11:40 PM Friday18 - September 2026
ಬ್ರೇಕಿಂಗ್ ನ್ಯೂಸ್
ಕೊಳತ್ತಮಜಲು ಅಬ್ದುಲ್ ರಹ್ಮಾನ್ ಕೊಲೆ ಆರೋಪಿಗಳಿಗೆ ಜಾಮೀನು: ಸರ್ಕಾರದ ವಿರುದ್ಧ ಎಸ್‌ಡಿಪಿಐ ಆಕ್ರೋಶ ಮಂಗಳೂರು ಜಿಲ್ಲಾ ಕಾರಾಗೃಹದ ಸುತ್ತಮುತ್ತ ಮೊಬೈಲ್ ನೆಟ್‌ವರ್ಕ್ ವ್ಯತ್ಯಯ ತಗ್ಗಿಸಲು ಕ್ರಮ: ಗೃಹ… ಶಾರ್ಜಾದ ‘ಸ್ಟ್ರಿಂಗ್ ಟ್ರಾನ್ಸ್‌ಪೋರ್ಟ್’ ವ್ಯವಸ್ಥೆ: ಟೂರಿಸಂ ಸಚಿವ ಕೆ.ಜೆ. ಜಾರ್ಜ್ ನೇತೃತ್ವದ ನಿಯೋಗ… ರಾಜ್ಯ ಸಚಿವ ಸಂಪುಟ ಸಭೆ | ಸಂಚಾರ ವ್ಯತ್ಯಯ; ಬದಲಿ ಮಾರ್ಗ ವ್ಯವಸ್ಥೆ ಹ್ಯಾಂಡ್ಪಿಕ್ಡ್: ಬೆಂಗಳೂರಿನಲ್ಲಿ ತಾಜಾ ಹಿಟ್ಟು, ಮಸಾಲೆ ಹಾಗೂ ಎಣ್ಣೆ ಉತ್ಪನ್ನ ಮಾರಾಟ ಆರಂಭ ‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:…

ಇತ್ತೀಚಿನ ಸುದ್ದಿ

ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ: ಸಿಎಂ ಕುರಿತು ಮಂಗಳೂರಿನಲ್ಲಿ ಕೇಂದ್ರ ಸಚಿವ ವಿ. ಸೋಮಣ್ಣ

17/07/2024, 15:04

ಮಂಗಳೂರು(reporterkarnataka.com): ಹಳೆಯ ಸಿದ್ದರಾಮಯ್ಯ ಕಳೆದು ಹೋಗಿದ್ದಾರೆ. ನಾನು ಅವರೊಂದಿಗೆ ಮಂತ್ರಿಯಾಗಿ, ಎಂಪಿಯಾಗಿ ಕಾರ್ಯ ನಿರ್ವಹಿಸಿದ್ದೇನೆ. ವಾಸ್ತವ ಸತ್ಯವನ್ನು ಯಾರು ಕೂಡ
ಮುಚ್ಚಿಡಲು ಸಾಧ್ಯವಿಲ್ಲ. ಸಿದ್ದರಾಮಯ್ಯ ನವರು ತಿದ್ದಿಕೊಂಡರೆ ಅವರು ಹಳೆಯ ಸಿದ್ದರಾಮಯ್ಯ ಆಗುತ್ತಾರೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಹೇಳಿದರು.
ಮಂಗಳೂರು ಸೆಂಟ್ರಲ್ ಹಾಗೂ ಜಂಕ್ಷನ್ ರೈಲ್ವೆ ನಿಲ್ದಾಣಕ್ಕೆ ಭೇಟಿ ನೀಡಿ ಪ್ಲಾಟ್ ಫಾರ್ಮ್, ಆಹಾರ ವ್ಯವಸ್ಥೆ, ಸ್ವಚ್ಛತೆ ಬಗ್ಗೆ ಪರಿಶೀಲನೆ ನಡೆಸಿದ ಬಳಿಕ ಅವರು ಮಾಧ್ಯಮಗಳ ಜತೆ ಮಾತನಾಡಿದರು.
ಎನ್ ಡಿಆರ್ ಎಫ್, ಎಸ್ ಡಿ ಆರ್ ಎಫ್ ಗಳು ಹೇಗೆ ಕಾರ್ಯ ನಿರ್ವಹಿಸುತ್ತದೆಯೋ ಅದೇ ರೀತಿ ನಮ್ಮ ರೈಲ್ವೆ ಇಲಾಖೆಯಲ್ಲಿಯೂ ವಿಪತ್ತು ನಿರ್ವಹಣಾ ತಂಡ ಕಾರ್ಯ ನಿರ್ವಹಿಸುತ್ತವೆ. ಅದಕ್ಕಾಗಿ ವಾರ್ ರೂಮ್ ಗಳನ್ನು ತೆರೆದಿದ್ದೇವೆ. ಅದೇ ರೀತಿ ಪ್ರತಿ ಯೊಂದು ಎಲ್ಲ ಕಡೆಯಲ್ಲೂ ಮುನ್ನೆಚ್ಚರಿಕಾ ಕ್ರಮಗಳನ್ನು ತೆಗೆದುಕೊಂಡಿದ್ದೇವೆ, ಈ ಬಾರಿ ಅತೀ ಹೆಚ್ಚು ಮಳೆಯಾಗುತ್ತಿದೆ. ಜಿಲ್ಲಾಧಿಕಾರಿಗಳ ಜೊತೆ ನಮ್ಮ ಇಲಾಖೆಯು ಕೈ ಜೋಡಿಸಲಿದೆ. ಎಂದು ಅವರು ಹೇಳಿದರು.
ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ, ಶಾಸಕ ವೇದವ್ಯಾಸ್ ಕಾಮತ್ ಮುಂತಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು