆಯೂ ತುಂಬಾ ಕುತೂಹಲವಾಗಿದ್ದು, ಹಸಿ ತರಕಾರಿ, ಹಣ್ಣು ಗಳಿಂದ ತಯಾರಿಸಿದ ಆಹಾರವು ಆರೋಗ್ಯಕ್ಕೆ ತುಂಬಾ ಮುಖ್ಯ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸಂಧ್ಯಾ ಜಯರಾಮ್, ಮುಳಿಯ ಜ್ಯುವೆಲ್‌ನ ವೇಣು ಶರ್ಮಾ, ಸುಬ್ರಹ್ಮಣ್ಯ ಭಟ್, ಖಾಸಗಿ ಸುದ್ದಿವಾಹಿನಿ ನಿರೂಪಕಿ ನಮಿತಾ ಜೈನ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು