10:12 AM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಬೆಂಗಳೂರು ಮುಳಿಯದಲ್ಲಿ ಮುಳಿಯ ಪಾಕೋತ್ಸವ: ಬೆಂಕಿ ಉಪಯೋಗಿಸದೇ ನಡೆದ ಸ್ಪರ್ಧೆ!

16/07/2024, 18:21

ಬೆಂಗಳೂರು(reporterkarnataka.com): ಮುಳಿಯ ಜ್ಯುವೆಲ್ಸ್ ಹಾಗೂ ಸಂಧ್ಯಾ ಜಯರಾಮ್ ಸಹಯೋಗದಲ್ಲಿ ಡಿಕೆನ್ಸನ್ ರಸ್ತೆಯಲ್ಲಿನ ಮಣಿಪಾಲ್ ಸೆಂಟರ್ ಆವರಣದಲ್ಲಿ ಮುಳಿಯ ಪಾಕೋತ್ಸವ ಭಾನುವಾರ ನಡೆಯಿತು.
ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯಲಕ್ಷ್ಮೀ ಎಂ. ನಡೆಸಿದರು. ಅಧ್ಯಕ್ಷತೆಯನ್ನು ಮುಳಿಯ ಜ್ಯುವೆಲ್ಸ್ ಸಿಎಂಡಿ ಕೇಶವ ಪ್ರಸಾದ್ ಮುಳಿಯ ವಹಿಸಿದ್ದರು. ಖ್ಯಾತ ಹಿನ್ನಲೆ ಗಾಯಕಿ ಶ್ವೇತಾ ಪ್ರಭು ಉಪಸ್ಥಿತರಿದ್ದರು.

ಪಾಕೋತ್ಸವದಲ್ಲಿ ಶ್ರೀಮಾನ್ – ಶ್ರೀಮತಿ ವಿಭಾಗದಲ್ಲಿ ಪುಷ್ಪಲತಾ – ಕೃಷ್ಣಾನಂದ ಪ್ರಥಮ, ಸವಿತಾ – ಸುರೇಶ್ ದ್ವಿತೀಯ, ಲಾವಣ್ಯ – ನವೀನ್ ತೃತೀಯ ಸ್ಥಾನ ಪಡೆದರು. ಬಂಧು-ಮಿತ್ರರು ವಿಭಾಗದಲ್ಲಿ ದಿವ್ಯಾ – ಹರ್ಷಿಕಾ ಪ್ರಥಮ, ಹೇಮಾವತಿ – ಜ್ಞಾನೇಶ್ವರಿ – ಮೈತ್ರಿ ಭಟ್ ದ್ವಿತೀಯ, ಮಹಾಲಕ್ಷ್ಮೀ ತೃತೀಯ ಸ್ಥಾನ ಪಡೆದರು. ಲಕ್ಕಿಡ್ರಾದಲ್ಲಿ ಕೃತಿಕಾ ಅಕ್ಷಯ್ ಜೋಶಿ ಪ್ರಥಮ, ಸರೋಜಾ ದ್ವಿತೀಯ ಸ್ಥಾನ ಗಳಿಸಿದರು.
ಪಾಕಶಾಲಾ ನಿರ್ದೇಶಕಿ ವಿನೋದ ವಿ.ಅಡಿಗ ಮಾತನಾಡಿ ಚಿನ್ನ ಮತ್ತು ಹಣವು ಮಹಿಳೆಯರಿಗೆ ತುಂಬಾ ಹತ್ತಿರವಾಗಿದೆ. ಆದರೆ ಇಂದು ಬೆಂಕಿ ಉಪಯೋಗಿಸದೇ ನಡೆದ ಸ್ಪರ್ಧೆಯೂ ತುಂಬಾ ಕುತೂಹಲವಾಗಿದ್ದು, ಹಸಿ ತರಕಾರಿ, ಹಣ್ಣು ಗಳಿಂದ ತಯಾರಿಸಿದ ಆಹಾರವು ಆರೋಗ್ಯಕ್ಕೆ ತುಂಬಾ ಮುಖ್ಯ, ಪೌಷ್ಟಿಕಾಂಶಯುಕ್ತ ಆಹಾರ ಸೇವನೆ ಬಗ್ಗೆ ಮಕ್ಕಳಲ್ಲಿ ಜಾಗೃತಿ ಮೂಡಿಸಬೇಕು ಎಂದು ತಿಳಿಸಿದರು.
ಸಂಧ್ಯಾ ಜಯರಾಮ್, ಮುಳಿಯ ಜ್ಯುವೆಲ್‌ನ ವೇಣು ಶರ್ಮಾ, ಸುಬ್ರಹ್ಮಣ್ಯ ಭಟ್, ಖಾಸಗಿ ಸುದ್ದಿವಾಹಿನಿ ನಿರೂಪಕಿ ನಮಿತಾ ಜೈನ್ ಮತ್ತಿತರರು ಇದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು