3:58 AM Saturday7 - February 2026
ಬ್ರೇಕಿಂಗ್ ನ್ಯೂಸ್
ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ರಾಜ್ಯ ಆಹಾರ ಆಯೋಗದ ಅಧ್ಯಕ್ಷರ ತಂಡದಿಂದ ವಿವಿಧೆಡೆ ದಿಢೀರ್ ಭೇಟಿ: ಪರಿಶೀಲನೆ *ಕರಾವಳಿವರೆಗೆ ವಂದೇ ಭಾರತ್ ವಿಸ್ತರಿಸುವಂತೆ ರೈಲ್ವೆ ಸಚಿವರಿಗೆ ಸಂಸದ ಶ್ರೀನಿವಾಸ ಪೂಜಾರಿ ಮನವಿ* ಅನೈತಿಕ ಸಂಬಂಧ ಕೊಲೆಗೆ ಕಾರಣ?: ಖ್ಯಾತ ಜ್ಯೋತಿಷಿ ಕಮಲಾಕರ್ ಭಟ್ ಸೇರಿ 7… ಎಸಿ ಕೋರ್ಟ್ ಕೇಸ್: ಎರಡೂವರೆ ವರ್ಷದಲ್ಲಿ ಅಸಾಧ್ಯವಾದದ್ದನ್ನು ಸಾಧ್ಯವಾಗಿಸಿದ್ದೇವೆ: ಸಚಿವ ಕೃಷ್ಣ ಬೈರೇಗೌಡರು…

ಇತ್ತೀಚಿನ ಸುದ್ದಿ

ಭಾರೀ ಗಾಳಿ ಮಳೆ: ಮನೆಯ ಮೇಲ್ಛಾವಣಿ ಕುಸಿತ; ಅದೃಷ್ಟವಶಾತ್ ಮನೆ ಮಂದಿ ಪಾರು

16/07/2024, 21:54

ಶಶಿ ಬೆತ್ತದಕೊಳಲು ಕೊಪ್ಪ

info.reporterkarnataka@gmail.com

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಅವ್ಯಾಹತ ಮಳೆಯಿಂದ ಕೊಪ್ಪ ತಾಲೂಕಿನ ಗುಡ್ಡೆತೋಟ ಗ್ರಾಮ ಪಂಚಾಯತಿ ವ್ಯಾಪ್ತಿಯ ಅಲೆಹೊಂಡ ಗ್ರಾಮದ ಮನೆಯೊಂದರ ಮೇಲ್ಛಾವಣಿ ಕುಸಿದಿದೆ.
ಗಾಳಿ ಮಳೆ ಅಬ್ಬರದಿಂದ ರಾತ್ರಿ 2.30 ಸುಮಾರಿಗೆ ಸೀತು ಎಂಬವರ ಮೇಲ್ಫಾವಣಿ ಕುಸಿದಿದ್ದು ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿಯಾಗಿಲ್ಲ.


ರಾತ್ರಿ ಮಲಗಿದ ವೇಳೆ ಕುಸಿದಿದ್ದರಿಂದ ಎದ್ದು ಹೊರ ಓಡಿ ಹೋಗಿದ್ದಾರೆ. ನಂತರ ನೋಡಿದಾಗ ಮನೆ ಮೇಲ್ಛಾವಣಿ ಸಂಪೂರ್ಣ ಬಿದ್ದಿದ್ದು ಗೋಡೆ ಕೂಡ ಬಿರುಕುಗೊಂಡಿದೆ.
ಸೀತು ಹಾಗೂ ಸೀತು ಅವರ ಗಂಡ ಬೆಳ್ಳಯ್ಯ, ಹೇಮಾವತಿ(ಸೊಸೆ) ಮಕ್ಕಳು ಮಲಗಿದ್ದ ವೇಳೆಯೆ ಘಟನೆ ನಡೆದಿದೆ.
ಹೆಂಚು ಹಾಗೂ ಕೆಲ ಸಾಮಾಗ್ರಿಗಳು ಹಾನಿಯಾಗಿದೆ.
ಘಟನೆ ನಡೆದ ಮೇಲೆ ಪಕ್ಕದ ಮನೆಗೆ ಹೋಗಿ ಉಳಿದಿದ್ದಾರೆ.
ಸ್ಥಳಕ್ಕೆ ಗುಡ್ಡೆತೋಟ ಗ್ರಾಮ ಪಂಚಾಯಿತಿ ಪಿಡಿಓ ಶೋಭಾ, ಗ್ರಾಮ ಪಂಚಾಯತಿ ಸದಸ್ಯರಾದ ಕೀರ್ತಿರಾಜ್, ಶೈಲಾ, ರವಿ, ರೇಖಾ ಹಾಗೂ ಗ್ರಾಮಸ್ಥರು ಭೇಟಿ ನೀಡಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು