11:33 AM Tuesday3 - March 2026
ಬ್ರೇಕಿಂಗ್ ನ್ಯೂಸ್
ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ… ನಾಪೋಕ್ಲು: ಹಿಂದೂ ಸಂಗಮ ಸಮಾವೇಶ ಪ್ರಚಾರ ವೇಳೆ ಮಾತಿನ ಚಕಮಕಿ; ಓರ್ವನಿಗೆ ಗಾಯ ಯೋಗೀಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿಗೆ ಸುಪ್ರೀಂ ಕೋರ್ಟ್‌ನಿಂದ ಜಾಮೀನು… “ನಾನು ಭ್ರಷ್ಟನಲ್ಲ”: ದಿಲ್ಲಿ ಅಬಕಾರಿ ಪ್ರಕರಣದಲ್ಲಿ ಖುಲಾಸೆಗೊಂಡ ಅರವಿಂದ್ ಕೇಜ್ರಿವಾಲ್ ಕಣ್ಣೀರು ಪಾದಚಾರಿಗೆ ಸ್ಕೂಟಿ ಡಿಕ್ಕಿ: ಅದೇ ವ್ಯಕ್ತಿ ಮೇಲೆ ಹರಿದ ಕಾರು; ಸ್ಥಳದಲ್ಲೇ ಸಾವು ಬ್ಯಾಚುಲರ್ ಲೈಫ್‌ಗೆ ಕೊಡಗಿನ ಬೆಡಗಿ ಗುಡ್‌ಬೈ: ರಶ್ಮಿಕಾ – ದೇವರಕೊಂಡ ದಂಪತಿಗೆ ಅಂಬಾನಿ,… ಮಸ್ಕಿ ಇರಕಲ್ ಶ್ರೀ ಮಠದ ಜಾತ್ರಾ ಮಹೋತ್ಸವ: ಹಸೆಮಣೆ ಏರಿದ 12 ಜೋಡಿಗಳು ಜವಾಹರಲಾಲ್ ನೆಹರು ತಾರಾಲಯದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂಭ್ರಮ; ವೈಜ್ಞಾನಿಕ ಮನೋಭಾವಕ್ಕೆ ಸಚಿವ…

ಇತ್ತೀಚಿನ ಸುದ್ದಿ

ದ.ಕ. ಜಿಲ್ಲೆಯಲ್ಲಿ ಪಿಯುಸಿ ಷರತ್ತು ಬದ್ದ ಆರಂಭ: ಜಿಲ್ಲಾಧಿಕಾರಿ

23/08/2021, 23:00

ಮಂಗಳೂರು(reporterkarnataka.com) ರಾಜ್ಯದ ಹಲವು ಜಿಲ್ಲೆಗಳಲ್ಲಿ 9, 10ನೇ ತರಗತಿಗಳು ಹಾಗೂ ಪಿಯುಸಿ ಪ್ರಾರಂಭಕ್ಕೆ ಸರ್ಕಾರದ ಹಂತದಲ್ಲಿ ಈಗಾಗಲೇ ನಿರ್ಣಯಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಸೂಚ್ಯಂಕ ಹೆಚ್ಚಿರುವ ಕಾರಣ ಕೆಲವು ಷರತ್ತುಗೊಳಪಟ್ಟು ಹಂತ ಹಂತವಾಗಿ ಪಿಯುಸಿ ಕಾಲೇಜುಗಳನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹೇಳಿದರು.

ವಿದ್ಯಾರ್ಥಿಗಳು ಕಡ್ಡಾಯವಾಗಿ ಆರ್‍ಟಿಪಿಸಿಆರ್ ವರದಿಯನ್ನು ತರಬೇಕು. ಸೋಂಕಿತರು 7 ದಿನ ಕಡ್ಡಾಯವಾಗಿ ಕ್ವಾರಂಟೈನ್‍ನಲ್ಲಿರಬೇಕು. ಕ್ವಾಂರಟೈನ್‍ನಿಂದ ಹೊರಬಂದ ನಂತರ ಮತ್ತೊಮ್ಮೆ ಆರ್‍ಟಿಪಿಸಿಆರ್ ತಪಾಸಣೆ ಮಾಡಿಸಿಕೊಳ್ಳಬೇಕು. ರೋಗ ಲಕ್ಷಣಗಳು ಕಂಡು ಬಂದರೇ ಸ್ಥಳಿಯ ಆಡಳಿತಕ್ಕೆ ಕೂಡಲೇ ತಿಳಿಸಬೇಕು, ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂಬ ಷರತ್ತಿಗೊಳಪಟ್ಟು ಕಾಲೇಜು ಪ್ರಾರಂಭಕ್ಕೆ ಅನುಮತಿ ನೀಡಲಾಗುವುದು. ಇದರ ಫಲಶ್ರುತಿ ಆಧಾರದ ಮೇಲೆ 9 ಹಾಗೂ 10ನೇ ತರಗತಿಗಳ ಆರಂಭಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಈ ಸಂದಿಗ್ದ ಪರಿಸ್ಥಿತಿಯಲ್ಲಿ ವಿದ್ಯಾರ್ಥಿಗಳು ಕೋವಿಡ್‍ನಿಂದ ಸುರಕ್ಷಿತವಾಗಿ ಕಾಲೇಜಿಗೆ ಹಾಜರಾಗುವ ಬಗ್ಗೆ ಸಂಬಂಧಿಸಿದ ಕಾಲೇಜುಗಳು ತಮ್ಮ ವ್ಯಾಪ್ತಿಯಲ್ಲಿ ಕೈಗೊಳ್ಳಬಹುದಾದ ಕ್ರಮಗಳ ಕುರಿತು ವರದಿಯನ್ನು ಸಿದ್ಧಪಡಿಸಿ, ಅದನ್ನು ಶಿಕ್ಷಣ ಇಲಾಖೆಯ  ಅಧಿಕಾರಿಗಳೊಂದಿಗೆ ಚರ್ಚಿಸಿ ಸರ್ಕಾರದ ಎಸ್.ಒ.ಪಿಯಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಅವರು ಸೂಚಿಸಿದರು.

ಸಚಿವರಾದ ಅಂಗಾರ ಅವರು ಮಾತನಾಡಿ, ಕೋವಿಡ್ ಸೋಂಕಿನ ಈ ಸಂದರ್ಭದಲ್ಲಿ ಕಾಲೇಜುಗಳ ಕೈಗೊಳ್ಳುವ ನಿಯಮಗಳನ್ನು ಕೂಡಲೇ ತಿಳಿಸಬೇಕು, ಈ ಹಿಂದೆ ಎಸ್.ಎಸ್.ಎಲ್.ಸಿ ಹಾಗೂ ಇತರೆ ಪರೀಕ್ಷೆಗಳನ್ನು ನಡೆಸಿದ ವೇಳೆ ಕೈಗೊಂಡ ಕ್ರಮಗಳನ್ನು ಪಾಲಿಸುವಂತೆ ಅವರು ಸಲಹೆ ನೀಡಿದರು.

ಶಾಸಕರಾದ ವೇದವ್ಯಾಸ್ ಕಾಮತ್, ಭರತ್ ಶೆಟ್ಟಿ, ಉಮಾನಾಥ್ ಕೋಟ್ಯಾನ್, ರಾಜೇಶ್ ನಾಯ್ಕ್, ಹರೀಶ್ ಪೂಂಜ, ವಿಧಾನ ಪರಿಷತ್ ಸದಸ್ಯರಾದ ಸಂಜೀವ ಮಠಂದೂರು, ಪ್ರತಾಪ್ ಚಂದ್ರ ನಾಯಕ್ ಮಾತನಾಡಿದರು.

ಮೇಯರ್ ಪ್ರೇಮಾನಂದ ಶೆಟ್ಟಿ, ಪೊಲೀಸ್ ವರಿಷ್ಠಾಧಿಕಾರಿ ಋಷಿಕೇಶ್ ಭಗವಾನ್ ಸೋನವಾಣೆ, ಮಹಾನಗರ ಪಾಲಿಕೆ ಆಯುಕ್ತ ಅಕ್ಷಯ್ ಶ್ರೀಧರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಆನಂದ್ ಕುಮಾರ್ ವೇದಿಕೆಯಲ್ಲಿದ್ದರು.  

ಅಪರ ಜಿಲ್ಲಾಧಿಕಾರಿ ಪ್ರಜ್ಞಾ ಅಮ್ಮೆಂಬಳ ಸೇರಿದಂತೆ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಸಭೆಯಲ್ಲಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು