8:53 PM Friday27 - March 2026
ಬ್ರೇಕಿಂಗ್ ನ್ಯೂಸ್
ಕೇಂದ್ರ ಸರಕಾರವನ್ನು ಟೀಕೆ ಮಾಡುವುದರಲ್ಲೇ 3 ವರ್ಷಗಳ ಕಾಲಹರಣ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ… ಕೈ ನಾಯಕರ ಸಂಧಾನ ಯಶಸ್ವಿ: ದಾವಣಗೆರೆ ದಕ್ಷಿಣ ಬಂಡಾಯ ಅಭ್ಯರ್ಥಿ ಪೈಲ್ವಾನ್ ಸ್ಪರ್ಧೆಯಿಂದ… ಚಿಕ್ಕಮಗಳೂರು: ಬಿಸಿಲ ಧಗೆಗೆ ಹೊತ್ತಿ ಉರಿಯುತ್ತಿರುವ ಮೀಸಲು ಅರಣ್ಯ; ಅಪಾಯದಲ್ಲಿ ಜೀವ ಸಂಕುಲ 1ನೇ ತರಗತಿ ದಾಖಲಾತಿ ವಯೋಮಿತಿಯಲ್ಲಿ 60 ದಿನಗಳ ಸಡಿಲಿಕೆ: ಸಚಿವ ಮಧು ಬಂಗಾರಪ್ಪ… ತುಮಕೂರು | ಮಧ್ಯರಾತ್ರಿ ಕುಡುಕ ಪುಂಡರ ಅಟ್ಟಹಾಸ: 10ಕ್ಕೂ ಅಧಿಕ ವಾಹನಗಳ ಗ್ಲಾಸ್… ರಾಜ್ಯ ಸರ್ಕಾರಕ್ಕೆ ಪ್ರತಿಷ್ಠೆಯಾದ ಉಪ ಚುನಾವಣೆ: ಪೈಲ್ವಾನ್ ಮನವೊಲಿಸಲು ಜಮೀರ್‌ಗೆ ಮುಖ್ಯಮಂತ್ರಿ ಸೂಚನೆ ಮಾಜಿ ಶಾಸಕರ ಪುತ್ರನ ಕೊಲೆ ಪ್ರಕರಣ: ಮಹಿಳೆ ಸೇರಿ ಮೂವರು ಪೊಲೀಸ್ ವಶಕ್ಕೆ ಹೈಕಮಾಂಡ್ ಹೇಳಿದಾಗ ಡಿಕೆಶಿ ಸಿಎಂ: ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ ಕಾಂಗ್ರೆಸ್ ಮೋಸ ಮಾಡಿದೆ; ನಾಮಪತ್ರ ಹಿಂತೆಗೆಯುವ ಮಾತೇ ಇಲ್ಲ: ತೊಡೆ ತಟ್ಟಿದ ಪೈಲ್ವಾನ್‌ ದಾವಣಗೆರೆ ದಕ್ಷಿಣ: ಬಿಜೆಪಿ ಅಭ್ಯರ್ಥಿಯ ಪತ್ನಿಗೆ ಮುಸ್ಲಿಂ ಮಹಿಳೆಯರಿಂದ ಭವ್ಯ ಸ್ವಾಗತ, ಉಡಿ…

ಇತ್ತೀಚಿನ ಸುದ್ದಿ

ಭಾರೀ ಮಳೆಗೆ ಅಂಗಳ ಕುಸಿತ: 2 ಕುಟುಂಬಗಳ ರಾತೋರಾತ್ರಿ ಸ್ಥಳಾಂತರ; 8 ವರ್ಷಗಳಿಂದ ಇದೇ ಗೋಳು

16/07/2024, 20:56

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಗುಡ್ಡೆತೋಟದಲ್ಲಿ 17 ಮನೆಗಳು ಸುಮಾರು 8 ವರ್ಷದಿಂದ ಅಪಾಯದಲ್ಲಿದ್ದು, ಅದರಲ್ಲಿ ನಿನ್ನೆ ರಾತ್ರಿ ಸುರಿದ ಗಾಳಿ ಮಳೆಗೆ ಮನೆಯೊಂದರ ಮುಂಭಾಗದ ಅಂಗಳ ಕುಸಿದಿದ್ದು ಮನೆ ಮಂದಿಯನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ.


ರಾತ್ರಿ ಸುಮಾರು 10.30ಕ್ಕೆ ನಾರಾಯಣ ಮತ್ತು ಐತ್ತಪ್ಪ ಅವರ ಕುಟುಂಬವನ್ನು ಪಂಚಾಯತಿ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದೆ.
ಕೊಪ್ಪ ತಹಶೀಲ್ದಾರ್ ಹುಸೇನ್, ಅರಣ್ಯ ನೂಡಲ್ ಅಧಿಕಾರಿ ರಂಗನಾಥ್, ಕೊಪ್ಪ ಇಓ ನವೀನ್, ಎಐ ಸುಧೀರ್, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರು ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಳೆದ 8 ವರ್ಷಗಳಿಂದ ಮಳೆಗಾಲದಲ್ಲಿ ಮಾತ್ರ ಪರ್ಯಾಯ ವ್ಯವಸ್ಥೆ ಮಾಡುತ್ತಾ ಬಂದಿದ್ದು ಇದುವರೆಗೂ ಶಾಶ್ವತ ಪರಿಹಾರ
ನೀಡಿಲ್ಲ.
ಈ ಬಾರಿ ಶಾಶ್ವತ ಪರಿಹಾರ ಸಿಗದೆ ಇದ್ದರೆ ಮುಂದಿನ ವರ್ಷವೂ ಇದೇ ಆದರೆ ನಾವು ಅದೇ ಮನೆಯಲ್ಲಿ ಸಾಯುತ್ತೇವೆಯೆ ಹೊರತು ಮನೆ ಖಾಲಿ ಮಾಡುವುದಿಲ್ಲ..
ನಮಗೆ ಏನೇ ಅದರೂ ಸರ್ಕಾರವೇ ಹೊಣೆ ಎನ್ನುತ್ತಿದ್ದಾರೆ ನಾರಾಯಣ ಮತ್ತು ಐತಪ್ಪ ಕುಟುಂಬದವರು.
ಈಗ ಸದ್ಯ ಪಂಚಾಯತಿ ಕಟ್ಟಡಕ್ಕೆ ಸ್ಥಳಾಂತರ ಮಾಡಲಾಗಿದ್ದು ಅವರಿಗೆ ಬೇಕಾದ ಕೆಲ ವ್ಯವಸ್ಥೆಗಳನ್ನು ಪಂಚಾಯಿತಿ ವತಿಯಿಂದ ಮಾಡಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು