2:49 AM Thursday23 - April 2026
ಬ್ರೇಕಿಂಗ್ ನ್ಯೂಸ್
ಬಳ್ಳಾರಿ ಜಿಲ್ಲಾಡಳಿತದಿಂದ ಸರಕಾರಿ ಜಮೀನು ಒತ್ತುವರಿ ವಿರುದ್ಧ 3ನೇ ಹಂತದ ಕಾರ್ಯಾಚರಣೆ Chikkamagaluru | ಸಿಇಟಿ ಬರೆಯಲು ಬಂದ ವಿದ್ಯಾರ್ಥಿನಿಯರಿಗೆ ಶಾಕ್: ಮೂಗುತಿಗೆ ಬಿತ್ತು ಗಮ್… ತಮಿಳುನಾಡಿನಲ್ಲಿ 84% ದಾಟಿದ ಮತದಾನ: ಬಂಗಾಳದಲ್ಲಿ 91% ದಾಖಲೆ ಪ್ರಮಾಣದ ವೋಟಿಂಗ್ ತೀರ್ಥಹಳ್ಳಿ | ಆಗುಂಬೆಯ ಲಕ್ಕುಂದದಲ್ಲಿ ವೃದ್ದೆಯ ಕಟ್ಟಿ ಹಾಕಿ ಲಕ್ಷಾಂತರ ರೂ. ಮೌಲ್ಯದ… ಪಕ್ಷ ಕಟ್ಟಲು ಕಾರ್ಯಕರ್ತರು ಇದ್ದಾರೆ, ಜಮೀರ್ ಜೆಡಿಎಸ್‌ಗೆ ಬರೋ ಅವಶ್ಯಕತೆ ಇಲ್ಲ: ನಿಖಿಲ್… ವಿದೇಶಿ ಮಹಿಳೆಯ ಅತ್ಯಾಚಾರ ದೌರ್ಜನ್ಯ ಪ್ರಕರಣ: ‘ದೇವಿ ವಿಲ್ಲಾ’ ಹೋಂಸ್ಟೇ ಪರವಾನಗಿ ರದ್ದು ಬಸವಕಲ್ಯಾಣ ಬಸವೇಶ್ವರ ರಥೋತ್ಸವದಲ್ಲಿ ಭೀಕರ ದುರಂತ: ರಥದ ಚಕ್ರಕ್ಕೆ ಸಿಲುಕಿ ಭಕ್ತನ ಎರಡು… ತಮಿಳುನಾಡಿನಲ್ಲಿ ಮತದಾನ: ಸಿಎಂ ಸ್ಟಾಲಿನ್, ಸೂಪರ್ ಸ್ಟಾರ್ ರಜನೀಕಾಂತ್, ಪ್ರಸಿದ್ಧ ನಟ ವಿಜಯ್… ಪ್ರಧಾನಿ ಮೋದಿಗೆ ಭಯೋತ್ಪಾದಕ ಎಂದು ನಿಂದನೆ: ಎಐಸಿಸಿ ಅಧ್ಯಕ್ಷ ಖರ್ಗೆಗೆ ಚುನಾವಣಾ ಆಯೋಗ… ಚಾಮರಾಜನಗರ | ಮಲೆ ಮಹದೇಶ್ವರ ವನ್ಯಜೀವಿ ಧಾಮದ ದಟ್ಟ ಕಾಡಿನಲ್ಲಿ ಮಾನವನ ಅಸ್ಥಿಪಂಜರ…

ಇತ್ತೀಚಿನ ಸುದ್ದಿ

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ: ಬೆಂಕಿ ಉಪಯೋಗಿಸದೇ ನಡೆದ ಸ್ಪರ್ಧೆ!

16/07/2024, 18:21

ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿಎಂಡಿ ಕೇಶವ ಪ್ರಸಾದ್ ಮುಳಿಯ ವಹಿಸಿದ್ದರು. ಖ್ಯಾತ ಹಿನ್ನಲೆ ಗಾಯಕಿ ಶ್ವೇತಾ ಪ್ರಭು ಉಪಸ್ಥಿತರಿದ್ದರು.

ಪಾಕೋತ್ಸವದಲ್ಲಿ ಶ್ರೀಮಾನ್ – ಶ್ರೀಮತಿ ವಿಭಾಗದಲ್ಲಿ ಪುಷ್ಪಲತಾ – ಕೃಷ್ಣಾನಂದ ಪ್ರಥಮ, ಸವಿತಾ – ಸುರೇಶ್ ದ್ವಿತೀಯ, ಲಾವಣ್ಯ – ನವೀನ್ ತೃತೀಯ ಸ್ಥಾನ ಪಡೆದರು. ಬಂಧು-ಮಿತ್ರರು ವಿಭಾಗದಲ್ಲಿ ದಿವ್ಯಾ – ಹರ್ಷಿಕಾ ಪ್ರಥಮ, ಹೇಮಾವತಿ – ಜ್ಞಾನೇಶ್ವರಿ – ಮೈತ್ರಿ ಭಟ್ ದ್ವಿತೀಯ, ಮಹಾಲಕ್ಷ್ಮೀ ತೃತೀಯ ಸ್ಥಾನ ಪಡೆದರು. ಲಕ್ಕಿಡ್ರಾದಲ್ಲಿ ಕೃತಿಕಾ ಅಕ್ಷಯ್ ಜೋಶಿ ಪ್ರಥಮ, ಸರೋಜಾ ದ್ವಿತೀಯ ಸ್ಥಾನ ಗಳಿಸಿದರು.
ಪಾಕಶಾಲಾ ನಿರ್ದೇಶಕಿ ವಿನೋದ ವಿ.ಅಡಿಗ ಮಾತನಾಡಿ ಚಿನ್ನ ಮತ್ತು ಹಣವು ಮಹಿಳೆಯರಿಗೆ ತುಂಬಾ ಹತ್ತಿರವಾಗಿದೆ. ಆದರೆ ಇಂದು ಬೆಂಕಿ ಉಪಯೋಗಿಸದೇ ನಡೆದ ಸ್ಪರ್ಧೆಯೂ ತುಂಬಾ ಕುತೂಹಲವಾಗಿದ್ದು, ಹಸಿ ತರಕಾರಿ, ಹಣ್ಣು ಗಳಿಂದ ತಯಾರಿಸಿದ ಆಹಾರವು ಆರೋಗ್ಯಕ್ಕೆ ತುಂಬಾ ಮುಖ್ಯ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸಂಧ್ಯಾ ಜಯರಾಮ್, ಮುಳಿಯ ಜ್ಯುವೆಲ್‌ನ ವೇಣು ಶರ್ಮಾ, ಸುಬ್ರಹ್ಮಣ್ಯ ಭಟ್, ಖಾಸಗಿ ಸುದ್ದಿವಾಹಿನಿ ನಿರೂಪಕಿ ನಮಿತಾ ಜೈನ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು